Andolana originals

ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆಗೆ 316 ತಂಡಗಳು ಸಜ್ಜು

ಚಾ.ನಗರ: ನ.೨೪ರಿಂದ ಡಿ.೯ರವರೆಗೆ ೧೪ ದಿನಗಳ ಕಾಲ ಅಭಿಯಾನ 

ಚಾಮರಾಜನಗರ: ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ನ.೨೪ರಿಂದ ಡಿ.೯ರವರೆಗೆ ಒಟ್ಟು ೧೪ ದಿನಗಳು(ರಜಾ ಸಂದರ್ಭ ಹೊರತುಪಡಿಸಿ) ಕುಷ್ಠರೋಗ ಪತ್ತೆ ಅಭಿಯಾನವನ್ನು (ಎಲ್ ಸಿಡಿಸಿ) ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ಇತರ ಜಿಲ್ಲೆಗಳಲ್ಲಿ ಮೊದಲೇ ಹಂತದ ಅಭಿಯಾನ ನಡೆದಿದ್ದು ಚಾಮರಾಜನಗರ ಸೇರಿದಂತೆ ೧೬ಜಿಲ್ಲೆಗಳಲ್ಲಿ ಎರಡನೇ ಹಂತದಲ್ಲಿ ಅಭಿಯಾನ ನಡೆಯಲಿದೆ. ಕಳೆದ ೫ ವರ್ಷಗಳಲ್ಲಿ ಕುಷ್ಠರೋಗ ಪ್ರಕರಣಗಳು ಆಗೊಮ್ಮೆ ಈಗೊಮ್ಮೆ ಕಂಡುಬಂದಿರುವ ೧೮೧ ಗ್ರಾಮಗಳ, ೮೮ ಸಾವಿರ ಮನೆಗಳ ೩.೭೦ ಲಕ್ಷ ಜನರನ್ನು ಕೇಂದ್ರವಾಗಿಟ್ಟುಕೊಂಡು ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನವನ್ನು ಈ ಬಾರಿ ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ. ಇದಕ್ಕಾಗಿ ೩೧೬ ತಂಡಗಳನ್ನು ನಿಯೋಜನೆ ಮಾಡಲಾಗಿದ್ದು ಪ್ರತಿ ತಂಡವೂ ಪ್ರತಿದಿನ ೨೦ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದೆ.

ಇಲಾಖೆಯ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ಸ್ವಯಂ ಸೇವಕರು ಮನೆ ಮನೆಗೂ ಭೇಟಿ ತಂಡದಲ್ಲಿದ್ದಾರೆ. ಮನೆಯ ಪ್ರತಿಯೊಬ್ಬ ಸದಸ್ಯರನ್ನು ಸಂಪೂರ್ಣ ತಪಾಸಣೆ ಮಾಡಲಿದ್ದಾರೆ. ದೇಹದ ಮೇಲಿನ ಯಾವುದೇ ತಿಳಿಬಿಳಿ ತಾಮ್ರ ವರ್ಣದ, ಕೆಂಪು ಮಿಶ್ರಿತ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕುಷ್ಠರೋಗದ ಪ್ರಾರಂಭಿಕ ಲಕ್ಷಣವಾಗಿರಬಹುದು. ಕೈಕಾಲುಗಳಲ್ಲಿ ಜೋಮು ಹಿಡಿದು ಸ್ಪರ್ಶ ಜ್ಞಾನವಿಲ್ಲದಿರುವುದು, ಮುಖ ಮತ್ತು ಕಿವಿಗಳ ಮೇಲೆ ಎಣ್ಣೆ ಸವರಿದಂತಹ ಹೊಳಪು ಮತ್ತು ಗಂಟುಗಳು, ಕಣ್ಣು ರೆಪ್ಪೆ ಮುಚ್ಚಲು ಸಾಮರ್ಥ್ಯವಿಲ್ಲದಿರುವುದು, ಪಾದಗಳು ಹಾಗೂ ಅಂಗೈಯಲ್ಲಿ ಹುಣ್ಣುಗಳು, ಬಿಸಿ- ತಣ್ಣನೆಯ ವಸ್ತುಗಳನ್ನು ಮುಟ್ಟಿದಾಗ ಅದರ ಅನುಭವವಾಗದಿರುವುದು, ಅಂಗೈ ಮತ್ತು ಪಾದಗಳಲ್ಲಿ ಬಲಹೀನತೆ , ವಸ್ತುಗಳನ್ನು ಹಿಡಿಯಲು ಸಾಮರ್ಥ್ಯವಿಲ್ಲದಿರುವುದು ಈ ರೋಗದ ಪ್ರಮುಖ ಲಕ್ಷಣಗಳು. ಇಂತಹ ಲಕ್ಷಣವುಳ್ಳವರು ಕಂಡುಬಂದಲ್ಲಿ ಅವರನ್ನು ಹತ್ತಿರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಉಪ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಗೆ ಒಳಪಡಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯರ ಸಲಹೆಯಂತೆ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ.

ಈಗಾಗಲೇ ಸಂಬಂಧಪಟ್ಟ ಎಲ್ಲಾ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿಯಾನವನ್ನು ಕುರಿತ ಐ.ಇ.ಸಿ. ಶಿಕ್ಷಣ ಸಾಮಗ್ರಿಗಳಾದ ಬ್ಯಾನರ್, ಪೋಸ್ಟರ್ ಹಾಗೂ ಕರಪತ್ರಗಳನ್ನು ಹಂಚಲಾಗಿದೆ. ಜಾನಪದ ಕಲಾತಂಡಗಳಿಂದ ಬೀದಿ ನಾಟಕಗಳ ಮೂಲಕವೂಕುಷ್ಠ ರೋಗದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮ ನಡೆಯುವ ೧೪ ದಿನಗಳ ಅವಧಿಯಲ್ಲಿಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷಿಸಲು ಬಂದಾಗ ಸಾರ್ವಜನಿಕರು ಸಹಕರಿಸಿ ಪರೀಕ್ಷಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು.

ಜಿಲ್ಲೆಯಲ್ಲಿ ಕುಷ್ಠ ರೋಗ ಪ್ರಕರಣಗಳು ಕಡಿಮೆಯಾಗುತ್ತಿವೆ. ೨೦೨೨-೨೩ರ ಸಾಲಿನಲ್ಲಿ ೭೨, ೨೦೨೩-೨೪ರಲ್ಲಿ ೭೮ ಪ್ರಕರಣ ವರದಿಯಾಗಿದ್ದವು. ೨೦೨೪-೨೫ರಲ್ಲಿ ಈ ಸಂಖ್ಯೆ ೬೦ಕ್ಕೆ ಇಳಿದಿತ್ತು. ೨೦೨೫ರ ಕಳೆದ ಏಪ್ರಿಲ್ ನಿಂದ ಅಕ್ಟೋಬರ್ ತನಕ ೩೧ ಸಕ್ರಿಯ ಪ್ರಕರಣಗಳು ಕಂಡುಬಂದಿವೆ. ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಕಾರಣ ಕಳೆದ ೫ ವರ್ಷಗಳಲ್ಲಿ ಆಗೊಮ್ಮೆ ಈಗೊಮ್ಮೆ ಪ್ರಕರಣ ವರದಿಯಾಗುತ್ತಿರುವ ಜಿಲ್ಲೆಯಲ್ಲಿನ ಊರು, ವಾರ್ಡ್‌ಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನ ವೇಳೆ ತಪಾಸಣೆ ಮಾಡಲಾಗುತ್ತದೆ. ಈ ಮುಂಚೆ ಜಿಲ್ಲೆಯಾದ್ಯಂತ ಅಭಿಯಾನ ಮಾಡಲಾಗುತ್ತಿತ್ತು. ಹಾಗಾಗಿ ಕಳೆದ ವರ್ಷ ಮನೆ ಮನೆ ತಪಾಸಣೆಗೆ ೮೮೦ ತಂಡಗಳನ್ನು ರಚನೆ ಮಾಡಲಾಗಿತ್ತು. ಈ ಬಾರಿ ನಿರ್ದಿಷ್ಟ ವಾರ್ಡ್, ಊರುಗಳಲ್ಲಿ ಮಾತ್ರ ಮಾಡುತ್ತಿರುವುದರಿಂದ ೩೧೬ ತಂಡಗಳನ್ನಷ್ಟೇ ಮನೆ ಮನೆ ಭೇಟಿಗೆ ನಿಯೋಜನೆ ಮಾಡಲಾಗಿದೆ.

” ಜಿಲ್ಲೆಯನ್ನು ೨೦೨೭ಕ್ಕೆ ಕುಷ್ಠರೋಗ ಮುಕ್ತ ಮಾಡಬೇಕು ಎಂಬುದು ಇಲಾಖೆಯ ಆಶಯ. ಚರ್ಮಕ್ಕೆ ಸಂಬಂಧಿಸಿದ ಯಾವುದೇ ತೊಂದರೆಇದ್ದರೂ ತಪಾಸಣೆ ಮಾಡಿಸಿಕೊಳ್ಳಬೇಕು. ಕುಷ್ಠ ರೋಗ ಕಂಡು ಬಂದವರಿಗೆ ಉಚಿತವಾಗಿ ಔಷಧಿ ನೀಡಲಾಗುತ್ತದೆ. ಮಾತ್ರೆ ಸೇವಿಸಿದ ಕೇವಲ ಒಂದೇ ತಿಂಗಳಲ್ಲಿ ರೋಗ ನಿಯಂತ್ರಣಕ್ಕೆ ಬಂದು ಕ್ರಮೇಣ ಗುಣವಾಗುತ್ತದೆ.”

ಡಾ.ಚಂದ್ರಶೇಖರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

11 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

26 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

46 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago