Andolana originals

ನಿಗಮ -ಮಂಡಳಿ ಅಧ್ಯಕ್ಷ ಗಾದಿಗೆ ೨೦ ಆಕಾಂಕ್ಷಿಗಳ ಪೈಪೋಟಿ

ಕೆ.ಬಿ.ರಮೇಶನಾಯಕ

ಮೈಸೂರು: ರಾಜ್ಯದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಅವಧಿಯಿಂದ ಖಾಲಿ ಉಳಿದಿರುವ ನಿಗಮ- ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಯಾವುದೇ ಕ್ಷಣದಲ್ಲಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿ ಸುವ ಸಾಧ್ಯತೆ ಇದ್ದು, ಮೈಸೂರು ಭಾಗದ ಎರಡು ಹುದ್ದೆಗಳು ಸೇರಿದಂತೆ ಇನ್ನಿತರ ರಾಜ್ಯಮಟ್ಟದ ನಿಗಮ- ಮಂಡಳಿ, ಪ್ರಾಽಕಾರಗಳ ಅಧ್ಯಕ್ಷ ಸ್ಥಾನಕ್ಕಾಗಿ ೨೦ಕ್ಕೂ ಹೆಚ್ಚು ಆಕಾಂಕ್ಷಿಗಳ ನಡುವೆ ಪೈಪೋಟಿ ಶುರುವಾಗಿದೆ.

ಅಧ್ಯಕ್ಷ ಸ್ಥಾನಗಳ ಹುದ್ದೆ ಮತ್ತು ಸದಸ್ಯ ಸ್ಥಾನಗಳಿಗೆ ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದಿಂದ ೨೦೦ ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಅವರ ಪೈಕಿ ೨೦ ಮಂದಿ ಹಿರಿಯ ಮುಖಂಡರು ಅಧ್ಯಕ್ಷ ಸ್ಥಾನಕ್ಕಾಗಿ ಲಾಭಿ ಶುರುಮಾಡಿದ್ದಾರೆ. ದಿಲ್ಲಿಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ನಡೆಸಿರುವ ಮಾತುಕತೆ ಫಲವಾಗಿ ಅಂತಿಮವಾಗಿ ಹೈಕಮಾಂಡ್‌ನಿಂದ ಅಂಕಿತ ಬೀಳುತ್ತಿದ್ದಂತೆ, ಸರ್ಕಾರ ಆಯಾ ಇಲಾಖಾವಾರು ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಿದೆ ಎಂದು ಹೇಳಲಾಗಿದೆ.

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿದ ಕಾಂಗ್ರೆಸ್ ಪಕ್ಷವು ನಿಗಮ-ಮಂಡಳಿಗಳು, ಪ್ರಾಧಿಕಾರ, ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲ. ಆದರೆ, ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನವನ್ನು ತಣಿಸಲು ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ, ಬಸವರಾಜ ರಾಯರಡ್ಡಿ, ಸಿ.ಪುಟ್ಟರಂಗಶೆಟ್ಟಿ, ಪಿ.ಎಂ.ನರೇಂದ್ರಸ್ವಾಮಿ, ಅನಿಲ್ ಚಿಕ್ಕಮಾದು, ಎನ್.ಎ. ಹ್ಯಾರೀಸ್, ಕೆ.ಎಂ.ಶಿವಲಿಂಗೇಗೌಡ, ಟಿ.ಸಿ.ರಘು ಮೂರ್ತಿ ಸೇರಿದಂತೆ ೨೫ಕ್ಕೂ ಹಿರಿಯ ಶಾಸಕರನ್ನು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಮರೀಗೌಡ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಅಯೂಬ್ ಖಾನ್, ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ(ಕಾಡಾ) ಅಧ್ಯಕ್ಷರನ್ನಾಗಿ ಚಾಮರಾಜನಗರ ಜಿಲ್ಲೆಯ ಮರಿಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ಮುಡಾ ದಲ್ಲಿ ನಡೆದ ಹಲವಾರು ಬೆಳವಣಿಗೆಗಳಿಂದಾಗಿ ಕೆ.ಮರೀಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಧ್ಯಕ್ಷ ಸ್ಥಾನ ಖಾಲಿ ಉಳಿದಿದ್ದರೆ, ಎರಡು ವರ್ಷಗಳಿಂದ ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್(ಮೈಲ್ಯಾಕ್), ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನೇಮಕವನ್ನೇ ಮಾಡಿಲ್ಲ. ಇದೀಗ ಮತ್ತೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಪ್ರಕ್ರಿಯೆ ಆರಂಭಿಸಲು ಹೈಕಮಾಂಡ್ ಒಪ್ಪಿಗೆ ಕೂಡ ಪಡೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ನೇಮಕಾತಿ ಕುರಿತಂತೆ ಚರ್ಚೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸುತ್ತಿರುವುದರಿಂದ ಅನೇಕರಿಗೆ ಶುಭ ಸುದ್ದಿ ಸಿಗಲಿದೆ.

ಯಾರ‍್ಯಾರ ನಡುವೆ ಪೈಪೋಟಿ?:

ಮೈಸೂರು ನಗರದ ಎರಡು ಪ್ರಾಧಿಕಾರಗಳ ಅಧ್ಯಕ್ಷಗಾದಿ ಸೇರಿದಂತೆ ರಾಜ್ಯಮಟ್ಟದ ಪ್ರಮುಖ ನಿಗಮ-ಮಂಡಳಿಗಳು, ಪ್ರಾಧಿಕಾರಗಳು, ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯ ಸ್ಥಾನಕ್ಕೆ ತಮ್ಮನ್ನು ನೇಮಕ ಮಾಡಬೇಕೆಂದು ೨೦೦ಕ್ಕೂ ಹೆಚ್ಚು ಅರ್ಜಿಗಳು ಕೆಪಿಸಿಸಿಗೆ ಸಲ್ಲಿಕೆಯಾಗಿವೆ. ಅವುಗಳ ಪೈಕಿ ಅಧ್ಯಕ್ಷಗಾದಿಗೆ ೨೦ಕ್ಕೂ ಹೆಚ್ಚು ಮಂದಿ ತಮ್ಮದೇ ಆದ ಶಕ್ತಿ, ಸಾಮರ್ಥ್ಯದೊಂದಿಗೆ ಪೈಪೋಟಿ ನಡೆಸುತ್ತಿದ್ದಾರೆ.

ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ಮಾಜಿ ಮಹಾಪೌರರಾದ ಬಿ.ಕೆ.ಪ್ರಕಾಶ್. ಮೋದಾಮಣಿ, ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ನಾರಾಯಣ, ಅನಂತು, ಆರಿ- ಹುಸೇನ್, ಪುರುಷೋತ್ತಮ್, ಮಾಜಿ ಉಪ ಮಹಾಪೌರರಾದ ಬಿ.ಸಿದ್ದರಾಜು, ಪುಷ್ಪವಲ್ಲಿ, ಜಿಪಂ ಮಾಜಿ ಅಧ್ಯಕ್ಷರಾದ ಕೂರ್ಗಳ್ಳಿ ಮಹದೇವು, ಬಿ.ಎಂ. ರಾಮು, ಲತಾ ಸಿದ್ದಶೆಟ್ಟಿ, ಜಿ.ಪಂ.ಮಾಜಿ ಸದಸ್ಯರಾದ ರಾಕೇಶ್ ಪಾಪಣ್ಣ, ಜವರಪ್ಪ, ಲೇಖಾ ವೆಂಕಟೇಶ್, ಶಶಿರೇಖಾ, ಸುಧಾ ಮಹದೇವಯ್ಯ, ಕಡಕೊಳ ನಾರಾಯಣ್, ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ತಿ.ನರಸೀಪುರ ತಾ.ಪಂ. ಮಾಜಿ ಅಧ್ಯಕ್ಷ ಮರಯ್ಯ, ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾದ ಐಶ್ವರ್ಯ ಮಹದೇವು, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ನಾಗವಾಲ ನರೇಂದ್ರ, ತಾಪಂ ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ವೀರಶೈವ-ಲಿಂಗಾಯತ ಮುಖಂಡ ವರುಣ ಮಹೇಶ್, ಪಿರಿಯಾಪಟ್ಟಣದ ಮುಖಂಡ ಎಚ್.ಡಿ.ಗಣೇಶ್, ಒಕ್ಕಲಿಗ ಸಮುದಾಯದ ಕೃಷ್ಣಕುಮಾರ್ ಸಾಗರ್, ನಾಯಕ ಸಮುದಾಯದ ಉದ್ಬೂರು ಕೃಷ್ಣನಾಯಕ, ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಶ್ರೀನಾಥ್ ಬಾಬು, ಶಾಸಕ ಕೆ.ಹರೀಶ್ ಗೌಡರ ಆಪ್ತ ಮಾರ್ಕೆಟ್ ದಿನೇಶ್ ಅವರುಗಳು ಅಧ್ಯಕ್ಷ ಗಾದಿಗಾಗಿ ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ. ಹಾಲಿ ಅಧ್ಯಕ್ಷರಲ್ಲಿ ಒಬ್ಬರು ಅಲ್ಪಸಂಖ್ಯಾತ, ಒಬ್ಬರು ವೀರಶೈವ ವರ್ಗದವರಿದ್ದು, ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

4 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago