Andolana originals

ಚಾಮರಾಜನಗರದಲ್ಲಿ ಪ್ರತ್ಯೇಕ ಪ್ರಕರಣ: ಇಬ್ಬರು ಮಕ್ಕಳು ಸಾವು

ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ

ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ಈತ ಬುಧವಾರ ಸಂಜೆ ಕಬಿನಿ ನಾಲೆಯ ಬದಿಯ ರಸ್ತೆಯಲ್ಲಿ ಬರುವಾಗ ಆಯತಪ್ಪಿ ಕಾಲು ಜಾರಿ ನಾಲೆಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಬಾಲಕನ ಶವ ಬಸವಟ್ಟಿ ಬಳಿಯ ಕಬಿನಿ ನಾಲೆಯಲ್ಲಿ ಪತ್ತೆಯಾಗಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ತಾಜುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವವನ್ನು ನಾಲೆಯಿಂದ ಹೊರ ತೆಗೆಸಿ ಸಿಮ್ಸ್ ಬೋಧನಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಸಂಜೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನ ಹರಿದು ಮಗು ಸಾವು

ಚಾಮರಾಜನಗರ: ತಾಲ್ಲೂಕಿನ ಕಮರವಾಡಿ ಗ್ರಾಮದಲ್ಲಿ ಖಾಸಗಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿದೆ. ಗ್ರಾಮದ ನವೀನ್ ಎಂಬವರ ಪುತ್ರ ಆರ್ಯ ಶೆಟ್ಟಿ ಮೃತಪಟ್ಟ ಮಗು. ನವೀನ್ ಅವರ ಮಗಳನ್ನು ಸಂತೇಮರಹಳ್ಳಿಯ ಖಾಸಗಿ ಶಾಲೆಗೆ ಕರೆದೊಯ್ಯಲು ಅವರ ಮನೆ ಮುಂದೆ ಶಾಲಾ ವಾಹನ ಬಂದಿದೆ. ಚಾಲಕ ರಸ್ತೆ ಬದಿ ಮಗು ನಿಂತಿರುವುದನ್ನು ಗಮನಿಸದೆ ವಾಹನ ಚಲಾಯಿಸಿದ್ದರಿಂದ ಮಗುವಿನ ಮೇಲೆ ವಾಹನ ಹರಿದಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

andolana

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

3 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

5 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

10 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

10 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

11 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

11 hours ago