Andolana originals

ರಾಸುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ.

ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ ಎಂಬ ಮಾಹಿತಿ ಹೆಬ್ಬಾಳು ಠಾಣಾ ಪೊಲೀಸರಿಗೆ ಬಂದಿದೆ. ಕೂಡಲೇ ಜಾಗೃತರಾದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸೆ. ೨೩ರಂದು ರಾತ್ರಿ ೮. ೩೦ರಲ್ಲಿ ಹೆಬ್ಬಾಳು ರಿಂಗ್ ರಸ್ತೆಯ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಅಲ್ಲಿ ೨೫ ರಾಸುಗಳನ್ನು ತುಂಬಿ ಸಾಗಿಸುತ್ತಿರುವುದು ಕಂಡು ಬಂದಿದೆ. ಪೊಲೀಸರು ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದು ರಾಸುಗಳನ್ನು ರಕ್ಷಿಸಿದ್ದಾರೆ.

ಯುವ ವೈದ್ಯರಿಗೆ ೫೦ ಲಕ್ಷ ರೂ. ವಂಚನೆ ಮೈಸೂರು: ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸು ವುದಾಗಿ ನಂಬಿಸಿ ಯುವ ವೈದ್ಯರೊಬ್ಬರಿಂದ ದುಷ್ಕರ್ಮಿ ಗಳು ೫೦ ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸಿದ್ದಾರ್ಥನಗರದ ನಿವಾಸಿ ಡಾ. ನಿಶಾಂತ್ ಎಂಬವರೇ ವಂಚನೆಗೆ ಒಳಗಾದವರು. ಬೆಂಗಳೂರು ಮೂಲದ ಪ್ರದೀಪ್ ಕುಮಾರ್ ಹಾಗೂ ಶ್ರುತಿ ಎಂಬವರ ವಿರುದ್ಧ ಇದೀಗ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ. ಡಾ. ನಿಶಾಂತ್ ಕುಟುಂಬದವರಿಗೆ ಆರೋಪಿಗಳ ಪರಿಚಯವಾಗಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ್ದ ನಿಶಾಂತ್‌ಗೆ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸುವುದಾಗಿ ಅವರ ಪೋಷಕರನ್ನು ನಂಬಿಸಿದ್ದಾರೆ. ಹೀಗಾಗಿ ನಿಶಾಂತ್ ಪೋಷಕರು ಹಂತ ಹಂತವಾಗಿ ಆರೋಪಿಗಳಿಗೆ ೫ ಲಕ್ಷ ರೂ. ಅನ್ನು ನಗದಾಗಿ ಹಾಗೂ ೪೫ ಲಕ್ಷ ರೂ. ಹಣವನ್ನು ಆರ್ ಟಿಜಿಎಸ್ ಮೂಲಕ ಕಳುಹಿಸಿದ್ದಾರೆ. ಆದರೆ, ಅವರ ಮಗನಿಗೆ ಸೀಟ್ ದೊರಕಿಲ್ಲ. ಹೀಗಾಗಿ ಅವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

 

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago