Andolana originals

2ನೇ ಹಂತದ ಸಿಡಿಹಬ್ಬ ತಾಲೀಮು ಯಶಸ್ವಿ

ಫಿರಂಗಿ ಶಬ್ಬಕ್ಕೆ ಬೆಚ್ಚದೆ ಧೈರ್ಯದಿಂದ ನಿಂತ ಗಜಪಡೆ, ಅಶ್ವಪಡೆ

ಮೈಸೂರು: ಜಂಬೂಸವಾರಿ ಮೆರವಣಿಗೆ ಸಂದರ್ಭದಲ್ಲಿ ಗಜಪಡೆ ಹಾಗೂ ಅಶ್ವಪಡೆ ವಿಚಲಿತವಾಗಬಾರದು ಎಂಬ ಸದುದ್ದೇಶದಿಂದ ನಗರದ ವಸ್ತು ಪ್ರದರ್ಶನದ ಆವರಣದಲ್ಲಿ ನಡೆಸಲಾದ ಎರಡನೇ ಸುತ್ತಿನ ಸಿಡಿಮದ್ದು ತಾಲೀಮು ಯಶಸ್ವಿಗೊಂಡಿತು.

ಪ್ರಥಮ ತಾಲೀಮು ಸಂದರ್ಭದಲ್ಲಿ ಹೆದರಿದ್ದ ರೋಹಿತ ಆನೆ ಈ ಬಾರಿ ಧೈರ್ಯ ಪ್ರದರ್ಶಿಸಿದ್ದು ವಿಶೇಷವಾಗಿತ್ತು. ಹೆಣ್ಣಾನೆ ಹಿರಣ್ಯ ಸಿಡಿಮದ್ದಿನ ಶಬ್ದಕ್ಕೆ ಈ ಬಾರಿಯೂ ಹೆದರಿಕೊಂಡಿತು. ಇದನ್ನು ಹೊರತುಪಡಿಸಿ ಅಂಬಾರಿ ಆನೆ ಅಭಿಮನ್ಯು ಸೇರಿದಂತೆ ಎಲ್ಲ ಆನೆಗಳೂ ಧೈರ್ಯ ಪ್ರದರ್ಶಿಸಿದವು.

ಕಳೆದ ಬಾರಿ ತಾಲೀಮಿನಲ್ಲಿ ೧೪ ಆನೆಗಳು ಪಾಲ್ಗೊಂಡಿದ್ದವು. ಆದರೆ, ವಯಸ್ಸಿನ ಹಿರಿತನದ ಕಾರಣಕ್ಕೆ ಎರಡನೇ ಹಂತದ ತಾಲೀಮಿನ ಸಂದರ್ಭ ವರಲಕ್ಷ್ಮೀ ಆನೆಗೆ ವಿಶ್ರಾಂತಿ ನೀಡಲಾಯಿತು. ಒಟ್ಟು ೧೩ ಆನೆಗಳು ಹಾಗೂ ೩೮ ಕುದುರೆಗಳು ತಾಲೀಮಿನಲ್ಲಿ ಪಾಲ್ಗೊಂಡಿದ್ದವು.

ಆನೆಗಳು ಸಣ್ಣ ಶಬ್ದಕ್ಕೆ ಹೊಂದಿಕೊಂಡು ನಂತರ ದೊಡ್ಡ ಶಬ್ದ ಎದುರಿಸುವ ಧೈರ್ಯ ಬೆಳೆಸಿಕೊಳ್ಳಲಿ ಎಂಬ ಉದ್ದೇಶದಿಂದ ಈ ಬಾರಿ ಪಟಾಕಿ (ಅಟಜಿ ಬಾಂಬ್) ಸಿಡಿಸಲಾಯಿತು. ಪಟಾಕಿ ಶಬ್ದಕ್ಕೆ ಯಾವುದೇ ಆನೆಗಳು ಜಗ್ಗಲಿಲ್ಲ. ನಂತರ ೭ ಫಿರಂಗಿಗಳಿಂದ ೨೧ ಸುತ್ತು ಸಿಡಿಮದ್ದು ಸಿಡಿಸಲಾಯಿತು.

ಹಿರಣ್ಯ ಆನೆಯು ಬೆದರುವ ಸಾಧ್ಯತೆ ಇರುವುದನ್ನು ಮನ ಗಂಡ ಅರಣ್ಯ ಇಲಾಖೆ ಸಿಬ್ಬಂದಿ ಆ ಆನೆಯನ್ನು ಆನೆಗಳ ಗುಂಪಿನಿಂದ ಬೇರ್ಪಡಿಸಿ ಹಿಂದಕ್ಕೆ ನಿಲ್ಲಿಸಿದರು. ಸಿಡಿಮದ್ದು ಸಿಡಿಸುವ ಸಂದರ್ಭ ಮಾವುತ ಹಾಗೂ ಕಾವಾಡಿ ಆನೆಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಉಳಿದಂತೆ ಎರಡು ಸುತ್ತು ಸಿಡಿಮದ್ದು ಸಿಡಿಸಿದ ಬಳಿಕ ೩ನೇ ಸುತ್ತಿನ ಸಿಡಿಮದ್ದು ಸಿಡಿಸುವ ಸಂದರ್ಭ ಆನೆಗಳು ಫಿರಂಗಿಗಳತ್ತ ಮುನ್ನುಗ್ಗಿ ಧೈರ್ಯ ಪ್ರದರ್ಶಿಸಿದವು. ವನ್ಯಜೀವಿ ವಿಭಾಗದ ಡಿಸಿಎಫ್ ಡಾ. ಐ. ಬಿ. ಪ್ರಭುಗೌಡ, ಅರಣ್ಯ ಸಂಚಾರಿ ದಳದ ಡಿಸಿಎಫ್ ಡಾ. ಚಂದ್ರಶೇಖರ್ ಪಾಟೀಲ್, ಮೌಂಟೆಡ್ ಕಮಾಂಡೆಂಟ್ ವಿ. ಶೈಲೇಂದ್ರ, ಅರಮನೆ ಭದ್ರತಾ ಎಸಿಪಿ ಚಂದ್ರಶೇಖರ್, ಸಿಎಆರ್ ಎಸಿಪಿ ಸತೀಶ್, ಆರ್‌ಎಫ್‌ಒ ಸಂತೋಷ್, ಪಶು ವೈದ್ಯರಾದ ಡಾ. ಮುಜೀಬ್ ರೆಹಮಾನ್, ಡಾ. ಮಿರ್ಜಾ ವಾಸಿಂ ಹಾಗೂ ಇತರರು ಹಾಜರಿದ್ದರು.

ಎರಡನೇ ಹಂತದ ಸಿಡಿಮದ್ದು ಸಿಡಿಸುವ ತಾಲೀಮು ಯಶಸ್ವಿಯಾಗಿ ನಡೆದಿದ್ದು, ಆನೆಗಳು ಸಿಡಿಮದ್ದಿನ ಶಬ್ದಕ್ಕೆ ನಿಧಾನವಾಗಿ ಹೊಂದಿಕೊಳ್ಳುತ್ತಿವೆ. ಅ. ೧ರಂದು ಮೂರನೇ ಹಂತದ ತಾಲೀಮು ನಡೆಸಲಾಗುವುದು. ಆ ಸಂದರ್ಭ ಆನೆಗಳು ಶಬ್ದಕ್ಕೆ ಸಂಪೂರ್ಣ ಹೊಂದಿಕೊಳ್ಳುವ ವಿಶ್ವಾಸವಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಆನೆಗಳು ಹೆಚ್ಚು ಹೆದರಲಿಲ್ಲ.
-ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್, ವನ್ಯಜೀವಿ ವಿಭಾಗ

 

ಆಂದೋಲನ ಡೆಸ್ಕ್

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

1 hour ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

1 hour ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

5 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

5 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

5 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

6 hours ago