Andolana originals

ಮೈಸೂರು-ಬೆಂಗಳೂರು ರಾಷ್ಟ್ರಿಯ ಹೆದ್ದಾರಿಗೆ ೨೪ ಸ್ಕೈವಾಕ್

ಸಾಲೋಮನ್

ಉ.ಕರ್ನಾಟಕದ ಕೆ.ಕೆ.ಆರ್. ಕನ್‌ಸ್ಟ್ರಕ್ಷನ್ ಕಂಪೆನಿಗೆ ೩೫ ಕೋಟಿ ರೂ.ಗೆ ಗುತ್ತಿಗೆ

ಮೈಸೂರಿನ ಸಿದ್ದಲಿಂಗಪುರದಲ್ಲಿ ಮೊದಲ ಸ್ಕೈವಾಕ್

ಒಂದು ವರ್ಷ ಅವಧಿಯಲ್ಲಿ ಕಾಮಗಾರಿ ಪೂರ್ಣ

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಭೀಕರ ಅಪಘಾತಗಳಿಂದ ಸಂಭವಿಸುತ್ತಿರುವ ಜೀವಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ(ಎನ್ಎಚ್ ೨೭೫) ಅಡ್ಡಲಾಗಿ ೨೪ ಸ್ಕೈವಾಕ್‌ಗಳನ್ನು ನಿರ್ಮಿಸಲಾಗುತ್ತಿದೆ.

ಬೆಂಗಳೂರು ಹೊರವಲಯದಲ್ಲಿರುವ ಪಂಚಮುಖಿ ಗಣೇಶ ದೇವಸ್ಥಾನದ ನಂತರ ಪ್ರಾರಂಭವಾಗುವ – ಓವರ್ ರ‍್ಯಾಂಪ್‌ನಲ್ಲಿ ವಾಹನಗಳು ಇಳಿಯುವ ಸ್ಥಳದಿಂದ ಸ್ಕೈ ವಾಕ್ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಮೈಸೂರಿನ ಸಿದ್ದಲಿಂಗಪುರದ ಬಳಿ ಮೊದಲ ಸ್ಕೈವಾಕ್ ನಿರ್ಮಾಣ ಆಗುತ್ತಿದೆ. ೨ನೇ ಸ್ಕೈವಾಕ್ ಮಂಡ್ಯದ ಸಮೀಪ ನಿರ್ಮಾಣವಾಗುತ್ತಿದೆ. ಹೆದ್ದಾರಿಯ ಉದ್ದಕ್ಕೂ ೩೫ ಕೋಟಿ ರೂ. ವೆಚ್ಚದಲ್ಲಿ ಒಟ್ಟು ೨೪ ಸ್ಕೈವಾಕ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿಯ ಗುತ್ತಿಗೆಯನ್ನು ಉತ್ತರ ಕರ್ನಾಟಕದ ಕೆಕೆಆರ್ ಕನ್‌ಸ್ಟ್ರಕ್ಷನ್ ಕಂಪೆನಿಗೆ ನೀಡಲಾಗಿದೆ. ಒಂದು ವರ್ಷದ ಅವಧೀಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ಎನ್‌ಎಚ್‌ಎಐ ಕಚೇರಿ ಮೂಲಗಳು ತಿಳಿಸಿವೆ.

ಸ್ಕೈವಾಕ್ ಏಕೆ ಬೇಕು?: ೧೧೯ ಕಿ.ಮೀ.ಉದ್ದದ ಹೆದ್ದಾರಿಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಪ್ರವೇಶ- ನಿಯಂತ್ರಿತ ರಸ್ತೆ ಇದಾಗಿದೆ. ಜನರು ಹೆದ್ದಾರಿ ದಾಟದಂತೆ ಎರಡೂ ಬದಿಗಳಲ್ಲಿ ಜಾಲರಿ ಬೇಲಿ ಹಾಕಲಾಗಿತ್ತು. ಆದರೆ, ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಓಡಾಡಿ ಅಭ್ಯಾಸವಿದ್ದ ಜನರು ರಸ್ತೆ ದಾಟಲು ಹಾಕಲಾಗಿದ್ದ ಜಲರಿ ಬೇಲಿಯನ್ನು ಹಲವೆಡೆ ಕಿತ್ತು ಹಾಕಿ, ನುಗ್ಗಿ ಹೆzರಿ ದಾಟುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.

ಈ ಸಂಬಂಧ ಸ್ಥಳೀಯರಿಂದ ಪದೇ ಪದೆ ದೂರುಗಳು ಬಂದ ನಂತರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್‌ಎಐ) ಹೆದ್ದಾರಿಗೆ ಅಡ್ಡಲಾಗಿ ಸ್ಕೈವಾಕ್‌ಗಳನ್ನು ನಿರ್ಮಿಸಲು ನಿರ್ಧರಿಸಿದೆ.

ಪರಿಶೀಲಿಸಿ ನಿರ್ಧಾರ: ಕಳೆದ ಜೂನ್ ತಿಂಗಳಲ್ಲಿ ಹೆದ್ದಾರಿಯನ್ನು ಪರಿಶೀಲಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ನೇತೃತ್ವದ ತಂಡ, ಅತಿ ವೇಗದಲ್ಲಿ ವಾಹನಗಳು ಚಲಿಸುವ ಹೆದ್ದಾರಿಯನ್ನು ದಾಟಲು ಸಾರ್ವಜನಿಕರು ಪ್ರಯತ್ನಿಸುತ್ತಿರುವುದರಿಂದ ಅಪಘಾತ ಗಳು ಸಂಭವಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೆzರಿಯಲ್ಲಿ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸೂಚಿಸಿದ್ದ ಅನೇಕ ಕ್ರಮಗಳ ಪೈಕಿ, ಅಲ್ಲಲ್ಲಿ ಸ್ಕೈವಾಕ್‌ಗಳನ್ನು ನಿರ್ಮಿಸಲು ಸಲಹೆ ನೀಡಿತ್ತು.

ಎಲ್ಲಿಲ್ಲಿ ಸ್ಕೈವಾಕ್ ನಿರ್ಮಾಣ?: ಸ್ಕೈವಾಕ್‌ಗಳ ನಿರ್ಮಾಣದಿಂದ ಬೆಂಗಳೂರು-ಮೈಸೂರು ನಡುವಿನ ಪ್ರವೇಶ ನಿಯಂತ್ರಿತ ಹೆzರಿ ಉದ್ದಕ್ಕೂ ಅನೇಕ ಹಳ್ಳಿಗಳ ಜನರಿಗೆ ಪ್ರಯೋಜನವಾಗಲಿದೆ. ಹೆದ್ದಾರಿ ಬದಿಯ ಗ್ರಾಮಗಳಾದ ಕಣಿಮಿ ಣಿಕೆ, ಮಂಚನಾಯಕನಹಳ್ಳಿ, ಕಲ್ಲುಗೊಪ್ಪಹಳ್ಳಿ, ಹುಲ್ತಾರ್ ಹೊಸದೊಡ್ಡಿ, ಮಾದಾಪುರ, ದನಗುಂದ, ರುದ್ರಾಕ್ಷಿಪುರ, ಅಗರಲಿಂಗನದೊಡ್ಡಿ, ಮೊಬ್ಬಲಗೆರೆ, ಗೆಜ್ಜಲಗೆರೆ ಕೈಗಾರಿಕಾ ಪ್ರದೇಶ, ಗೆಜ್ಜಲಗೆರೆ, ಬಿ.ಗೌಡಗೆರೆ, ಬೂದನೂರು, ಬೂದನಹಳ್ಳಿ, ಕಲಗಿದ್ದಾಪುರ, ಗಂಗೂರು, ಗೌಡಹಳ್ಳಿ, ಬ್ರಹ್ಮಪುರ, ಕಳಸ್ತವಾಡಿ ಮತ್ತು ಸಿದ್ದಲಿಂಗಪುರ ಈ ಪ್ರದೇಶಗಳಲ್ಲಿ ಸ್ಕೈವಾಕ್‌ಗಳು ನಿರ್ಮಾಣವಾಗಲಿವೆ. ಸ್ಕೈವಾಕ್‌ಗಳು ನಿರ್ಮಾಣವಾದ ನಂತರ ಗ್ರಾಮಗಳ ಜನರು ರಸ್ತೆ ದಾಟಲು ಅವುಗಳನ್ನೇ ಉಪಯೋಗಿಸಬೇಕು. ಅದರಿಂದ ಅಪಘಾತಗಳನ್ನು ನಿಯಂತ್ರಿಸಬಹುದು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

” ಹೆದ್ದಾರಿಯಲ್ಲಿ ಮೈಸೂರು ಕಡೆಯಿಂದ ಸ್ಕೈವಾಕ್ ಕಾಮಗಾರಿ ಆರಂಭವಾಗಿದೆ. ಮೈಸೂರಿನ ಸಿದ್ದಲಿಂಗಪುರ ಹಾಗೂ ಮಂಡ್ಯ ಸಮೀಪ ಸ್ಕೈವಾಕ್ ನಿರ್ಮಾಣ ಕೆಲಸವೂ ನಡೆಯುತ್ತಿದೆ. ಇದು ಗ್ರಾಮಗಳ ಜನರಿಗೆ ಹೆಚ್ಚು ಅನುಕೂಲ ಮಾತ್ರವಲ್ಲ, ವಾಹನಗಳೂ ಕೂಡ ವೇಗವಾಗಿ ಎಲ್ಲೂ ತಡೆಯಿಲ್ಲದೆ ಚಲಿಸುವ ಅವಕಾಶವನ್ನು ಮಾಡಿಕೊಡಲಾಗುತ್ತದೆ.”

-ಕಿರಣ್, ಎಇಇ, ಎನ್‌ಎಚ್‌ಎಐ, ರಾಮನಗರ

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago