Andolana originals

ಚಾಮರಾಜನಗರದಲ್ಲಿ ಪ್ರತ್ಯೇಕ ಪ್ರಕರಣ: ಇಬ್ಬರು ಮಕ್ಕಳು ಸಾವು

ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ

ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ಈತ ಬುಧವಾರ ಸಂಜೆ ಕಬಿನಿ ನಾಲೆಯ ಬದಿಯ ರಸ್ತೆಯಲ್ಲಿ ಬರುವಾಗ ಆಯತಪ್ಪಿ ಕಾಲು ಜಾರಿ ನಾಲೆಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಬಾಲಕನ ಶವ ಬಸವಟ್ಟಿ ಬಳಿಯ ಕಬಿನಿ ನಾಲೆಯಲ್ಲಿ ಪತ್ತೆಯಾಗಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ತಾಜುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವವನ್ನು ನಾಲೆಯಿಂದ ಹೊರ ತೆಗೆಸಿ ಸಿಮ್ಸ್ ಬೋಧನಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಸಂಜೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನ ಹರಿದು ಮಗು ಸಾವು

ಚಾಮರಾಜನಗರ: ತಾಲ್ಲೂಕಿನ ಕಮರವಾಡಿ ಗ್ರಾಮದಲ್ಲಿ ಖಾಸಗಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿದೆ. ಗ್ರಾಮದ ನವೀನ್ ಎಂಬವರ ಪುತ್ರ ಆರ್ಯ ಶೆಟ್ಟಿ ಮೃತಪಟ್ಟ ಮಗು. ನವೀನ್ ಅವರ ಮಗಳನ್ನು ಸಂತೇಮರಹಳ್ಳಿಯ ಖಾಸಗಿ ಶಾಲೆಗೆ ಕರೆದೊಯ್ಯಲು ಅವರ ಮನೆ ಮುಂದೆ ಶಾಲಾ ವಾಹನ ಬಂದಿದೆ. ಚಾಲಕ ರಸ್ತೆ ಬದಿ ಮಗು ನಿಂತಿರುವುದನ್ನು ಗಮನಿಸದೆ ವಾಹನ ಚಲಾಯಿಸಿದ್ದರಿಂದ ಮಗುವಿನ ಮೇಲೆ ವಾಹನ ಹರಿದಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago