Andolana originals

೪ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ

ಆನೆ-ಮಾನವ ಸಂಘರ್ಷ ತಡೆಯಲು ಕ್ರಮ; ಅರಣ್ಯ ಇಲಾಖೆಯ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ

ಪ್ರಶಾಂತ್ ಎಸ್.

ಮೊದಲ ಬಾರಿ ಕಾಡಾನೆಗಳಿಗೆ ಕರ್ನಾಟಕದಲ್ಲಿಯೇ ಅತ್ಯಾಧುನಿಕ ರೇಡಿಯೋ ಕಾಲರ್

ಆನೆ ಮತ್ತು ಮಾನವ ಸಂಘರ್ಷ ತಡೆಯಲು ರೇಡಿಯೋ ಕಾಲರ್  ಅಳವಡಿಕೆ

ನುರಿತ ವೈದ್ಯರು, ೪೦ ಸಿಬ್ಬಂದಿ, ೪ ಸಾಕಾನೆಗಳ ಸಹಕಾರ  ಪರಿಸರ ಸ್ನೇಹಿ ಕಚ್ಚಾವಸ್ತು ಬಳಸಿ ರೇಡಿಯೊ ಕಾಲರ್ ತಯಾರಿಕೆ

ರೇಡಿಯೊ ಕಾಲರ್ ಅಳವಡಿಸಿರುವ ಬ್ಯಾಟರಿ ಬಲ್ಬ್ ಸರ್ಕ್ಯೂಟ್ ಸಮಸ್ಯೆ ಆದಲ್ಲಿ ತಕ್ಷಣ ಬದಲಾಯಿಸಲು ಅವಕಾಶ

ಮೈಸೂರು: ಕಾಡಾನೆ ಮತ್ತು ಮಾನವ ಸಂಘರ್ಷ ತಡೆಯಲು, ಆನೆಗಳ ಮೇಲೆ ನಿಗಾ ಇಡಲು ಹಾಗೂ ಸ್ಥಳೀಯರಿಗೆ ಆನೆಗಳ ಬರುವಿಕೆ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಲು ರೇಡಿಯೋ ಕಾಲರ್ ಅಳವಡಿಸಿ ಅವುಗಳ ಉಪಟಳ ತಡೆಯಲು ಅರಣ್ಯ ಇಲಾಖೆ ಮುಂದಾಗಿದ್ದು, ಮೊದಲ ಹಂತದಲ್ಲಿ ೪ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯ ಯಶಸ್ವಿಯಾಗಿದೆ.

ಜಿಎಎಸ್‌ಎಂ ತಂತ್ರಜ್ಞಾನದ ಮೂಲಕ ಡ್ಯಾಶ್ ಬೋರ್ಡ್ ಮಾಹಿತಿ ರವಾನೆಯಾಗಲಿದ್ದು ನಂತರ ಸ್ಥಳೀಯರಿಗೆ ಆನೆಗಳ ಬಗ್ಗೆ ಮಾಹಿತಿ ಕಳುಹಿಸಬಹುದಾಗಿದೆ.

ಈ ಹಿಂದೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೀಡು ಬಿಟ್ಟಿದ್ದ ಹತ್ತು ಆನೆಗಳ ಹಿಂಡಿನಲ್ಲಿ ತಂಡದ ನಾಯಕತ್ವ ವಹಿಸುವ ಹೆಣ್ಣಾನೆಯನ್ನು ಗುರುತಿಸಿ ಅದಕ್ಕೆ ಯಶಸ್ವಿಯಾಗಿ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಈ ಆನೆಗೆ ಸುಮಾರು ೩೦-೩೫ ವರ್ಷ ಆಗಿತ್ತು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಕಾರ್ಯಾಚರಣೆ ವಿಧಾನ: ಮೊದಲು ಕಾಡಾನೆಗಳ ಹಿಂಡನ್ನು ಅರಣ್ಯ ಸಿಬ್ಬಂದಿ ಗುರುತಿಸಿ, ಅಲ್ಲಿನ ಮುಂಚೂಣಿ ಹೆಣ್ಣಾನೆಗೆ ಸಾಕಾನೆಗಳಾದ ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು ಮತ್ತು ಬಳ್ಳೆ ಅನೆ ಶಿಬಿರದ ಗೋಪಾಲಸ್ವಾಮಿ ನೆರವಿನಿಂದ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು.

ಬಳಿಕ ಸುಮಾರು ೨೦ ನಿಮಿಷಗಳ ಕಾಲ ಓಡಾಡಿದ ಹೆಣ್ಣಾನೆಯನ್ನು ಸಾಕಾನೆಗಳ ಸಹಾಯದಿಂದ ಬೇರ್ಪಡಿಸಲಾಯಿತು. ಅಷ್ಟರಲ್ಲಿ ಮಂಕಾದ ಆನೆಗೆ ಸಾಕಾನೆಗಳ ಸಹಾಯದಿಂದ ರೇಡಿಯೋ ಕಾಲರ್ ಅಳವಡಿಸಿ ನಟ್ಟು ಮತ್ತು ಬೋಲ್ಟ್ ಹಾಕಿ ಭದ್ರಪಡಿಸಲಾಯಿತು. ಬೆಳಿಗ್ಗೆ ಆರಂಭವಾದ ಕಾರ್ಯಚರಣೆ ಮಧ್ಯಾಹ್ನ ೩.೩೦ರ ವೇಳೆಗೆ ಯಶಸ್ವಿಯಾಗಿ ಕೊನೆಗೊಂಡಿದೆ.

ಪ್ರಯೋಜನವೇನು?: ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವುದರಿಂದ ಎಸ್ಟೇಟ್ ಹಾಗೂ ಇತರೆಡೆಗೆ ಓಡಾಡುವ ಆನೆಗಳು ಯಾವ ಪ್ರದೇಶದಲ್ಲಿವೆ? ಎಷ್ಟಿವೆ? ಕಾರ್ಯಾಚರಣೆ ನಡೆಸಿ ಮತ್ತೆ ಹೇಗೆ ಕಾಡಿಗೆ ಸೇರಿಸಬಹುದು ಎಂಬ ಮಾಹಿತಿ ತಿಳಿಯಬಹುದಾಗಿದೆ. ಇದರಿಂದ ಕಾಡಾನೆಗಳ ಉಪಟಳವನ್ನು ಸಾಕಷ್ಟು ನಿಯಂತ್ರಿಸಬಹುದು. ಜೊತೆಗೆ ಸ್ಥಳೀಯರಿಗೂ ಆನೆಗಳ ಬಗ್ಗೆ ಮಾಹಿತಿ ನೀಡಲು ನೆರವಾಗಲಿದೆ.

ಹೊಸದಾಗಿ ನಾಲ್ಕು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿದ್ದು ವಿವಿಧೆಡೆ ಉಪಟಳ ನೀಡುವ ಆನೆಗಳ ಹಿಂಡನ್ನು ಪತ್ತೆ ಹಚ್ಚಿ ಅಲ್ಲಿನ ಆನೆಗಳಿಗೂ ರೇಡಿಯೋ ಕಾಲರ್ ಅಳವಡಿಸ ಲಾಗುತ್ತದೆ. ಆನೆಗಳ ಓಡಾಟ ಹೆಚ್ಚು ಎಲ್ಲೆಲ್ಲಿದೆ ಎನ್ನುವ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಇದು ಸಹಕಾರಿಯಾಗಲಿದೆ. ಅಲ್ಲದೇ, ಈ ಹಿಂದೆ ಎಲ್ಲೆಲ್ಲಿ ಆನೆ ಗಳು ಓಡಾಡಿದ್ದವು ಎಂಬ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ನೆರವಾಗಲಿದೆ.

ದಕ್ಷಿಣ ಆಫ್ರಿಕಾ ಹಾಗೂ ಜರ್ಮನಿ ಯಿಂದ ಆಮದು ಮಾಡಿಕೊಳ್ಳುತ್ತಿದ್ದ ರೇಡಿಯೋ ಕಾಲರ್ ಗಳಿಗೆ ೬.೫೦ ಲಕ್ಷ ರೂ. ವೆಚ್ಚ ತಗುಲುತ್ತಿತ್ತು. ತೂಕವೂ ೧೬ರಿಂದ ೧೭ ಕೆ.ಜಿ. ಇರುತ್ತಿತ್ತು. ಆದರೆ ಸ್ಥಳೀಯ ರೇಡಿಯೋ ಕಾಲರ್‌ಗಳು ೧.೮೦ ಲಕ್ಷ ರೂ.ಗೆ ಸಿಗುತ್ತವೆ. ೭.೫ ಕೆ.ಜಿ. ತೂಕವಿರುವ ಸ್ಥಳೀಯ ರೇಡಿಯೋ ಕಾಲರ್ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

” ವಿದೇಶದಿಂದ ಆಮದು ಮಾಡಿಕೊಳ್ಳ ಲಾಗುತ್ತಿದ್ದ ರೇಡಿಯೋ ಕಾಲರ್‌ಗಳಿಂದ ನಮ್ಮ ಅರಣ್ಯ ಮತ್ತು ವನ್ಯಜೀವಿಗಳ ಮಾಹಿತಿ ಸೋರಿಕೆ ಆಗುವ ಅಪಾಯವೂ ಇತ್ತು. ಮೊದಲ ಹಂತದಲ್ಲಿ ದೇಶೀಯವಾಗಿ ನಾಲ್ಕು ಕಾಡಾನೆಗಳಿಗೆ ಈ ರೇಡಿಯೋ ಕಾಲರ್ ಅಳವಡಿಸಿದ್ದು ಯಾವ ಸಮಸ್ಯೆ ಇಲ್ಲದೇ ಯಶಸ್ವಿಯಾಗಿದೆ.”

-ಪಿ.ಎ.ಸೀಮಾ, ಡಿಸಿಎಫ್, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ 

 

 

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

12 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

14 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago