Andolana originals

ನೀರು ತುಂಬಿಸದೆ ಭಣಗುಟ್ಟುತ್ತಿವೆ 3 ಕೆರೆಗಳು

೨ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ; ೩ ಕೆರೆಗಳ ಒಡಲು ತುಂಬಿಸದ ನಿಗಮ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಗಾಂಧಿ ಗ್ರಾಮ ಏತ ನೀರಾವರಿ ಯೋಜನೆಯಡಿ ಗುಂಡ್ಲುಪೇಟೆ ತಾಲ್ಲೂಕಿನ ೩ ಕೆರೆಗಳನ್ನು ಕಬಿನಿ ನೀರಿನಿಂದ ತುಂಬಿ ಸದೆ ವಿಳಂಬ ಮಾಡಲಾಗುತ್ತಿದ್ದು, ಸುತ್ತಮುತ್ತಲಿನ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಚಳಿಗಾಲ ಕಳೆದು ಬೇಸಿಗೆ ಕಾಲ ಆರಂಭವಾಗುತ್ತಿದ್ದು ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ತಾಲ್ಲೂಕಿನ ಗರಗನಹಳ್ಳಿ ಕೆರೆ, ಹಳ್ಳದ ಮಾದಹಳ್ಳಿ ಕೆರೆ, ಮಳವಳ್ಳಿ ಕೆರೆಗಳನ್ನು ತುಂಬಿಸದೆ ಇರುವುದರಿಂದ ಆ ಭಾಗದ ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಅಂತರ್ಜಲ ಕುಸಿಯುವ ಭೀತಿ ಎದುರಾಗಿದೆ.

ಗಾಂಧಿ ಗ್ರಾಮ ಏತ ಯೋಜನೆಯಡಿ ಮೊದಲ ಹಂತದಲ್ಲಿ ನಂಜನಗೂಡು ತಾಲ್ಲೂಕಿನ ೩ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ರಾಘವಾ ಪುರ, ಕಮರಹಳ್ಳಿ ಕೆರೆಗಳನ್ನು ತುಂಬಿಸಲಾಗಿದೆ. ಅವುಗಳು ತುಂಬಿ ಕೋಡಿ ಬಿದ್ದಿವೆ. ಇದೇ ಯೋಜನೆಯ ೨ ಹಂತದಲ್ಲಿ ಬರುವ ಗರಗನಹಳ್ಳಿ, ಹಳ್ಳದ ಮಾದಹಳ್ಳಿ, ಮಳವಳ್ಳಿ ಕೆರೆಗಳನ್ನು ಮಾತ್ರ ತುಂಬಿಸಿಲ್ಲ. ೨ ವರ್ಷಗಳ ಹಿಂದೆ ಪ್ರಾಯೋಗಿಕ ವಾಗಿ ನೀರು ತುಂಬಿಸಿದ್ದನ್ನು ಹೊರತುಪಡಿಸಿದರೆ ಮತ್ತೆ ನೀರು ಬಿಟ್ಟಿಲ್ಲ ಎಂದು ರೈತ ಮುಖಂಡರು ದೂರಿದ್ಧಾರೆ.

ನಂಜನಗೂಡು ತಾಲ್ಲೂಕಿನ ಗಾಂಧಿಗ್ರಾಮದ ಬಳಿ ಹರಿಯುವ ಕಬಿನಿ ನದಿಯ ದಂಡೆಯಲ್ಲಿ ಪಂಪ್‌ಹೌಸ್ ನಿರ್ಮಿಸಿ ನೀರೆತ್ತಿ ನಂಜನಗೂಡು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ. ಎಚ್. ಎಸ್. ಮಹದೇವಪ್ರಸಾದ್ ಅವರು ಕಾವೇರಿ ನೀರಾವರಿ ನಿಗಮದ ಮೂಲಕ ಅನುಷ್ಠಾನಗೊಳಿಸಿದ್ದರು.

೨ ಕೆರೆಗಳು ಕೋಡಿ ಬಿದ್ದಿವೆ: ಈ ಯೋಜನೆಯ ಮೊದಲ ಹಂತದಲ್ಲಿ ಬರುವ ಗುಂಡ್ಲುಪೇಟೆ ತಾಲ್ಲೂಕಿನ ೨ ಕೆರೆಗಳನ್ನು ಮಾತ್ರ ತುಂಬಿಸುತ್ತಿದ್ದಾರೆ. ಅವುಗಳು ಈಗಲೂ ತುಂಬಿ ಕೋಡಿ ಬಿದ್ದಿವೆ. ನೀರೆಲ್ಲ ಗುಂಡ್ಲುಹೊಳೆಯಲ್ಲಿ ಹರಿದು ಹೋಗುತ್ತಿದೆ. ೨ನೇ ಹಂತದಲ್ಲಿ ಸೇರಿರುವ ೩-೪ ಕೆರೆಗಳನ್ನು ಮಾತ್ರ ನಿಗಮದವರು ತುಂಬಿಸಲು ನಿರ್ಲಕ್ಷ್ಯ ತಾಳುತ್ತಿದ್ದಾರೆ ಎಂಬ ದೂರು ಕೇಳಿಬಂದಿದೆ.

೩ ಕೆರೆಗಳಿಗೆ ಪೈಪ್‌ಲೈನ್ ಕೂಡ ಆಗಿದೆ. ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಆದರೆ, ಕಬಿನಿ ನೀರು ಮಾತ್ರ ಕೆರೆಗಳ ಒಡಲು ತುಂಬುತ್ತಿಲ್ಲ. ಈ ಬಗ್ಗೆ ನಿಗಮದ ಅಧಿಕಾರಿಗಳನ್ನು ವಿಚಾರಿಸಿದರೆ ಗಾಂಧಿ ಗ್ರಾಮದ ಬಳಿ ನೀರೆತ್ತುವ ಮೋಟಾರ್ ಕೆಟ್ಟಿದೆ. ಬೇಗೂರು ಬಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ೩ ಕೆರೆಗಳಿಗೆ ಕಬಿನಿ ನೀರು ತುಂಬಿಸಿದ್ದೆವು. ಬೇಗೂರು ಬಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಅದನ್ನು ಸರಿಪಡಿಸಿ ಕೆರೆಗಳನ್ನು ಆದಷ್ಟು ಬೇಗ ತುಂಬಿಸಲಾಗುವುದು. ಪೈಪ್‌ಲೈನ್ ಸಮಸ್ಯೆಯಿಲ್ಲ. -ಮಹೇಶ್, ಸಹಾಯಕ ಇಂಜಿನಿಯರ್, ಕಾವೇರಿ ನೀರಾವರಿ ನಿಗಮ. ಕಮರಹಳ್ಳಿ ಕೆರೆ ಮತ್ತು ರಾಘವಾಪುರ ಕೆರೆ ತುಂಬಿ ಕೋಡಿ ಬಿದ್ದು ಗುಂಡ್ಲುಹೊಳೆ ಪಾಲಾಗು ತ್ತಿದೆ. ಆದರೆ, ಗರಗನಹಳ್ಳಿ ಕೆರೆ, ಹಳ್ಳದ ಮಾದಹಳ್ಳಿ ಕೆರೆ, ಮಳವಳ್ಳಿ ಕೆರೆಗಳನ್ನು ತುಂಬಿಸದೆ ಇರುವುದರಿಂದ ದನಕರು, ಹಕ್ಕಿ, ಪಕ್ಷಿಗಳಿಗೂ ಕುಡಿಯಲು ನೀರಿಲ್ಲ. ವಿದ್ಯುತ್ ಹಾಗೂ ಇತರೆ ಸಮಸ್ಯೆಗಳನ್ನು ಸರಿಪಡಿಸಿ ಕೆರೆಗಳನ್ನು ತುಂಬಿಸಬೇಕು. –ಮಾಡ್ರಹಳ್ಳಿ ಮಹದೇವಪ್ಪ, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

8 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

11 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

11 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

12 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

12 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

12 hours ago