Andolana originals

ಲಾರಿ – ಕಾರು ನಡುವೆ ಡಿಕ್ಕಿ; ಇಬ್ಬರು ಸಾವು

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ.

ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ ಎಂಬವರ ಮಗ ಶಶಾಂಕ್(೨೬) ಮೃತಪಟ್ಟವರು. ಪೊಲೀಸ್ ಪೇದೆ ರಮೇಶ್ ಅವರ ಮಗ ಗೌತಮ್ ಎಂಬಾ ತನ ಕಾಲು ಮುರಿದಿದೆ. ಆಯುಧ ಪೂಜೆಯ ಅಂಗವಾಗಿ ಮೂವರು ಕಾರನ್ನು ಸ್ವಚ್ಛಗೊಳಿಸಿ ಕೊಂಡು ಬರಲು ಗ್ಯಾರೇಜ್‌ಗೆ ಹೋಗಿದ್ದರು ಎನ್ನಲಾಗಿದೆ.

ನಂತರ ಕಾರಿನಲ್ಲಿ ರಾತ್ರಿ ೭. ೩೦ರಲ್ಲಿ ಮೂಡ್ಲುಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆ ಮೇಲೆ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಕಾರು ಚಾಲನೆ ಮಾಡುತ್ತಿದ್ದ ರೋಹನ್ ಮತ್ತು ಶಶಾಂಕ್‌ಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟರು. ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಗೌತಮ್‌ನ ಕಾಲಿಗೆ ತೀವ್ರ ಪೆಟ್ಟು ಬಿದ್ದಿದೆ. ರಸ್ತೆಯಲ್ಲಿ ತೆರಳುತ್ತಿದ್ದವರು ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಚಾರ ಠಾಣೆ ಪೊಲೀಸರು ಗಾಯಾಳು ಹಾಗೂ ಶವಗಳನ್ನು ಸಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

andolana

Recent Posts

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

3 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago