ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ
ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ಈತ ಬುಧವಾರ ಸಂಜೆ ಕಬಿನಿ ನಾಲೆಯ ಬದಿಯ ರಸ್ತೆಯಲ್ಲಿ ಬರುವಾಗ ಆಯತಪ್ಪಿ ಕಾಲು ಜಾರಿ ನಾಲೆಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಬಾಲಕನ ಶವ ಬಸವಟ್ಟಿ ಬಳಿಯ ಕಬಿನಿ ನಾಲೆಯಲ್ಲಿ ಪತ್ತೆಯಾಗಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಾಜುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವವನ್ನು ನಾಲೆಯಿಂದ ಹೊರ ತೆಗೆಸಿ ಸಿಮ್ಸ್ ಬೋಧನಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಸಂಜೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಹನ ಹರಿದು ಮಗು ಸಾವು
ಚಾಮರಾಜನಗರ: ತಾಲ್ಲೂಕಿನ ಕಮರವಾಡಿ ಗ್ರಾಮದಲ್ಲಿ ಖಾಸಗಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿದೆ. ಗ್ರಾಮದ ನವೀನ್ ಎಂಬವರ ಪುತ್ರ ಆರ್ಯ ಶೆಟ್ಟಿ ಮೃತಪಟ್ಟ ಮಗು. ನವೀನ್ ಅವರ ಮಗಳನ್ನು ಸಂತೇಮರಹಳ್ಳಿಯ ಖಾಸಗಿ ಶಾಲೆಗೆ ಕರೆದೊಯ್ಯಲು ಅವರ ಮನೆ ಮುಂದೆ ಶಾಲಾ ವಾಹನ ಬಂದಿದೆ. ಚಾಲಕ ರಸ್ತೆ ಬದಿ ಮಗು ನಿಂತಿರುವುದನ್ನು ಗಮನಿಸದೆ ವಾಹನ ಚಲಾಯಿಸಿದ್ದರಿಂದ ಮಗುವಿನ ಮೇಲೆ ವಾಹನ ಹರಿದಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…