Andolana originals

ಕಾಮಗಾರಿ ನಡೆಸದೇ 3.75 ಕೋಟಿ ರೂ. ಗುಳುಂ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನೇ ನಡೆಸದೆ ನಕಲಿ ಜಿಪಿಎಸ್ ದಾಖಲಾತಿ ಸಲ್ಲಿಸಿದ ಗುತ್ತಿಗೆ ಸಂಸ್ಥೆಯೊಂದು ೩.೭೫ ಕೋಟಿ ರೂ. ಪಡೆಯುವ ಮೂಲಕ ಭಾರಿ ಅವ್ಯವಹಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪಟ್ಟಣದ ಮುಸ್ಲಿಂ ಬ್ಲಾಕ್ ಮತ್ತು ತಾಲ್ಲೂಕಿನ ನಾಗನಹಳ್ಳಿ, ಚಿನ್ನಪ್ಪ ಪಾಳ್ಯ ಗ್ರಾಮಗಳಲ್ಲಿ ಕ್ರೈಸ್ತ ಸಮುದಾಯ ಮತ್ತು ಮುಸ್ಲಿಂ ಜನಾಂಗದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇಲ್ಲಿನ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಶಾಸಕ ಅನಿಲ್ ಚಿಕ್ಕಮಾದು ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕ ಒಂದೂವರೆ ವರ್ಷದ ಹಿಂದೆ ೫ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿದ್ದರು.

ಕೋಟೆಗೆ ೧ ಕೋಟಿ ೭೮ ಲಕ್ಷ ರೂ., ನಾಗನಹಳ್ಳಿ ಗ್ರಾಮಕ್ಕೆ ೧ ಕೋಟಿ ೬೫ ಲಕ್ಷ ರೂ. ಮತ್ತು ಚಿನ್ನಪ್ಪ ಪಾಳ್ಯ ಗ್ರಾಮಕ್ಕೆ ೧ ಕೋಟಿ ೫೦ ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲು ಬೆಂಗಳೂರಿನ ಕೆಆರ್ ಐಬಿಎಲ್ ಸಂಸ್ಥೆಯವರು ಗುತ್ತಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಯಿತು. ಆದರೆ, ಅದು ಕಳಪೆ ಕಾಮಗಾರಿ ಎಂದುm ಗ್ರಾಮಸ್ಥರು ಆರೋಪಿಸಿದರು. ನಂತರ ಗುತ್ತಿಗೆ ಸಂಸ್ಥೆಯವರು ಕೇವಲ ಶೇ.೨೦ರಷ್ಟು ಕಾಮಗಾರಿ ನಡೆಸಿ ನಾಪತ್ತೆಯಾಗಿದ್ದರು. ಕಾಮಗಾರಿ ಸಮರ್ಪಕವಾಗಿ ನಡೆಯದಿರುವುದರಿಂದ ಈ ಸ್ಥಳಗಳಲ್ಲಿ ಜನರು ವಾಸಿಸಲು ಮತ್ತು ಓಡಾಡಲು ಬಹಳ ಸಮಸ್ಯೆ ಎದುರಾಯಿತು. ಇದನ್ನು ಗ್ರಾಮಸ್ಥರು ಶಾಸಕ ಅನಿಲ್ ಚಿಕ್ಕಮಾದು ಅವರ ಗಮನಕ್ಕೆ ತಂದರು. ತಕ್ಷಣ ಸ್ಪಂದಿಸಿದ ಅನಿಲ್ ಅವರು, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಶಿಲ್ಪಾ ಅವರಿಗೆ ಕಾಮಗಾರಿಗಳನ್ನು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ್ದರು.

ಎಚ್.ಡಿ.ಕೋಟೆ, ನಾಗನಹಳ್ಳಿ ಮತ್ತು ಚಿನ್ನಪ್ಪ ಪಾಳ್ಯ ಗ್ರಾಮಗಳಿಗೆ ಶಿಲ್ಪಾ ಅವರು ಭೇಟಿ ನೀಡಿದಾಗ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಎನ್‌ಆರ್‌ಐಜಿ ಯೋಜನೆಯ ಜಿಪಿಎಸ್ ನಕಲಿ ಫೋಟೊಗಳು ಹಾಗೂ ಇನ್ನಿತರ ದಾಖಲಾತಿಗಳನ್ನು ಸಲ್ಲಿಸಿ, ೩ ಕೋಟಿ ೭೫ ಲಕ್ಷ ರೂ. ಪಡೆದಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತಿವೆ, ಹೆಚ್ಚುವರಿಯಾಗಿ ೧ ಕೋಟಿ ೨೫ ಲಕ್ಷ ರೂ. ಬಿಡುಗಡೆ ಮಾಡಬೇಕು ಎಂದು ಸಂಸ್ಥೆಯವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಪತ್ರ ಬರೆದಿರುವುದು ಪತ್ತೆಯಾಗಿದೆ.

ಈ ಬೆಳವಣಿಗೆಯಿಂದ ಆತಂಕಗೊಂಡ ಗ್ರಾಮಸ್ಥರು ಲೋಕಾಯುಕ್ತರು ಪಟ್ಟಣಕ್ಕೆ ಅಹವಾಲು ಸ್ವೀಕರಿಸಲು ಭೇಟಿ ನೀಡಿದ್ದ ಸಂದರ್ಭದಲ್ಲಿ ಗುತ್ತಿಗೆ ಸಂಸ್ಥೆಯ ಅವ್ಯವಹಾರದ ಬಗ್ಗೆ ದೂರು ನೀಡಿದ್ದರಲ್ಲದೆ, ಶಾಸಕ ಅನಿಲ್ ಚಿಕ್ಕಮಾದು ಮತ್ತು ಜಿಲ್ಲಾಧಿಕಾರಿ ಜಿ.ಲಕ್ಷಿ ಕಾಂತ್ ರೆಡ್ಡಿ ಅವರಿಗೂ ಮನವಿ ಸಲ್ಲಿಸಿದ್ದಾರೆ.

ಹಿಂದುಳಿದ ತಾಲ್ಲೂಕಿನ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗುವುದೇ ಕಷ್ಟ. ಇಲ್ಲಿ ಬಿಡುಗಡೆಗೊಂಡಿರುವ ಕೋಟ್ಯಂತರ ರೂ. ಅನುದಾನದಲ್ಲಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಗುತ್ತಿಗೆ ಸಂಸ್ಥೆಯು ಬೇಕಾಬಿಟ್ಟಿ ಕೆಲಸ ನಿರ್ವಹಿಸಿದೆ. ಅಲ್ಲದೆ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಈ ಪ್ರಕರಣದ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

” ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ೫ ಕೋಟಿ ರೂ. ಗಳಿಗೂ ಅಧಿಕ ವೆಚ್ಚದಲ್ಲಿ ಮೂರು ಗ್ರಾಮಗಳಲ್ಲಿ ಮೂಲಸೌಕರ್ಯಗಳ ಕಾಮಗಾರಿ ಕೈಗೊಳ್ಳಲಾಗಿತ್ತು. ಕಳಪೆ ಕಾಮಗಾರಿ ಮತ್ತು ಅವ್ಯಹಾರದ ಬಗ್ಗೆ ತನಿಖೆ ನಡೆಸಿ ಸಮಗ್ರ ವರದಿಯನ್ನು ನೀಡುವಂತೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು, ಗುತ್ತಿಗೆ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮವಹಿಸಲಾಗುವುದು.”

ಅನಿಲ್ ಚಿಕ್ಕಮಾದು, ಶಾಸಕ

” ಶಾಸಕರ ನಿರ್ದೇಶನದ ಮೇರೆಗೆ ಕಾಮಗಾರಿಗಳನ್ನು ಪರಿಶೀಲಿಸಲಾಗಿದೆ. ದಾಖಲಾತಿಯಲ್ಲಿ ಕೆಲವೊಂದು ಸಮಸ್ಯೆ ಮತ್ತು ಲೋಪಗಳಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಗುತ್ತಿಗೆ ಸಂಸ್ಥೆಯವರಿಗೆ ಖುದ್ದು ಹಾಜರಾಗಿ, ಕಾಮಗಾರಿಗಳನ್ನು ತೋರಿಸುವಂತೆ ಸೂಚಿಸಲಾಗಿದೆ. ನಂತರ ಸಮಗ್ರ ವರದಿಯನ್ನು ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಲ್ಲಿಸಲಾಗುವುದು.”

ಶಿಲ್ಪಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

21 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

21 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

21 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

21 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

21 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

21 hours ago