Andolana originals

ಸ್ವಚ್ಛತೆಗೆ ೫೦೦ ಪೌರ ಕಾರ್ಮಿಕರ ನಿಯೋಜನೆ

ಪ್ರಶಾಂತ್ ಎಸ್.

ದಸರಾ ಮಹೋತ್ಸವದ ಹಿನ್ನೆಲೆ,ನಿತ್ಯ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಣೆ 

ಮೈಸೂರು: ದಸರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿ ಗರು ಬರುವುದರಿಂದ ಆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಿ ನಗರದ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ನಗರಪಾಲಿಕೆ ಹೆಚ್ಚುವರಿಯಾಗಿ ೫೦೦ ಮಂದಿ ಪೌರಕಾರ್ಮಿಕರ ನಿಯೋಜನೆಗೆ ಮುಂದಾಗಿದೆ.

ನಗರಪಾಲಿಕೆಯಲ್ಲಿ ಪ್ರಸ್ತುತ ೧,೯೫೦ ಮಂದಿ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ಮಾಡುತ್ತಿದ್ದು, ದಸರಾ ವೇಳೆಗೆ ಇನ್ನೂ ೫೦೦ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು, ದಿನದ ೨೪ ಗಂಟೆಗಳ ಕಾಲ ಮೂರು ಪಾಳಿಗಳಲ್ಲಿ ನಗರದ ಸ್ವಚ್ಛತೆ ಕಾಪಾಡಲು ಯೋಜನೆ ರೂಪಿಸಿದೆ.

ಮೂರು ಪಾಳಿಗಳಲ್ಲಿ ಸ್ವಚ್ಛತಾ ಕಾರ್ಮಿಕರು ಭಾಗಿ: ಕಂಡ ಕಂಡಲ್ಲಿ ಸಿಗುವ ಕಸವನ್ನು ಹುಡುಕಿ ತೆಗೆಯುವ ಮೂಲಕ ದಸರಾ ವೇಳೆಯಲ್ಲಿ ನಗರವನ್ನು ಕಸ ಮುಕ್ತವನ್ನಾಗಿಸಲು ಒಟ್ಟು ೨,೪೫೦ ಮಂದಿ ಪೌರಕಾರ್ಮಿಕರು ಹಗಲು- ರಾತ್ರಿ ಶ್ರಮಿಸಲಿದ್ದಾರೆ.

ಎಲ್ಲೆಲ್ಲಿ ನಿಯೋಜನೆ? ದಸರಾ ಮಹೋತ್ಸವದ ಪ್ರಯುಕ್ತ ಅರಮನೆ ಆವರಣ, ಫಲಪುಷ್ಪ ಪ್ರದರ್ಶನ ನಡೆಯುವ ಕುಪ್ಪಣ್ಣ ಪಾರ್ಕ್, ಆಹಾರ ಮೇಳ ನಡೆಯುವ ಮಹಾರಾಜ ಕಾಲೇಜು ಮೈದಾನ, ಪುಸ್ತಕ ಪ್ರದರ್ಶನ ಮೇಳ ನಡೆಯುವ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ, ಯುವ ಸಂಭ್ರಮ ನಡೆಯುವ ಬಯಲು ರಂಗ ಮಂದಿರದಲ್ಲಿ ೨೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ಎರಡು ಪಾಳಿಗಳಲ್ಲಿ ನಿಯೋಜನೆ ಮಾಡಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತದೆ.

ನಗರ ಸ್ವಚ್ಛತೆ: ದಸರಾ ಕಾರ್ಯಕ್ರಮ ಹೊರತುಪಡಿಸಿ ಸಾರ್ವಜನಿಕ ರಸ್ತೆಗಳು, ವೃತ್ತಗಳು ಮತ್ತು ಉದ್ಯಾನಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ೩೦೦ ಮಂದಿಯನ್ನು ಬಳಕೆ ಮಾಡಿಕೊಳ್ಳಲಿದ್ದು, ೩ ಪಾಳಿಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಯುವ ದಸರಾ ನಡೆಯುವ ಸ್ಥಳದಲ್ಲಿ ವಿಶೇಷವಾಗಿ ೧೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ನಿಯೋಜನೆ ಮಾಡಲಾಗುತ್ತದೆ.

೭೦ ವಾಹನಗಳ ಬಳಕೆ: ಕಸ ವಿಲೇವಾರಿಗೆ ನಗರಪಾಲಿಕೆಯಿಂದ ೬೦ ವಾಹನಗಳನ್ನು ನೀಡಲಾಗುತ್ತಿದ್ದು, ಇದರೊಂದಿಗೆ ರಿಂಗ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ೧೦ ಜೆಸಿಬಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ಬಾರಿಯೂ ಅಚ್ಚುಕಟ್ಟಾಗಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ನಗರದ ಹೊರ ವಲಯ ದಲ್ಲಿ ಯುವ ದಸರಾ ನಡೆದರೆ ಅಲ್ಲಿನ  ಸ್ವಚ್ಛತಾ  ಕಾರ್ಯಕ್ಕೂ ನಗರ ಪಾಲಿಕೆಯ ಸ್ವಚ್ಛತಾ ಕಾರ್ಮಿಕರನ್ನು ಬಳಸಿಕೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

” ದಸರಾ ಪ್ರಯುಕ್ತ ಹೆಚ್ಚುವರಿಯಾಗಿ ೫೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿಕೊಳ್ಳಲಾಗಿದ್ದು, ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳು ಸೇರಿದಂತೆ ನಗರದ ರಸ್ತೆ ಮತ್ತು ಪ್ರಮುಖ ವೃತ್ತಗಳಲ್ಲಿ ದಿನವಿಡೀ ಸ್ವಚ್ಛತಾ ಕಾರ್ಯ ನಡೆಯಲಿದೆ.”

-ಡಾ.ಎನ್.ಪಿ.ವೆಂಕಟೇಶ್, ಆರೋಗ್ಯಾಧಿಕಾರಿ, ನಗರಪಾಲಿಕೆ

” ಸ್ವಚ್ಛತಾ ಕಾರ್ಯದ ಮೇಲುಸ್ತುವಾರಿಯನ್ನು ಮೇಲ್ವಿಚಾರಕರು, ಆರೋಗ್ಯ ನಿರೀಕ್ಷಕರು, ಪರಿಸರ ಇಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು (ಪರಿಸರ) ಹಾಗೂ ಆರೋಗ್ಯಾಧಿಕಾರಿಗಳು, ವಲಯ ಆಯುಕ್ತರು, ಉಪ ಆಯುಕ್ತರು ಮಾಡಲಿದ್ದು, ತ್ಯಾಜ್ಯ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು. ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವ ಸ್ವಚ್ಛತಾ ಕಾರ್ಮಿಕರು ನಿತ್ಯ ಕೆಲಸಕ್ಕೆ ಹಾಜರಾಗುತ್ತಿದ್ದಾರೆಯೇ, ಸ್ವಚ್ಛತಾ ಕಾರ್ಯ ಉತ್ತಮವಾಗಿ ನಡೆಯುತ್ತಿದೆಯೇ ಎಂದು ಪರಿಶೀಲನೆ ನಡೆಸುತ್ತಾರೆ.”

-ಶೇಖ್ ತನ್ವೀರ್ ಆಸೀಫ್, ಆಯುಕ್ತರು, ನಗರ ಪಾಲಿಕೆ

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago