ಪ್ರಶಾಂತ್ ಎಸ್.
ದಸರಾ ಮಹೋತ್ಸವದ ಹಿನ್ನೆಲೆ,ನಿತ್ಯ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಣೆ
ಮೈಸೂರು: ದಸರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿ ಗರು ಬರುವುದರಿಂದ ಆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಿ ನಗರದ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ನಗರಪಾಲಿಕೆ ಹೆಚ್ಚುವರಿಯಾಗಿ ೫೦೦ ಮಂದಿ ಪೌರಕಾರ್ಮಿಕರ ನಿಯೋಜನೆಗೆ ಮುಂದಾಗಿದೆ.
ನಗರಪಾಲಿಕೆಯಲ್ಲಿ ಪ್ರಸ್ತುತ ೧,೯೫೦ ಮಂದಿ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ಮಾಡುತ್ತಿದ್ದು, ದಸರಾ ವೇಳೆಗೆ ಇನ್ನೂ ೫೦೦ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು, ದಿನದ ೨೪ ಗಂಟೆಗಳ ಕಾಲ ಮೂರು ಪಾಳಿಗಳಲ್ಲಿ ನಗರದ ಸ್ವಚ್ಛತೆ ಕಾಪಾಡಲು ಯೋಜನೆ ರೂಪಿಸಿದೆ.
ಮೂರು ಪಾಳಿಗಳಲ್ಲಿ ಸ್ವಚ್ಛತಾ ಕಾರ್ಮಿಕರು ಭಾಗಿ: ಕಂಡ ಕಂಡಲ್ಲಿ ಸಿಗುವ ಕಸವನ್ನು ಹುಡುಕಿ ತೆಗೆಯುವ ಮೂಲಕ ದಸರಾ ವೇಳೆಯಲ್ಲಿ ನಗರವನ್ನು ಕಸ ಮುಕ್ತವನ್ನಾಗಿಸಲು ಒಟ್ಟು ೨,೪೫೦ ಮಂದಿ ಪೌರಕಾರ್ಮಿಕರು ಹಗಲು- ರಾತ್ರಿ ಶ್ರಮಿಸಲಿದ್ದಾರೆ.
ಎಲ್ಲೆಲ್ಲಿ ನಿಯೋಜನೆ? ದಸರಾ ಮಹೋತ್ಸವದ ಪ್ರಯುಕ್ತ ಅರಮನೆ ಆವರಣ, ಫಲಪುಷ್ಪ ಪ್ರದರ್ಶನ ನಡೆಯುವ ಕುಪ್ಪಣ್ಣ ಪಾರ್ಕ್, ಆಹಾರ ಮೇಳ ನಡೆಯುವ ಮಹಾರಾಜ ಕಾಲೇಜು ಮೈದಾನ, ಪುಸ್ತಕ ಪ್ರದರ್ಶನ ಮೇಳ ನಡೆಯುವ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ, ಯುವ ಸಂಭ್ರಮ ನಡೆಯುವ ಬಯಲು ರಂಗ ಮಂದಿರದಲ್ಲಿ ೨೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ಎರಡು ಪಾಳಿಗಳಲ್ಲಿ ನಿಯೋಜನೆ ಮಾಡಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತದೆ.
ನಗರ ಸ್ವಚ್ಛತೆ: ದಸರಾ ಕಾರ್ಯಕ್ರಮ ಹೊರತುಪಡಿಸಿ ಸಾರ್ವಜನಿಕ ರಸ್ತೆಗಳು, ವೃತ್ತಗಳು ಮತ್ತು ಉದ್ಯಾನಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ೩೦೦ ಮಂದಿಯನ್ನು ಬಳಕೆ ಮಾಡಿಕೊಳ್ಳಲಿದ್ದು, ೩ ಪಾಳಿಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಯುವ ದಸರಾ ನಡೆಯುವ ಸ್ಥಳದಲ್ಲಿ ವಿಶೇಷವಾಗಿ ೧೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ನಿಯೋಜನೆ ಮಾಡಲಾಗುತ್ತದೆ.
೭೦ ವಾಹನಗಳ ಬಳಕೆ: ಕಸ ವಿಲೇವಾರಿಗೆ ನಗರಪಾಲಿಕೆಯಿಂದ ೬೦ ವಾಹನಗಳನ್ನು ನೀಡಲಾಗುತ್ತಿದ್ದು, ಇದರೊಂದಿಗೆ ರಿಂಗ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ೧೦ ಜೆಸಿಬಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ಬಾರಿಯೂ ಅಚ್ಚುಕಟ್ಟಾಗಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ನಗರದ ಹೊರ ವಲಯ ದಲ್ಲಿ ಯುವ ದಸರಾ ನಡೆದರೆ ಅಲ್ಲಿನ ಸ್ವಚ್ಛತಾ ಕಾರ್ಯಕ್ಕೂ ನಗರ ಪಾಲಿಕೆಯ ಸ್ವಚ್ಛತಾ ಕಾರ್ಮಿಕರನ್ನು ಬಳಸಿಕೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
” ದಸರಾ ಪ್ರಯುಕ್ತ ಹೆಚ್ಚುವರಿಯಾಗಿ ೫೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿಕೊಳ್ಳಲಾಗಿದ್ದು, ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳು ಸೇರಿದಂತೆ ನಗರದ ರಸ್ತೆ ಮತ್ತು ಪ್ರಮುಖ ವೃತ್ತಗಳಲ್ಲಿ ದಿನವಿಡೀ ಸ್ವಚ್ಛತಾ ಕಾರ್ಯ ನಡೆಯಲಿದೆ.”
-ಡಾ.ಎನ್.ಪಿ.ವೆಂಕಟೇಶ್, ಆರೋಗ್ಯಾಧಿಕಾರಿ, ನಗರಪಾಲಿಕೆ
” ಸ್ವಚ್ಛತಾ ಕಾರ್ಯದ ಮೇಲುಸ್ತುವಾರಿಯನ್ನು ಮೇಲ್ವಿಚಾರಕರು, ಆರೋಗ್ಯ ನಿರೀಕ್ಷಕರು, ಪರಿಸರ ಇಂಜಿನಿಯರ್ಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳು (ಪರಿಸರ) ಹಾಗೂ ಆರೋಗ್ಯಾಧಿಕಾರಿಗಳು, ವಲಯ ಆಯುಕ್ತರು, ಉಪ ಆಯುಕ್ತರು ಮಾಡಲಿದ್ದು, ತ್ಯಾಜ್ಯ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು. ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವ ಸ್ವಚ್ಛತಾ ಕಾರ್ಮಿಕರು ನಿತ್ಯ ಕೆಲಸಕ್ಕೆ ಹಾಜರಾಗುತ್ತಿದ್ದಾರೆಯೇ, ಸ್ವಚ್ಛತಾ ಕಾರ್ಯ ಉತ್ತಮವಾಗಿ ನಡೆಯುತ್ತಿದೆಯೇ ಎಂದು ಪರಿಶೀಲನೆ ನಡೆಸುತ್ತಾರೆ.”
-ಶೇಖ್ ತನ್ವೀರ್ ಆಸೀಫ್, ಆಯುಕ್ತರು, ನಗರ ಪಾಲಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್ಕೇರ್…