Andolana originals

ಸಂಚಾರ ನಿಯಮ ಉಲ್ಲಂಘನೆ| 45ಲಕ್ಷ ಪ್ರಕರಣ; 231 ಕೋಟಿ ರೂ.ಬಾಕಿ

ಶೇ. ೫೦ ರಿಯಾಯಿತಿ ನೀಡಿದ್ದ ರೂ ಕಟಿಲ್ಲ ದಂಡ

ಎಚ್. ಎಸ್. ದಿನೇಶ್‌ಕುಮಾರ್
ಮೈಸೂರು: ಸಂಚಾರ ನಿಯಮ ಉಲ್ಲಂಘನೆಯ ಸಂಬಂಧ ವಾಹನ ಸವಾರರ ವಿರುದ್ಧ ಮೈಸೂರು ನಗರ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ದಾಖಲಾಗಿರುವ ಪ್ರಕರಣಗಳು ೪೫,೬೨ ಲಕ್ಷ. ಪೊಲೀಸ್ ಇಲಾಖೆಗೆ ಬರಬೇಕಾಗಿರುವ ದಂಡದ ಮೊತ್ತ ಬರೋಬ್ಬರಿ ೨,೩೧,೮೬ ಕೋಟಿ ರೂ!

ಸಂಚಾರ ನಿಯಮಗಳನ್ನು ಉಲ್ಲಂಘಿಸಬೇಡಿ ಎಂದು ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಸಂಘ, ಸಂಸ್ಥೆಗಳು ಸಾಕಷ್ಟು ಜಾಗೃತಿ ಮೂಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳ ಜೊತೆಗೆ ದಂಡದ ಪ್ರಮಾಣವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ನ್ಯಾಯಾಲಯದಲ್ಲಿ ನಡೆಯುವ ಲೋಕ ಅದಾಲತ್ ಸೂಚನೆಯಂತೆ ದಂಡದ ಹಣದಲ್ಲಿ ಶೇ. ೫೦ ರಷ್ಟು ರಿಯಾಯಿತಿ ನೀಡುವ ಮೂಲಕ ಕೋಟ್ಯಂತರ ರೂ. ವಸೂಲು ಮಾಡಲಾಗಿದೆ. ಆದರೂ ಕೂಡ ೪೫,೬೨,೬೩೫ ಪ್ರಕರಣಗಳು ಇತ್ಯರ್ಥವಾಗಿಲ್ಲ. ಇದರ
ಜೊತೆಗೆ ದಂಡದ ರೂಪದಲ್ಲಿ ಪೊಲೀಸ್ ಇಲಾಖೆಗೆ ಬರಬೇಕಾಗಿರುವ ಮೊತ್ತ ಬರೋಬ್ಬರಿ ೨೩೧,೮೬,೬೩,೨೦೦ ರೂ. ಆಗಿದೆ.

ತಪಾಸಣೆಯಿಂದ ಪ್ರಯೋಜನವಿಲ್ಲವೆ?
ಸಂಚಾರ ಪೊಲೀಸರು ಪ್ರತಿದಿನ ಆಯಕಟ್ಟಿನ ಜಾಗಗಳಲ್ಲಿ ವಾಹನ ತಪಾಸಣೆ ಕೈಗೊಳ್ಳುತ್ತಾರೆ. ಆದರೆ, ದಂಡ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಆಗುತ್ತಿಲ್ಲ. ಜೊತೆಗೆ ನಿಯಮ ಉಲ್ಲಂಘಿಸುವವರನ್ನು ಬಿಟ್ಟು ಕಳುಹಿಸುವಂತೆ ಗಣ್ಯರಿಂದ ಪೊಲೀಸರಿಗೆ ಶಿಪಾರಸ್ಸಿನ ಕಾಟ ಬೇರೆ.

ಮನೆಗೆ ತೆರಳಿ ದಂಡ ವಸೂಲಿ: ಇದೀಗ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಬಾಕಿ ಉಳಿಸಿಕೊಂಡಿರುವವರನ್ನು ಗುರಿಯಾಗಿರಿಸಿಕೊಂಡು ಕಾರ್ಯಾಚರಣೆ ಆರಂಭಿಸಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ದಂಡ ವಸೂಲಿಗೆ ಸಂಬಂಽಸಿದಂತೆ ವಾಹನ ಸವಾರರ ಮನೆಗಳಿಗೆ ತೆರಳಿ ದಂಡದ ಹಣವನ್ನು ವಸೂಲು ಮಾಡಲು ಹಿರಿಯ ಅಽಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ದಂಡ ವಸೂಲಿಗೆ ಪೊಲೀಸರು ನಿಮ್ಮ ಮನೆ ಬಾಗಿಲಿಗೆ ಬರುವ ಸಂಭವವಿದೆ.

ನೋಟಿಸ್ ಮುದ್ರಣ ನಿಧಾನಗತಿ
ನಗರದಲ್ಲೀಗ ಸಾಕಷ್ಟು ಭಾಗದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದಿನವೊಂದಕ್ಕೆ ಸಾವಿರಾರು ವಾಹನಗಳು ಸಂಚಾರ ನಿಯಮ ಉಲ್ಲಂಘಿಸುತ್ತಿರುವುದು ಸಿಸಿ ಕ್ಯಾಮೆರಾಗಳಲ್ಲಿ ದಾಖಲಾಗುತ್ತಿದೆ. ಆದರೆ, ಅಷ್ಟೂ ವಾಹನ ಸವಾರರಿಗೆ ನೋಟಿಸ್ ನೀಡಲು ಪೊಲೀಸ್ ಸಿಬ್ಬಂದಿಗಳಿಗೆ ಸಾಧ್ಯವಾಗುತ್ತಿಲ್ಲ. ಕಾರಣ ಸಿಬ್ಬಂದಿ ಕೊರತೆ ಹಾಗೂ ನೋಟಿಸ್ ಪ್ರತಿಗಳ ಸರಬರಾಜಿನಲ್ಲಿ ಆಗುತ್ತಿರುವ ವ್ಯತ್ಯಯ. ಹೀಗಾಗಿ ದಂಡದ ಹಣ ವಸೂಲಾತಿ ಕಷ್ಟಕರವಾಗುತ್ತಿದೆ ಎಂದು ಪೊಲೀಸರು ಹೇಳುತ್ತಾರೆ.

ವಾಹನ ತಪಾಸಣೆ ವೇಳೆ ಸಾಕಷ್ಟು ಮಂದಿ ಸವಾರರಿಂದ ಬಾಕಿ ದಂಡವನ್ನು ವಸೂಲು ಮಾಡಲಾಗುತ್ತಿದೆ. ಆದರೂ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ದಂಡದ ಬಾಕಿ ಹೆಚ್ಚಿದೆ. ಹೀಗಾಗಿ ಪೊಲೀಸ್ ಸಿಬ್ಬಂದಿಗಳು ದಂಡ ವಸೂಲಿಗೆ ಮನೆ ಬಾಗಿಲಿಗೆ ತೆರಳಲು ತಯಾರಿ ನಡೆಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿರುವವರು ಸಮೀಪದ ಪೊಲೀಸ್ ಠಾಣೆಗಳಿಗೆ ತೆರಳಿ ಆದಷ್ಟು ಶೀಘ್ರವಾಗಿ ದಂಡ ಪಾವತಿಸಲು ಅವಕಾಶವಿದೆ. -ಪರಶುರಾಮಪ್ಪ, ಎಸಿಪಿ ಸಂಚಾರ ವಿಭಾಗ.

ಆಂದೋಲನ ಡೆಸ್ಕ್

Recent Posts

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

24 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

1 hour ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

2 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

3 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

3 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

3 hours ago