Andolana originals

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆದಾಯ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಮೂರು ತಿಂಗಳಲ್ಲಿ ಅಂದಾಜು ೨೦ಕೋಟಿ ರೂ. ನಷ್ಟವಾಗಿದೆ.

ಮುಡಾಕ್ಕೆ ಬರುತ್ತಿದ್ದ ಆದಾಯ ನಿಂತು ಹೋಗಿರುವ ಕಾರಣ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಸಂಪನ್ಮೂಲ ಇಲ್ಲದಂತಾಗಿದೆ. ಪ್ರಾಽಕಾರದ ಸಭೆ ನಡೆಯದಿರುವುದರಿಂದ ಪ್ರಾಽಕಾರದಿಂದ ಅನುಮೋದನೆ ಪಡೆದು ಖಾಸಗಿ ಬಡಾವಣೆಗಳನ್ನು ರಚನೆ ಮಾಡಿರುವ ಮಾಲೀಕರ ೨ ಸಾವಿರಕ್ಕೂ ಹೆಚ್ಚು ನಿವೇಶನಗಳ ಬಿಡುಗಡೆಗೆ ಕಡತಗಳು ಕಾದು ಕುಳಿತಿರುವುದು ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಲು ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ವಿಜಯನಗರ ಬಡಾವಣೆಯಲ್ಲಿ ೧೪ ಬದಲಿ ನಿವೇಶನಗಳನ್ನು ಮಂಜೂರು ಮಾಡಿದ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದ್ದಂತೆ ರಾಜ್ಯ ಸರ್ಕಾರ ಜುಲೈ ೨ರಂದು ಮುಡಾ ೫೦:೫೦ ನಿವೇಶನ ಹಂಚಿಕೆ ರದ್ದತಿ ಸೇರಿ ಎಲ್ಲಾ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಆದೇಶ ನೀಡಿತ್ತು. ಈ ಆದೇಶ ಹೊರ ಬೀಳುತ್ತಿದ್ದಂತೆ ಮುಡಾದ ಹಿಂದಿನ ಸಭೆಯಲ್ಲಿ ಅನುಮೋದನೆಗೊಂಡ ಕಡತಗಳ ವಿಲೇವಾರಿ ಸೇರಿದಂತೆ ಪ್ರತಿಯೊಂದು ಕೆಲಸ ಕಾರ್ಯಗಳಿಗೂ ಬ್ರೇಕ್ ಬಿದ್ದಿದೆ.

ನಿತ್ಯ ೩೦ ಲಕ್ಷ ರೂ. ನಷ್ಟ: ಮುಡಾ ರಚನೆ ಮಾಡಿದ ಹಂಚ್ಯಾ-ಸಾತಗಳ್ಳಿ ಎ-ವಲಯ, ಬಿ-ವಲಯ, ವಿಜಯನಗರ ನಾಲ್ಕನೇ ಹಂತ ಎರಡನೇ ಘಟ್ಟ, ವಸಂತನಗರ, ಲಾಲ್ ಬಹದ್ದೂರ್ ಶಾಸಿನಗರ, ಶಾಂತವೇರಿ ಗೋಪಾಲಗೌಡ ನಗರ, ದೇವನೂರು ಮೂರನೇ ಹಂತದ ಬಡಾವಣೆಗಳ ಖಾತೆಗಳನ್ನು ಮಾಡಿಕೊಡುತ್ತಿರುವುದನ್ನು ಬಿಟ್ಟರೆ ೧,೫೦೦ಕ್ಕೂ ಹೆಚ್ಚು ಖಾಸಗಿ ಬಡಾವಣೆಗಳ ನಿವೇಶನ ಖಾತೆ ಮತ್ತು ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

ಖಾಸಗಿ ಬಡಾವಣೆಗಳಿಗೆ ನಿವೇಶನ ಬಿಡುಗಡೆ ಮಾಡಿದ ಮೇಲೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುತ್ತಿತ್ತು. ನಂತರ, ಮುಡಾದಲ್ಲಿ ಉಪ ನೋಂದಣಾಽಕಾರಿಗಳ ಕಚೇರಿಯಲ್ಲಿ ನೋಂದಣಿಯ ಮೊತ್ತದ ಆಧಾರದಮೇಲೆ ಎಸ್‌ಆರ್ ದರದಂತೆ ೦. ೫ರಷ್ಟು ಮುಡಾಕ್ಕೆ ಖಾತಾ ವರ್ಗಾವಣೆ ಶುಲ್ಕವನ್ನು ಪಾವತಿಸಬೇಕಿದ್ದರಿಂದ ಅಂದಾಜು ೧೫ರಿಂದ ೨೦ ಸಾವಿರ ರೂ. ಸಂಗ್ರಹವಾಗುತ್ತಿತ್ತು. ಪ್ರತಿನಿತ್ಯ ೨೦೦ ನಿವೇಶನಗಳ ಖಾತೆ ಮತ್ತು ವರ್ಗಾವಣೆ ಖಾತೆ ನಡೆಯುತ್ತಿದ್ದರಿಂದ ಮುಡಾಕ್ಕೆ ೩೦ರಿಂದ ೩೫ ಲಕ್ಷ ರೂ. ಆದಾಯ ಸಂಗ್ರಹವಾಗುತ್ತಿತ್ತು.

ಈಗ ಖಾಸಗಿ ಬಡಾವಣೆಗಳ ನಿವೇಶನ ಖಾತೆಗಳಿಗೆ ಸಂಪೂರ್ಣ ತಡೆ ಹಾಕಿರುವ ಕಾರಣ ಮುಡಾ ಬಡಾವಣೆಗಳ ಖಾತೆಯ ಆದಾಯ ಅಂದಾಜು ೧ರಿಂದ ೨ ಲಕ್ಷ ರೂ. ಹೊರತುಪಡಿಸಿದರೆ ಬೇರೆ ಯಾವುದೇ ಶುಲ್ಕ ಬಾರದಿರುವುದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ನಗರ ಯೋಜನಾ ಶಾಖೆಗೆ ಬರುತ್ತಿದ್ದ ಆದಾಯದಲ್ಲೂ ಗಣನೀಯವಾಗಿ ಇಳಿದಿದೆ. ಕಟ್ಟಡ ವಿನ್ಯಾಸ ಅನುಮೋದನೆ, ಕಟ್ಟಡ ವಿನ್ಯಾಸ ಅನುಮೋದನೆಯಿಂದ ಬರುತ್ತಿದ್ದ ಶುಲ್ಕದಲ್ಲೂ ಇಳಿಕೆಯಾಗಿರುವುದರಿಂದ ಪ್ರತಿನಿತ್ಯ ಅಂದಾಜು ೫ ಲಕ್ಷ ರೂ. ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಇದಲ್ಲದೆ, ಕಟ್ಟಡ ಪೂರ್ಣಗೊಂಡ ಮನೆಗಳಿಗೆ ಸಿಆರ್ ಕೂಡ ನೀಡದ ಕಾರಣ ಮನೆ ಕಂದಾಯದ ಸಂಗ್ರಹಕ್ಕೂ ಕೊಕ್ಕೆ ಬಿದ್ದಿದೆ. ಬಿಡುಗಡೆಗೆ ಕಾದಿರುವ ೨ ಸಾವಿರ ನಿವೇಶನ: ಮುಡಾದಿಂದ ಅನುಮೋದನೆ, ನಕ್ಷೆ ಅನುಮೋದನೆ, ಏಕ ನಿವೇಶನ ವಿನ್ಯಾಸ ಅನುಮೋದನೆ ಪಡೆದಿರುವ ಖಾಸಗಿ ಬಡಾವಣೆಗಳಿಗೆ ಮೊದಲ ಕಂತಿನಲ್ಲಿ ಬಿಡುಗಡೆ ಮಾಡಬೇಕಿರುವ ಅಂದಾಜು ೨ ಸಾವಿರ ನಿವೇಶನಗಳು ಕಡತಗಳು ಕಾದು ಕುಳಿತಿವೆ.

ಖಾಸಗಿ ಬಡಾವಣೆಗಳ ನಿವೇಶನಗಳಿಗೆ ಖಾತೆ ಮಾಡಿಕೊಡುವುದಕ್ಕೆ ಮುಡಾದಲ್ಲಿ ಅವಕಾಶವಿಲ್ಲ. ಸ್ಥಳೀಯ ಸಂಸ್ಥೆಗಳಿಂದ ಖಾತೆ ಆಗಬೇಕಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾಽಕಾರಿಗಳ ಗಮನಕ್ಕೆ ತರಲಾಗಿದೆ. ನಮಗೆ ಆದಾಯ ಬರಬೇಕೆಂಬ ಕಾರಣಕ್ಕಾಗಿ ನಿಯಮವನ್ನು ಮೀರಿ ಮಾಡಲು ಸಾಧ್ಯವಾಗದು. ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಿದ ಮೇಲೆ ಖಾತೆ ಮಾಡಲಾಗುತ್ತದೆ. – ರಘುನಂದನ್, ಆಯುಕ್ತರು,ಮುಡಾ.

ಖಾತೆ ಮಾಡಿಕೊಡದ ಕಾರಣ ನಿವೇಶನ ಖರೀದಿಸಿರುವವರು, ಡೆವಲಪರ್‌ಗಳು, ಸರ್ಕಾರಕ್ಕೂ ನಷ್ಟವಾಗಿದೆ. ನಿವೇಶನಕ್ಕೆ ಮುಂಗಡ ಕಟ್ಟಿರುವ ಜನರು ಖಾತೆ ಮಾಡಿಸಿಕೊಡುವಂತೆ ಡೆವಲಪರ್ ಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ನಿವೇಶನಗಳು ನೋಂದಣಿಯಾದರೆ ಸರ್ಕಾರಕ್ಕೆ ಮುಡಾಕ್ಕೆ ಆದಾಯ ಬರುವ ಜತೆಗೆ ನಿವೇಶನ ಖರೀದಿಸಿದವರಿಗೂ ನೆರವಾಗಲಿದೆ. – ಎಸ್. ಎಂ. ಶಿವಪ್ರಕಾಶ್, ರಿಯಲ್ ಎಸ್ಟೇಟ್ ಉದ್ಯಮಿ.

 

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago