Andolana originals

ನೀರು ತುಂಬಿಸದೆ ಭಣಗುಟ್ಟುತ್ತಿವೆ 3 ಕೆರೆಗಳು

೨ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ; ೩ ಕೆರೆಗಳ ಒಡಲು ತುಂಬಿಸದ ನಿಗಮ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಗಾಂಧಿ ಗ್ರಾಮ ಏತ ನೀರಾವರಿ ಯೋಜನೆಯಡಿ ಗುಂಡ್ಲುಪೇಟೆ ತಾಲ್ಲೂಕಿನ ೩ ಕೆರೆಗಳನ್ನು ಕಬಿನಿ ನೀರಿನಿಂದ ತುಂಬಿ ಸದೆ ವಿಳಂಬ ಮಾಡಲಾಗುತ್ತಿದ್ದು, ಸುತ್ತಮುತ್ತಲಿನ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಚಳಿಗಾಲ ಕಳೆದು ಬೇಸಿಗೆ ಕಾಲ ಆರಂಭವಾಗುತ್ತಿದ್ದು ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ತಾಲ್ಲೂಕಿನ ಗರಗನಹಳ್ಳಿ ಕೆರೆ, ಹಳ್ಳದ ಮಾದಹಳ್ಳಿ ಕೆರೆ, ಮಳವಳ್ಳಿ ಕೆರೆಗಳನ್ನು ತುಂಬಿಸದೆ ಇರುವುದರಿಂದ ಆ ಭಾಗದ ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಅಂತರ್ಜಲ ಕುಸಿಯುವ ಭೀತಿ ಎದುರಾಗಿದೆ.

ಗಾಂಧಿ ಗ್ರಾಮ ಏತ ಯೋಜನೆಯಡಿ ಮೊದಲ ಹಂತದಲ್ಲಿ ನಂಜನಗೂಡು ತಾಲ್ಲೂಕಿನ ೩ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ರಾಘವಾ ಪುರ, ಕಮರಹಳ್ಳಿ ಕೆರೆಗಳನ್ನು ತುಂಬಿಸಲಾಗಿದೆ. ಅವುಗಳು ತುಂಬಿ ಕೋಡಿ ಬಿದ್ದಿವೆ. ಇದೇ ಯೋಜನೆಯ ೨ ಹಂತದಲ್ಲಿ ಬರುವ ಗರಗನಹಳ್ಳಿ, ಹಳ್ಳದ ಮಾದಹಳ್ಳಿ, ಮಳವಳ್ಳಿ ಕೆರೆಗಳನ್ನು ಮಾತ್ರ ತುಂಬಿಸಿಲ್ಲ. ೨ ವರ್ಷಗಳ ಹಿಂದೆ ಪ್ರಾಯೋಗಿಕ ವಾಗಿ ನೀರು ತುಂಬಿಸಿದ್ದನ್ನು ಹೊರತುಪಡಿಸಿದರೆ ಮತ್ತೆ ನೀರು ಬಿಟ್ಟಿಲ್ಲ ಎಂದು ರೈತ ಮುಖಂಡರು ದೂರಿದ್ಧಾರೆ.

ನಂಜನಗೂಡು ತಾಲ್ಲೂಕಿನ ಗಾಂಧಿಗ್ರಾಮದ ಬಳಿ ಹರಿಯುವ ಕಬಿನಿ ನದಿಯ ದಂಡೆಯಲ್ಲಿ ಪಂಪ್‌ಹೌಸ್ ನಿರ್ಮಿಸಿ ನೀರೆತ್ತಿ ನಂಜನಗೂಡು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ. ಎಚ್. ಎಸ್. ಮಹದೇವಪ್ರಸಾದ್ ಅವರು ಕಾವೇರಿ ನೀರಾವರಿ ನಿಗಮದ ಮೂಲಕ ಅನುಷ್ಠಾನಗೊಳಿಸಿದ್ದರು.

೨ ಕೆರೆಗಳು ಕೋಡಿ ಬಿದ್ದಿವೆ: ಈ ಯೋಜನೆಯ ಮೊದಲ ಹಂತದಲ್ಲಿ ಬರುವ ಗುಂಡ್ಲುಪೇಟೆ ತಾಲ್ಲೂಕಿನ ೨ ಕೆರೆಗಳನ್ನು ಮಾತ್ರ ತುಂಬಿಸುತ್ತಿದ್ದಾರೆ. ಅವುಗಳು ಈಗಲೂ ತುಂಬಿ ಕೋಡಿ ಬಿದ್ದಿವೆ. ನೀರೆಲ್ಲ ಗುಂಡ್ಲುಹೊಳೆಯಲ್ಲಿ ಹರಿದು ಹೋಗುತ್ತಿದೆ. ೨ನೇ ಹಂತದಲ್ಲಿ ಸೇರಿರುವ ೩-೪ ಕೆರೆಗಳನ್ನು ಮಾತ್ರ ನಿಗಮದವರು ತುಂಬಿಸಲು ನಿರ್ಲಕ್ಷ್ಯ ತಾಳುತ್ತಿದ್ದಾರೆ ಎಂಬ ದೂರು ಕೇಳಿಬಂದಿದೆ.

೩ ಕೆರೆಗಳಿಗೆ ಪೈಪ್‌ಲೈನ್ ಕೂಡ ಆಗಿದೆ. ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಆದರೆ, ಕಬಿನಿ ನೀರು ಮಾತ್ರ ಕೆರೆಗಳ ಒಡಲು ತುಂಬುತ್ತಿಲ್ಲ. ಈ ಬಗ್ಗೆ ನಿಗಮದ ಅಧಿಕಾರಿಗಳನ್ನು ವಿಚಾರಿಸಿದರೆ ಗಾಂಧಿ ಗ್ರಾಮದ ಬಳಿ ನೀರೆತ್ತುವ ಮೋಟಾರ್ ಕೆಟ್ಟಿದೆ. ಬೇಗೂರು ಬಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ೩ ಕೆರೆಗಳಿಗೆ ಕಬಿನಿ ನೀರು ತುಂಬಿಸಿದ್ದೆವು. ಬೇಗೂರು ಬಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಅದನ್ನು ಸರಿಪಡಿಸಿ ಕೆರೆಗಳನ್ನು ಆದಷ್ಟು ಬೇಗ ತುಂಬಿಸಲಾಗುವುದು. ಪೈಪ್‌ಲೈನ್ ಸಮಸ್ಯೆಯಿಲ್ಲ. -ಮಹೇಶ್, ಸಹಾಯಕ ಇಂಜಿನಿಯರ್, ಕಾವೇರಿ ನೀರಾವರಿ ನಿಗಮ. ಕಮರಹಳ್ಳಿ ಕೆರೆ ಮತ್ತು ರಾಘವಾಪುರ ಕೆರೆ ತುಂಬಿ ಕೋಡಿ ಬಿದ್ದು ಗುಂಡ್ಲುಹೊಳೆ ಪಾಲಾಗು ತ್ತಿದೆ. ಆದರೆ, ಗರಗನಹಳ್ಳಿ ಕೆರೆ, ಹಳ್ಳದ ಮಾದಹಳ್ಳಿ ಕೆರೆ, ಮಳವಳ್ಳಿ ಕೆರೆಗಳನ್ನು ತುಂಬಿಸದೆ ಇರುವುದರಿಂದ ದನಕರು, ಹಕ್ಕಿ, ಪಕ್ಷಿಗಳಿಗೂ ಕುಡಿಯಲು ನೀರಿಲ್ಲ. ವಿದ್ಯುತ್ ಹಾಗೂ ಇತರೆ ಸಮಸ್ಯೆಗಳನ್ನು ಸರಿಪಡಿಸಿ ಕೆರೆಗಳನ್ನು ತುಂಬಿಸಬೇಕು. –ಮಾಡ್ರಹಳ್ಳಿ ಮಹದೇವಪ್ಪ, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago