Andolana originals

ರಾಸುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ.

ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ ಎಂಬ ಮಾಹಿತಿ ಹೆಬ್ಬಾಳು ಠಾಣಾ ಪೊಲೀಸರಿಗೆ ಬಂದಿದೆ. ಕೂಡಲೇ ಜಾಗೃತರಾದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸೆ. ೨೩ರಂದು ರಾತ್ರಿ ೮. ೩೦ರಲ್ಲಿ ಹೆಬ್ಬಾಳು ರಿಂಗ್ ರಸ್ತೆಯ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಅಲ್ಲಿ ೨೫ ರಾಸುಗಳನ್ನು ತುಂಬಿ ಸಾಗಿಸುತ್ತಿರುವುದು ಕಂಡು ಬಂದಿದೆ. ಪೊಲೀಸರು ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದು ರಾಸುಗಳನ್ನು ರಕ್ಷಿಸಿದ್ದಾರೆ.

ಯುವ ವೈದ್ಯರಿಗೆ ೫೦ ಲಕ್ಷ ರೂ. ವಂಚನೆ ಮೈಸೂರು: ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸು ವುದಾಗಿ ನಂಬಿಸಿ ಯುವ ವೈದ್ಯರೊಬ್ಬರಿಂದ ದುಷ್ಕರ್ಮಿ ಗಳು ೫೦ ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸಿದ್ದಾರ್ಥನಗರದ ನಿವಾಸಿ ಡಾ. ನಿಶಾಂತ್ ಎಂಬವರೇ ವಂಚನೆಗೆ ಒಳಗಾದವರು. ಬೆಂಗಳೂರು ಮೂಲದ ಪ್ರದೀಪ್ ಕುಮಾರ್ ಹಾಗೂ ಶ್ರುತಿ ಎಂಬವರ ವಿರುದ್ಧ ಇದೀಗ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ. ಡಾ. ನಿಶಾಂತ್ ಕುಟುಂಬದವರಿಗೆ ಆರೋಪಿಗಳ ಪರಿಚಯವಾಗಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ್ದ ನಿಶಾಂತ್‌ಗೆ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸುವುದಾಗಿ ಅವರ ಪೋಷಕರನ್ನು ನಂಬಿಸಿದ್ದಾರೆ. ಹೀಗಾಗಿ ನಿಶಾಂತ್ ಪೋಷಕರು ಹಂತ ಹಂತವಾಗಿ ಆರೋಪಿಗಳಿಗೆ ೫ ಲಕ್ಷ ರೂ. ಅನ್ನು ನಗದಾಗಿ ಹಾಗೂ ೪೫ ಲಕ್ಷ ರೂ. ಹಣವನ್ನು ಆರ್ ಟಿಜಿಎಸ್ ಮೂಲಕ ಕಳುಹಿಸಿದ್ದಾರೆ. ಆದರೆ, ಅವರ ಮಗನಿಗೆ ಸೀಟ್ ದೊರಕಿಲ್ಲ. ಹೀಗಾಗಿ ಅವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

 

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

1 hour ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

2 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

2 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

2 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

2 hours ago