Andolana originals

ಅಯ್ಯಾಜಯ್ಯನ ಹುಂಡಿ, ಕೇರ್ಗಳ್ಳಿ ಕೆರೆ ಕಲುಷಿತ ತಡೆಗೆ 24.80 ಕೋಟಿ ರೂ.ಪ್ಲಾನ್

ಮೈಸೂರು: ಲಕ್ಷ ಲಕ್ಷ ಹಣ ಕೊಟ್ಟು ನಿವೇಶನ ಖರೀದಿಸಿ, ಸುಂದರವಾದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರೂ ಒಳಚರಂಡಿ (ಯುಜಿಡಿ) ಸಮಸ್ಯೆ ಎದುರಿ ಸುತ್ತಿರುವ ನಿವಾಸಿಗಳ ಬವಣೆ ಕೊನೆಗೂ ದೂರವಾಗುವ ಕಾಲ ಸನ್ನಿಹಿತವಾಗಿದೆ. ಯುಜಿಡಿ ಸಮಸ್ಯೆಯಿಂದ ಪುರಾತನ ಕಾಲದ ಅಯ್ಯಾಜಯ್ಯನ ಹುಂಡಿ,ಕೇರ್ಗಳ್ಳಿ ಕೆರೆಗಳು ಕಲುಷಿತಗೊಳ್ಳುವ ಜತೆಗೆ ನಿವಾಸಿಗಳ ನಿದ್ರಾಭಂಗಕ್ಕೆ ಕಾರಣವಾಗಿದ್ದ ಯುಜಿಡಿ ಸಮಸ್ಯೆ ನೀಗಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 24.80 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಣಾ ಘಟಕಕ್ಕೆ ಸಾಗಿಸಲು ಒಳಚರಂಡಿ ಕೊಳವೆ ಅಳವಡಿಸಲು ಕರ್ನಾಟಕ

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ತಕ್ಷಣವೇ ತಾಂತ್ರಿಕ ಟೆಂಡರ್ ಕರೆಯಲು ಅಽಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ದಿನದಿಂದ ದಿನಕ್ಕೆ ಖಾಸಗಿ ಬಡಾವಣೆಗಳು ನಿರೀಕ್ಷೆಗೂ ಮೀರಿ ಅಭಿವೃದ್ಧಿಯಾಗುತ್ತಿವೆ. ಮುಡಾ ಬಡಾವಣೆಗಳಿಗಿಂತ ಖಾಸಗಿ ಗೃಹ ನಿರ್ಮಾಣ ಸಹಕಾರ ಸಂಘಗಳು ಬಡಾವಣೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿವೆ. ಯಾವುದೇ ಮೂಲ ಸೌಕರ್ಯಗಳು ಇಲ್ಲದೇ ಇದ್ದರೂ ಹೊರವಲಯದಲ್ಲಿ ನಿವೇಶನ ಖರೀದಿಸಿ ಮನೆ ಕಟ್ಟಿರುವ ನಿವಾಸಿಗಳ ಗೋಳು ಹೇಳತೀರದಾಗಿದೆ.

ನ್ಯಾಯಾಂಗ ಬಡಾವಣೆ, ಬಡಗನಹುಂಡಿ, ರೂಪಾನಗರ, ರೈಲ್ವೆ ಬಡಾವಣೆ ಸೇರಿದಂತೆ ಇನ್ನಿತರ ಬಡಾವಣೆಗಳಲ್ಲಿ ಯುಜಿಡಿ ಸಂಪರ್ಕ ಇಲ್ಲದ ಕಾರಣ ನೇರವಾಗಿ ಅಯ್ಯಾಜಯ್ಯನ ಹುಂಡಿ ಕೆರೆ ಮತ್ತು ಕೇರ್ಗಳ್ಳಿಗೆ ಸೇರುತ್ತಿದೆ. ಇದರಿಂದಾಗಿ ಕೆರೆಗಳು ಕಲುಷಿತಗೊಳ್ಳುವ ಜತೆಗೆ ಕುಡಿಯುವ ನೀರಿನ ಸಂಪರ್ಕವಿರುವ ಕೊಳವೆ ಮಾರ್ಗಗಳ ಮೇಲೂ ಪರಿಣಾಮ ಬೀರಿದೆ. ಹೀಗಾಗಿ, ಒಳಚರಂಡಿ ನಿರ್ಮಾಣ ಮಾಡುವಂತೆ ಸ್ಥಳೀಯ ನಿವಾಸಿಗಳು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಅವರ ಮೇಲೆ ನಿರಂತರವಾಗಿ ಒತ್ತಡ ಹೇರುವ ಜತೆಗೆ ಮೈಸೂರು ನಗರಾಭಿವೃದ್ಧಿ ಪ್ರಾಽಕಾರದ ಅಧ್ಯಕ್ಷರು, ಆಯುಕ್ತರಿಗೂ ಮನವಿ ಸಲ್ಲಿಸುತ್ತಲೇ ಬಂದಿದ್ದರು.

ಆದರೆ, ಇದೀಗ ಜಿ. ಟಿ. ದೇವೇಗೌಡರ ಅವಿರತ ಪ್ರಯತ್ನದ -ಲವಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ೨೪. ೮೦ ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಯ ಡಿಪಿಆರ್ ತಯಾರಿಸಿ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿದೆ. ಸಚಿವರ ಅನುಮೋದನೆ, ಮುಖ್ಯಮಂತ್ರಿಗಳ ಒಪ್ಪಿಗೆ ಪಡೆಯುತ್ತಿದ್ದಂತೆ ಟೆಂಡರ್ ಪ್ರಕ್ರಿಯೆ ಆರಂಭಿಸಲು ತಯಾರಿ ಮಾಡಲಾಗಿದೆ.

ಯೋಜನೆಯಲ್ಲಿ ಏನೇನು ಕಾಮಗಾರಿಗಳು:
ಕೆ. ಸಾಲುಂಡಿ ಮತ್ತು ನಂಜರಾಜನಹುಂಡಿಯಲ್ಲಿ ಆಂತರಿಕ ಕೊಳವೆ ಮಾರ್ಗ ಹಾಗೂ ೬೦೦ ಮಿ. ಮೀ, ೭೦೦ ಮಿ. ಮೀ ಮತ್ತು ೮೦೦ ಮಿ. ಮೀ ವ್ಯಾಸದ ಆರ್‌ಸಿಸಿ, ಎಸ್‌ಪಿ-೩ ಔಟ್-ಲ್ ಕೊಳವೆಗಳನ್ನು ಒದಗಿಸಿ ಅಳವಡಿಸುವುದು. ಕೇರ್ಗಳ್ಳಿಯಿಂದ ಅಯ್ಯಾಜಯ್ಯನ ಹುಂಡಿಯ ಬಳಿಯಲ್ಲಿ ನಿರ್ಮಾಣಗೊಳ್ಳುವ ಪ್ರಸ್ತಾಪಿತ ತೇವ ಬಾವಿವರೆಗೆ ಆಳುಗುಂಡಿಗಳ ನಿರ್ಮಾಣ, ಅಯ್ಯಾಜಯ್ಯನ ಹುಂಡಿ ಬಳಿಯಲ್ಲಿ ೯ ಮೀಟರ್ ವ್ಯಾಸದ ತೇವ ಬಾವಿಯೊಂದಿಗೆ ಪ್ರಾಥಮಿಕ ಶುದ್ಧೀಕರಣ ಘಟಕಗಳ ನಿರ್ಮಾಣ ಮತ್ತು ವಿದ್ಯುದ್ದೀಕರಣ ಕಾಮಗಾರಿ ಮಾಡಲಾಗುತ್ತದೆ. ದಟ್ಟಗಳ್ಳಿ ಎಂಯುಎಸ್‌ಎಸ್‌ನಿಂದ ಅಯ್ಯಾಜಯ್ಯನ ಹುಂಡಿಯಲ್ಲಿನ ತೇವ ಬಾವಿಯವರೆಗೆ ೧೧ ಕೆವಿ ಎಕ್ಸ್‌ಪ್ರೆಸ್‌ಫೀಡರ್ ಸಂಪರ್ಕ ಮತ್ತು ೨೫೦ ಕೆವಿಎ ಡಿಜೆ ಸೆಟ್ ಅಳವಡಿಸುವುದು. ಅಯ್ಯಾಜಯ್ಯನ ಹುಂಡಿ ಬಳಿಯ ತೇವ ಬಾವಿಯಲ್ಲಿ ೧೫೦ ಎಚ್‌ಪಿ ಮತ್ತು

೬೦ ಎಚ್‌ಪಿ ಸಾಮರ್ಥ್ಯದ ನನ್ ಕ್ಲಾಗ್ ಸಬ್ ಮರ್ಸಿಬಲ್ ಸೀವೆಜ್ ಪಂಪಿಂಗ್ ಮೆಷಿನರಿಗಳನ್ನು ಒದಗಿಸಿ ಅಳವಡಿಸಲಾಗುತ್ತದೆ. ವಿಶೇಷವಾಗಿ ಅಯ್ಯಾಜಯ್ಯನ ಹುಂಡಿ ತೇವ ಬಾಯಿಯಿಂದ ರಾಯನಕೆರೆ ಘನತ್ಯಾಜ್ಯ ಶುದ್ಧೀಕರಣ ಘಟಕದವರೆಗೆ ೬. ೭೦ ಕಿ. ಮೀ. ಉದ್ದಕ್ಕೆ ೬೦೦ ಮಿ. ಮೀ. ವ್ಯಾಸದ ಏರು ಕೊಳವೆಗಳನ್ನು ಅಳವಡಿಸಲಾಗುತ್ತದೆ.

ಕೇರ್ಗಳ್ಳಿ, ಅಯ್ಯಾಜಯ್ಯನ ಹುಂಡಿ ಕೆರೆಗೆ ಕಲುಷಿತ ನೀರು ಸೇರದಂತೆ ತಡೆಯಲು ಒಳಚರಂಡಿ ಮಾರ್ಗಗಳನ್ನು ನಿರ್ಮಿಸಿ ರಾಯನಕೆರೆಗೆ ಸೇರುವಂತೆ ಮಾಡಲು ರೂಪಿಸಿರುವ ಕ್ರಿಯಾ ಯೋಜನೆಗೆ ಶೀಘ್ರ ಅನುಮೋದನೆ ಪಡೆಯ ಲಾಗುವುದು. ಸರ್ಕಾರದ ನಗರಾಭಿವೃದ್ಧಿ ಇಲಾಖೆ ಯಲ್ಲಿ ಕಡತ ಇರುವ ಕಾರಣ ಸಿಎಂ, ಸಚಿವರ ಗಮನಕ್ಕೆ ತಂದು ಶೀಘ್ರ ಅನುಮತಿ ಪಡೆಯುತ್ತೇವೆ. -ಜಿ. ಟಿ. ದೇವೇಗೌಡ, ಶಾಸಕರು

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

7 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

11 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

14 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

18 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

18 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

18 hours ago