Andolana originals

ಚಾಮರಾಜನಗರ ಪ್ರವಾಸೋದ್ಯಮಕ್ಕೆ 500 ಕೋಟಿ ಯೋಜನೆ

ಮೈಸೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ಜತೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಯನ್ನು ತೆಗೆದು ಹಾಕಲು ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ.

ಚೆಲುವ ಚಾಮರಾಜನಗರದ ದಿಕ್ಕನ್ನು ಬದಲಿಸು ವಂತಹ ಯೋಜನೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲು ತಯಾರಿ ಮಾಡಿಕೊಳ್ಳಲಾಗಿದೆ. ಧಾರ್ಮಿಕ, ಅರಣ್ಯ, ಜಲ, ಪರಿಸರವನ್ನು ಕೇಂದ್ರೀಕರಿಸಿ ಪ್ರವಾಸೋದ್ಯಮ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಚಾಮರಾಜನಗರ ಜಿಲ್ಲೆಯ ಕಡೆಗೆ ಸೆಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಇದಕ್ಕಾಗಿ ೫೦೦ ಕೋಟಿ ರೂ.ವೆಚ್ಚದ ಡಿಪಿಆರ್ ತಯಾರು ಮಾಡಿ ಮುಖ್ಯಮಂತ್ರಿ ಅವರ ಒಪ್ಪಿಗೆ ಪಡೆದು ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧರಿಸಿರುವ ಕಾರಣ ಸರ್ಕಾರಿ ಅತಿಥಿ ಗೃಹದಲ್ಲಿ ಸಚಿವದ್ವಯರಾದ ಕೆ. ವೆಂಕಟೇಶ್, ಡಾ. ಎಚ್. ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ಅಽಕಾರಿಗಳ ಸಭೆ ನಡೆಸಿ ಚರ್ಚಿಸಿದ ಬಳಿಕ ಹಲವು ನಿರ್ಧಾರ ಮಾಡಲಾಯಿತು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ವಸತಿ ಶಾಲೆ ಅಥವಾ ಮಹದೇಶ್ವರ ಪ್ರತಿಮೆ ಇರುವ ಕಡೆಯಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.

ಯೋಜನೆಯಲ್ಲೇನಿದೆ?
– ಧಾರ್ಮಿಕ ಸ್ಥಳಗಳಲ್ಲಿ ಮೂಲ ಸೌಕರ್ಯ
– ಭರಚುಕ್ಕಿ ಫಾಲ್ಸ್ ಅಭಿವೃದ್ಧಿ
– ಪರಿಸರ ಪ್ರವಾಸೋದ್ಯಮ
– ಜಲ ಪ್ರವಾಸೋದ್ಯಮ
– ಅರಣ್ಯ ಪ್ರದೇಶಗಳ ವೀಕ್ಷಣೆಗೆ ಒತ್ತು
– ಬಿರ್ಸಾಮುಂಡಾ ಪಾರ್ಕ್ ನಿರ್ಮಾಣ
– ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಸಾರಿಗೆ ಎಲೆಕ್ಟ್ರಿಕಲ್ ವಾಹನಗಳು
– ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೌಂದರ್ಯೀಕರಣ

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

4 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

5 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

5 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

5 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

5 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

5 hours ago