Andolana originals

ಗಾಳಿ-ಮಳೆಗೆ ನೆಲಕಚ್ಚಿದ 1,791 ವಿದ್ಯುತ್ ಕಂಬಗಳು; 35 ಕೋಟಿ ರೂ. ನಷ್ಟ

• ಪುನೀತ್ ಮಡಿಕೇರಿ

ಮಡಿಕೇರಿ: ಒಂದು ವಾರದಿಂದ ಸುರಿದ ವರುಣಾರ್ಭಟಕ್ಕೆ ಜಿಲ್ಲೆ ನಲುಗಿದ್ದು, ಸುಮಾರು ರೂ.35 ಕೋಟಿಗೂ ಸರ್ಕಾರಿ ಆಸ್ತಿ-ಪಾಸ್ತಿ ನಷ್ಟಕ್ಕೀಡಾಗಿದೆ.

ವಾರದಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ವಿವಿಧೆಡೆ ಹಲವು ಮನೆಗಳು ಕುಸಿದಿವೆ. ಪ್ರವಾಹ, ಗಾಳಿ ಮಿಶ್ರಿತ ಮಳೆಗೆ ಮರಗಳು ಧರೆಗುರುಳಿದ್ದು, 1,791 ವಿದ್ಯುತ್‌ ಕಂಬಗಳು ನೆಲಕಚ್ಚಿವೆ. ಗ್ರಾಮೀಣ ರಸ್ತೆ ಗಳು, ಸೇತುವೆಗಳು ಹಾನಿಯಾಗಿವೆ. ಇದರಿಂದ ಲೋಕೋಪಯೋಗಿ ಇಲಾ 23 26.99 ಕೋಟಿ ರೂ., ಪಂಚಾಯತ್‌ ರಾಜ್ ಇಂಜಿನಿಯ ರಿಂಗ್ ವಿಭಾಗಕ್ಕೆ 6.83 ಕೋಟಿ ರೂ., ಸೆಸ್ಕ್‌ಗೆ 1.77 ಕೋಟಿ ರೂ. ಸೇರಿದಂತೆ ಒಟ್ಟು ಜೂ.1ರಿಂದ ಜು.20ರವರೆಗೆ 35 ಕೋಟಿ ರೂ. ಸರ್ಕಾರಿ ಆಸ್ತಿ-ಪಾಸ್ತಿಗೆ ನಷ್ಟ ಉಂಟಾಗಿದೆ.

ಇದುವರೆಗೂ 5 ಜಾನುವಾರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಜಿಲ್ಲಾ ಡಳಿತದ ತಂಡ ಇದುವರೆಗೂ 80ಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸುವ ಕಾರ್ಯ ಮಾಡಿದೆ.

2 ಕಡೆಗಳಲ್ಲಿ ಭೂಕುಸಿತ, 5 ಕಡೆಗಳಲ್ಲಿ ಅಲ್ಪಪ್ರಮಾಣದ ಬರೆಜರಿತಘಟನೆಗಳುವರದಿಯಾಗಿವೆ. ಮೈಸೂರು-ಮಾಣಿ ರಾಷ್ಟ್ರೀಯ ಹೆದ್ದಾರಿ 275ರ ನಡುವಿನ ಕರ್ತೋಜಿ ಬಳಿ ಬರೆ ಜರಿದು ರಸ್ತೆ ಹಾನಿಗೀಡಾಗಿದೆ. ಪರಿಣಾಮ ಜು.22ರವರೆಗೆ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ನೀಡಿದ್ದಾರೆ.

ಜೂ.1ರಿಂದ ವರುಣಾಘಾತಕ್ಕೆ 142 ಮನೆಗಳು ಹಾನಿಯಾಗಿವೆ. 12 ಮನೆಗಳು ಪೂರ್ಣ, 34 ಅಲ್ಪ ಪ್ರಮಾಣ, 96 ಮನೆಗಳು ಭಾಗಶಃ ಹಾನಿಗೀಡಾಗಿದ್ದು, ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ಆಧಾರದಲ್ಲಿ ಎನ್.ಡಿ.ಆರ್.ಎಫ್. ಹಾಗೂ ಎಸ್. ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಪರಿಹಾರ ನೀಡಲು ಜಿಲ್ಲಾಡಳಿತ ಕ್ರಮವಹಿಸಿದೆ. ಇದರೊಂದಿಗೆ 2 ಶಾಲೆಗಳು, 1 ಅಂಗನವಾಡಿಗೂ ಹಾನಿಯಾಗಿದೆ.

9 ಗ್ರಾಮಗಳಲ್ಲಿ ಪ್ರವಾಹ ಮತ್ತು ಭೂ ಕುಸಿತ ಸಮಸ್ಯೆಗಳು ಉಂಟಾಗಿತ್ತು. ಆ ಪ್ರದೇಶಗಳಲ್ಲಿದ್ದ 90 ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯಲ್ಲಿ 4 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 35 ಜನರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಸದ್ಯಕ್ಕೆ ಮಣ್ಣು, ವೆಟ್ ಮಿಕ್ಸ್ ಬಳಸಿ ರಸ್ತೆ ದುರಸ್ತಿಪಡಿಸುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ಸಿದ್ದೇಗೌಡ ಮಾಹಿತಿ ಒದಗಿಸಿದ್ದಾರೆ.

ಹಾನಿಗೀಡಾದ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್, ವಿದ್ಯುತ್ ತಂತಿಗಳನ್ನು ಬದಲಾವಣೆ ಮಾಡುವ ಕೆಲಸ ನಡೆಯುತ್ತಿದೆ. ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದು, ಈಗಾಗಲೇ ತಹಸಿಲ್ದಾರ್ ಖಾತೆಗೆ 1 ಕೋಟಿ ರೂ. ಬಿಡುಗಡೆಗೊಳಿಸಿ ಮಳೆಗಾಲ ಸಂಬಂಧ ಖರ್ಚಿಗೆ ವಿನಿಯೋಗ ಮಾಡಲಾಗುತ್ತಿದೆ.

ಎನ್.ಡಿ.ಆರ್.ಎಫ್. ಪಡೆ ಅಭಯ: ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಎನ್.ಡಿ.ಆರ್.ಎಫ್. ಪಡೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಅಗ್ನಿಶಾಮಕ ದಳ, ಪೊಲೀಸ್‌ ಇಲಾಖೆ, ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್‌ ತಂಡಗಳು, ಅಧಿಕಾರಿಗಳು ಮಳೆಗಾಲದ ಮುನ್ನೆಚ್ಚರಿಕೆಯತ್ತ ಕಾರ್ಯೋನ್ಮುಖರಾಗಿದ್ದಾರೆ.

ಕೋಟ್ಸ್‌))

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದ್ದು, ಈ ಸಂಬಂಧ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುವುದರ ಜತೆಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ಮಳೆಯಿಂದ ಉಂಟಾಗಿರುವ ನಷ್ಟದ ಸಂಬಂಧ ಕಂದಾಯ ಸಚಿವರಿಗೂ ಮಾಹಿತಿ ನೀಡಲಾಗುವುದು
-ಎನ್.ಎಸ್.ಭೋಸರಾಜು, ಉಸ್ತುವಾರಿ ಸಚಿವರು, ಕೊಡಗು ಜಿಲ್ಲೆ

ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಜನಜೀವನಕ್ಕೆ ಅಸ್ತವ್ಯಸ್ತ ಉಂಟಾಗಿತ್ತು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಾಗುವುದು. ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಳ್ಳುವ ಕೆಲ ಭಾಗಗಳಲ್ಲಿ ರಸ್ತೆ ಎತ್ತರಿಸುವ ಸಂಬಂಧ ಕ್ರಿಯಾಯೋಜನೆ ಸರ್ಕಾರಕ್ಕೆ ಸಲ್ಲಿಸಿ ಶೀಘ್ರ ಕಾಮಗಾರಿ ನಡೆಸಲಾಗುವುದು.
-ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago