Andolana originals

ನೀರು ತುಂಬಿಸದೆ ಭಣಗುಟ್ಟುತ್ತಿವೆ 3 ಕೆರೆಗಳು

೨ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ; ೩ ಕೆರೆಗಳ ಒಡಲು ತುಂಬಿಸದ ನಿಗಮ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಗಾಂಧಿ ಗ್ರಾಮ ಏತ ನೀರಾವರಿ ಯೋಜನೆಯಡಿ ಗುಂಡ್ಲುಪೇಟೆ ತಾಲ್ಲೂಕಿನ ೩ ಕೆರೆಗಳನ್ನು ಕಬಿನಿ ನೀರಿನಿಂದ ತುಂಬಿ ಸದೆ ವಿಳಂಬ ಮಾಡಲಾಗುತ್ತಿದ್ದು, ಸುತ್ತಮುತ್ತಲಿನ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಚಳಿಗಾಲ ಕಳೆದು ಬೇಸಿಗೆ ಕಾಲ ಆರಂಭವಾಗುತ್ತಿದ್ದು ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ತಾಲ್ಲೂಕಿನ ಗರಗನಹಳ್ಳಿ ಕೆರೆ, ಹಳ್ಳದ ಮಾದಹಳ್ಳಿ ಕೆರೆ, ಮಳವಳ್ಳಿ ಕೆರೆಗಳನ್ನು ತುಂಬಿಸದೆ ಇರುವುದರಿಂದ ಆ ಭಾಗದ ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಅಂತರ್ಜಲ ಕುಸಿಯುವ ಭೀತಿ ಎದುರಾಗಿದೆ.

ಗಾಂಧಿ ಗ್ರಾಮ ಏತ ಯೋಜನೆಯಡಿ ಮೊದಲ ಹಂತದಲ್ಲಿ ನಂಜನಗೂಡು ತಾಲ್ಲೂಕಿನ ೩ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ರಾಘವಾ ಪುರ, ಕಮರಹಳ್ಳಿ ಕೆರೆಗಳನ್ನು ತುಂಬಿಸಲಾಗಿದೆ. ಅವುಗಳು ತುಂಬಿ ಕೋಡಿ ಬಿದ್ದಿವೆ. ಇದೇ ಯೋಜನೆಯ ೨ ಹಂತದಲ್ಲಿ ಬರುವ ಗರಗನಹಳ್ಳಿ, ಹಳ್ಳದ ಮಾದಹಳ್ಳಿ, ಮಳವಳ್ಳಿ ಕೆರೆಗಳನ್ನು ಮಾತ್ರ ತುಂಬಿಸಿಲ್ಲ. ೨ ವರ್ಷಗಳ ಹಿಂದೆ ಪ್ರಾಯೋಗಿಕ ವಾಗಿ ನೀರು ತುಂಬಿಸಿದ್ದನ್ನು ಹೊರತುಪಡಿಸಿದರೆ ಮತ್ತೆ ನೀರು ಬಿಟ್ಟಿಲ್ಲ ಎಂದು ರೈತ ಮುಖಂಡರು ದೂರಿದ್ಧಾರೆ.

ನಂಜನಗೂಡು ತಾಲ್ಲೂಕಿನ ಗಾಂಧಿಗ್ರಾಮದ ಬಳಿ ಹರಿಯುವ ಕಬಿನಿ ನದಿಯ ದಂಡೆಯಲ್ಲಿ ಪಂಪ್‌ಹೌಸ್ ನಿರ್ಮಿಸಿ ನೀರೆತ್ತಿ ನಂಜನಗೂಡು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ. ಎಚ್. ಎಸ್. ಮಹದೇವಪ್ರಸಾದ್ ಅವರು ಕಾವೇರಿ ನೀರಾವರಿ ನಿಗಮದ ಮೂಲಕ ಅನುಷ್ಠಾನಗೊಳಿಸಿದ್ದರು.

೨ ಕೆರೆಗಳು ಕೋಡಿ ಬಿದ್ದಿವೆ: ಈ ಯೋಜನೆಯ ಮೊದಲ ಹಂತದಲ್ಲಿ ಬರುವ ಗುಂಡ್ಲುಪೇಟೆ ತಾಲ್ಲೂಕಿನ ೨ ಕೆರೆಗಳನ್ನು ಮಾತ್ರ ತುಂಬಿಸುತ್ತಿದ್ದಾರೆ. ಅವುಗಳು ಈಗಲೂ ತುಂಬಿ ಕೋಡಿ ಬಿದ್ದಿವೆ. ನೀರೆಲ್ಲ ಗುಂಡ್ಲುಹೊಳೆಯಲ್ಲಿ ಹರಿದು ಹೋಗುತ್ತಿದೆ. ೨ನೇ ಹಂತದಲ್ಲಿ ಸೇರಿರುವ ೩-೪ ಕೆರೆಗಳನ್ನು ಮಾತ್ರ ನಿಗಮದವರು ತುಂಬಿಸಲು ನಿರ್ಲಕ್ಷ್ಯ ತಾಳುತ್ತಿದ್ದಾರೆ ಎಂಬ ದೂರು ಕೇಳಿಬಂದಿದೆ.

೩ ಕೆರೆಗಳಿಗೆ ಪೈಪ್‌ಲೈನ್ ಕೂಡ ಆಗಿದೆ. ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಆದರೆ, ಕಬಿನಿ ನೀರು ಮಾತ್ರ ಕೆರೆಗಳ ಒಡಲು ತುಂಬುತ್ತಿಲ್ಲ. ಈ ಬಗ್ಗೆ ನಿಗಮದ ಅಧಿಕಾರಿಗಳನ್ನು ವಿಚಾರಿಸಿದರೆ ಗಾಂಧಿ ಗ್ರಾಮದ ಬಳಿ ನೀರೆತ್ತುವ ಮೋಟಾರ್ ಕೆಟ್ಟಿದೆ. ಬೇಗೂರು ಬಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ೩ ಕೆರೆಗಳಿಗೆ ಕಬಿನಿ ನೀರು ತುಂಬಿಸಿದ್ದೆವು. ಬೇಗೂರು ಬಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ಸರಿಯಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಅದನ್ನು ಸರಿಪಡಿಸಿ ಕೆರೆಗಳನ್ನು ಆದಷ್ಟು ಬೇಗ ತುಂಬಿಸಲಾಗುವುದು. ಪೈಪ್‌ಲೈನ್ ಸಮಸ್ಯೆಯಿಲ್ಲ. -ಮಹೇಶ್, ಸಹಾಯಕ ಇಂಜಿನಿಯರ್, ಕಾವೇರಿ ನೀರಾವರಿ ನಿಗಮ. ಕಮರಹಳ್ಳಿ ಕೆರೆ ಮತ್ತು ರಾಘವಾಪುರ ಕೆರೆ ತುಂಬಿ ಕೋಡಿ ಬಿದ್ದು ಗುಂಡ್ಲುಹೊಳೆ ಪಾಲಾಗು ತ್ತಿದೆ. ಆದರೆ, ಗರಗನಹಳ್ಳಿ ಕೆರೆ, ಹಳ್ಳದ ಮಾದಹಳ್ಳಿ ಕೆರೆ, ಮಳವಳ್ಳಿ ಕೆರೆಗಳನ್ನು ತುಂಬಿಸದೆ ಇರುವುದರಿಂದ ದನಕರು, ಹಕ್ಕಿ, ಪಕ್ಷಿಗಳಿಗೂ ಕುಡಿಯಲು ನೀರಿಲ್ಲ. ವಿದ್ಯುತ್ ಹಾಗೂ ಇತರೆ ಸಮಸ್ಯೆಗಳನ್ನು ಸರಿಪಡಿಸಿ ಕೆರೆಗಳನ್ನು ತುಂಬಿಸಬೇಕು. –ಮಾಡ್ರಹಳ್ಳಿ ಮಹದೇವಪ್ಪ, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

42 mins ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

3 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago