Andolana originals

ಸಿಎಂ ತವರು ಜಿಲ್ಲೆಯಲ್ಲಿ 275 ಶಿಶುಗಳ ಸಾವು

  • ಕೆ. ಬಿ. ರಮೇಶನಾಯಕ

ಮೈಸೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತು ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಿರುವ ಕಳವಳಕಾರಿ ಸಂಗತಿ ಬಹಿರಂಗವಾಗಿದೆ.

ಭಾರತದ ಎಂಎಂಆರ್ ಹಾಗೂ ಐಎಂಆರ್ ಸರಾಸರಿಗೆ ಹೋಲಿಕೆ ಮಾಡಿದರೆ ಮೈಸೂರು ಜಿಲ್ಲೆಯಲ್ಲಿ ಬಾಣಂತಿಯರ ಮರಣ ಪ್ರಮಾಣ ಕಡಿಮೆಯಾಗಿದ್ದರೂ ಶಿಶುಗಳ ಸಾವು ಹೆಚ್ಚಾಗಿದೆ. ಅದರಲ್ಲೂ ಮೈಸೂರು ನಗರದಲ್ಲಿ ಹೆಚ್ಚಿನ ಶಿಶು ಮರಣ ದಾಖಲಾಗಿರುವುದನ್ನು ಅಂಕಿ-ಅಂಶಗಳಲ್ಲಿ ಕಾಣಬಹುದಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಬಹಿರಂಗವಾದ ಬಳಿಕ ಪ್ರತಿಯೊಂದು ಜಿಲ್ಲೆಯಲ್ಲೂ ತಾಯಿ ಮತ್ತು ಶಿಶುವಿನ ಮರಣದ ಪ್ರಮಾಣ ಕುರಿತು ಪೋಷಕರ ವಲಯದಲ್ಲಿ ಆತಂಕ ಮನೆ ಮಾಡಿದೆ. ಮೈಸೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ತಾಯಿ ಮರಣದ ಪ್ರಮಾಣ ಭಾರತ-೯೭, ಕರ್ನಾಟಕ-೬೯, ಮೈಸೂರು ೪-೨ ಇದ್ದು, ಶಿಶು ಮರಣದ ಪ್ರಮಾಣದಲ್ಲಿ ಭಾರತ -೨೭, ಕರ್ನಾಟಕ-೧೭, ಮೈಸೂರು-೧೨. ೮ ಇದ್ದು, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಸಮಾಧಾನಕರವಾಗಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ತಾಯಿ ಮತ್ತು ಶಿಶುವಿನ ಮರಣ ಪ್ರಮಾಣವನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾ ರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಗರ್ಭಿಣಿ ಸಂದರ್ಭದಲ್ಲಿ ಮತ್ತು ಮಗುವಿಗೆ ಜನನ ನೀಡಿದ ನಂತರ ಬಾಣಂತಿಯರು ಪೌಷ್ಠಿಕಾಂಶದ ಕೊರತೆ, ರಕ್ತಹೀನತೆ ಮೊದಲಾದ ಸಮಸ್ಯೆಗಳಿಗೆ ಸಿಲುಕಿ ಮರಣವನ್ನಪ್ಪುತ್ತಿದ್ದನ್ನು ತಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ. ಮನೆಗಳಲ್ಲಿ ಹೆರಿಗೆ ಮಾಡಿಸುವ ಪ್ರಕರಣಗಳು ಕಡಿಮೆಯಾಗಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಶೇ.೯೯ರಷ್ಟು ಆಗಿರುವುದರಿಂದ ಬಾಣಂತಿಯರ ಸಾವಿನ ಪ್ರಮಾಣ ಕಡಿಮೆಯಾಗಿದ್ದರೂ ಶಿಶು ಮರಣ ಮಾತ್ರ ಇನ್ನೂ ಶೇ. ೫ರೊಳಗೆ ಇಳಿದಿಲ್ಲ. ಮೈಸೂರು ಜಿಲ್ಲೆಯಲ್ಲಿ ಒಂದು ಸಾವಿರ ಶಿಶು ಜನನಕ್ಕೆ ೧೨. ೪ರಷ್ಟು ಮರಣ ಪ್ರಮಾಣವಾಗಿದೆ ಎಂದು ಹೇಳಲಾಗಿದೆ.

೫ ವರ್ಷದೊಳಗಿನ ಶಿಶುಗಳ ಮರಣ: ಐದು ವರ್ಷದೊಳಗಿನ ಮರಣ ಪ್ರಮಾಣವು ನವಜಾತ ಶಿಶುವು ನಿಖರವಾಗಿ ೫ ವರ್ಷ ವಯಸ್ಸನ್ನು ತಲುಪುವ ಮೊದಲು ಸಾಯುವ ಸಂಭವನೀಯತೆಯನ್ನು ಸೂಚಿಸುತ್ತದೆ. ಪ್ರತಿ ೧,೦೦೦ ಜೀವಂತ ಜನನಗಳಿಗೆ ವ್ಯಕ್ತಪಡಿಸಲಾಗುತ್ತದೆ. ೨೦೨೨ರಲ್ಲಿ ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ೪. ೯ ಮಿಲಿಯನ್ ಮಕ್ಕಳು ಸಾವನ್ನಪ್ಪಿದ್ದಾರೆ. ೨೦೨೨ರಲ್ಲಿ ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ೧೩,೪೦೦ ಮಕ್ಕಳು ಪ್ರತಿದಿನ ಸಾಯುತ್ತಿದ್ದಾರೆ ಎಂದು ಇದು ಅನುವಾದಿಸುತ್ತದೆ. ಜಾಗತಿಕವಾಗಿ ನ್ಯುಮೋನಿಯಾ, ಅತಿಸಾರ ಮತ್ತು ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು, ಅವಧಿಪೂರ್ವ ಜನನ ಮತ್ತು ಇಂಟ್ರಾಪಾರ್ಟಮ್ -ಸಂಬಂಧಿತ ತೊಡಕುಗಳ ಜೊತೆಗೆ ಐದು ವರ್ಷದೊಳಗಿನ ಸಾವುಗಳಿಗೆ ಪ್ರಮುಖ ಕಾರಣವಾಗಿದೆ. ಜಾಗತಿಕವಾಗಿ ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವು ಶೇ. ೬೦ರಷ್ಟು ಕಡಿಮೆಯಾಗಿದೆ, ೧೯೯೦ ರಲ್ಲಿ ೧,೦೦೦ ಜೀವಂತ ಜನನಗಳಿಗೆ ೯೩ ಸಾವುಗಳು ಇತ್ತು ೨೦೨೨ರಲ್ಲಿ ೩೭ಕ್ಕೆ ಇಳಿದಿದೆ. ಈ ಗಣನೀಯ ಪ್ರಗತಿಯ ಹೊರತಾಗಿಯೂ, ಮಕ್ಕಳ ಬದುಕುಳಿಯುವಿಕೆಯನ್ನು ಸುಧಾರಿಸುವುದು ತುರ್ತು ಕಾಳಜಿಯ ವಿಷಯವಾಗಿದೆ. ೨೦೨೨ರಲ್ಲಿ ಮಾತ್ರ, ಸರಿಸುಮಾರು ೧೩,೪೦೦ ಐದು ವರ್ಷದೊಳಗಿನ ಸಾವುಗಳು ಪ್ರತಿದಿನ ಸಂಭವಿಸಿವೆ, ಸಹಿಸಲಾಗದಷ್ಟು ಹೆಚ್ಚಿನ ಸಂಖ್ಯೆಯ ಮಕ್ಕಳ ಸಾವುಗಳು ಹೆಚ್ಚಾಗಿ ತಡೆಗಟ್ಟಬಹುದು ಎಂದು ಯೂನಿಸೆಫ್ ಹೇಳಿದೆ.

ರಾಜ್ಯದ ಸರಾಸರಿ ನೋಡಿದರೆ ಮೈಸೂರು ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಕಡಿಮೆಯಾಗಿದೆ. ಏಪ್ರಿಲ್ ನಿಂದ ಅಕ್ಟೋಬರ್‌ವರೆಗೆ ೨೭೫ ಮಕ್ಕಳ ಮರಣವಾಗಿದೆ. ೧ರಿಂದ ೫ ವರ್ಷದೊಳಗಿನ ಮಕ್ಕಳ ಪ್ರಮಾಣ ಗಮನಿಸಲಾಗುತ್ತದೆ. ಕಳೆದ ವರ್ಷಕ್ಕೆ ಹೋಲಿಸಿ ಈಗಲೇ ಹೇಳಲಾಗದು. ಮುಂದಿನ ಏಪ್ರಿಲ್‌ವರೆಗೆ ಎಷ್ಟು ಮರಣವಾಗಲಿದೆ ಎಂಬುದನ್ನು ನೋಡಬೇಕಾಗುತ್ತದೆ. -ಡಾ. ಸಿರಾಜಿನ್ ಬಾಷ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

3 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

3 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

3 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

4 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

4 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

4 hours ago