Andolana originals

ರಾಸುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ.

ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ ಎಂಬ ಮಾಹಿತಿ ಹೆಬ್ಬಾಳು ಠಾಣಾ ಪೊಲೀಸರಿಗೆ ಬಂದಿದೆ. ಕೂಡಲೇ ಜಾಗೃತರಾದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸೆ. ೨೩ರಂದು ರಾತ್ರಿ ೮. ೩೦ರಲ್ಲಿ ಹೆಬ್ಬಾಳು ರಿಂಗ್ ರಸ್ತೆಯ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಅಲ್ಲಿ ೨೫ ರಾಸುಗಳನ್ನು ತುಂಬಿ ಸಾಗಿಸುತ್ತಿರುವುದು ಕಂಡು ಬಂದಿದೆ. ಪೊಲೀಸರು ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದು ರಾಸುಗಳನ್ನು ರಕ್ಷಿಸಿದ್ದಾರೆ.

ಯುವ ವೈದ್ಯರಿಗೆ ೫೦ ಲಕ್ಷ ರೂ. ವಂಚನೆ ಮೈಸೂರು: ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸು ವುದಾಗಿ ನಂಬಿಸಿ ಯುವ ವೈದ್ಯರೊಬ್ಬರಿಂದ ದುಷ್ಕರ್ಮಿ ಗಳು ೫೦ ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸಿದ್ದಾರ್ಥನಗರದ ನಿವಾಸಿ ಡಾ. ನಿಶಾಂತ್ ಎಂಬವರೇ ವಂಚನೆಗೆ ಒಳಗಾದವರು. ಬೆಂಗಳೂರು ಮೂಲದ ಪ್ರದೀಪ್ ಕುಮಾರ್ ಹಾಗೂ ಶ್ರುತಿ ಎಂಬವರ ವಿರುದ್ಧ ಇದೀಗ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ. ಡಾ. ನಿಶಾಂತ್ ಕುಟುಂಬದವರಿಗೆ ಆರೋಪಿಗಳ ಪರಿಚಯವಾಗಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ್ದ ನಿಶಾಂತ್‌ಗೆ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸುವುದಾಗಿ ಅವರ ಪೋಷಕರನ್ನು ನಂಬಿಸಿದ್ದಾರೆ. ಹೀಗಾಗಿ ನಿಶಾಂತ್ ಪೋಷಕರು ಹಂತ ಹಂತವಾಗಿ ಆರೋಪಿಗಳಿಗೆ ೫ ಲಕ್ಷ ರೂ. ಅನ್ನು ನಗದಾಗಿ ಹಾಗೂ ೪೫ ಲಕ್ಷ ರೂ. ಹಣವನ್ನು ಆರ್ ಟಿಜಿಎಸ್ ಮೂಲಕ ಕಳುಹಿಸಿದ್ದಾರೆ. ಆದರೆ, ಅವರ ಮಗನಿಗೆ ಸೀಟ್ ದೊರಕಿಲ್ಲ. ಹೀಗಾಗಿ ಅವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

 

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

9 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

11 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

12 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

13 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

14 hours ago