Andolana originals

ಲಾರಿ – ಕಾರು ನಡುವೆ ಡಿಕ್ಕಿ; ಇಬ್ಬರು ಸಾವು

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ.

ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ ಎಂಬವರ ಮಗ ಶಶಾಂಕ್(೨೬) ಮೃತಪಟ್ಟವರು. ಪೊಲೀಸ್ ಪೇದೆ ರಮೇಶ್ ಅವರ ಮಗ ಗೌತಮ್ ಎಂಬಾ ತನ ಕಾಲು ಮುರಿದಿದೆ. ಆಯುಧ ಪೂಜೆಯ ಅಂಗವಾಗಿ ಮೂವರು ಕಾರನ್ನು ಸ್ವಚ್ಛಗೊಳಿಸಿ ಕೊಂಡು ಬರಲು ಗ್ಯಾರೇಜ್‌ಗೆ ಹೋಗಿದ್ದರು ಎನ್ನಲಾಗಿದೆ.

ನಂತರ ಕಾರಿನಲ್ಲಿ ರಾತ್ರಿ ೭. ೩೦ರಲ್ಲಿ ಮೂಡ್ಲುಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆ ಮೇಲೆ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಕಾರು ಚಾಲನೆ ಮಾಡುತ್ತಿದ್ದ ರೋಹನ್ ಮತ್ತು ಶಶಾಂಕ್‌ಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟರು. ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಗೌತಮ್‌ನ ಕಾಲಿಗೆ ತೀವ್ರ ಪೆಟ್ಟು ಬಿದ್ದಿದೆ. ರಸ್ತೆಯಲ್ಲಿ ತೆರಳುತ್ತಿದ್ದವರು ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಚಾರ ಠಾಣೆ ಪೊಲೀಸರು ಗಾಯಾಳು ಹಾಗೂ ಶವಗಳನ್ನು ಸಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

8 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

11 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

11 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

11 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

12 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

13 hours ago