Andolana originals

ಚಾಮರಾಜನಗರ ಪ್ರವಾಸೋದ್ಯಮಕ್ಕೆ 500 ಕೋಟಿ ಯೋಜನೆ

ಮೈಸೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ಜತೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಯನ್ನು ತೆಗೆದು ಹಾಕಲು ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ.

ಚೆಲುವ ಚಾಮರಾಜನಗರದ ದಿಕ್ಕನ್ನು ಬದಲಿಸು ವಂತಹ ಯೋಜನೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲು ತಯಾರಿ ಮಾಡಿಕೊಳ್ಳಲಾಗಿದೆ. ಧಾರ್ಮಿಕ, ಅರಣ್ಯ, ಜಲ, ಪರಿಸರವನ್ನು ಕೇಂದ್ರೀಕರಿಸಿ ಪ್ರವಾಸೋದ್ಯಮ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಚಾಮರಾಜನಗರ ಜಿಲ್ಲೆಯ ಕಡೆಗೆ ಸೆಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಇದಕ್ಕಾಗಿ ೫೦೦ ಕೋಟಿ ರೂ.ವೆಚ್ಚದ ಡಿಪಿಆರ್ ತಯಾರು ಮಾಡಿ ಮುಖ್ಯಮಂತ್ರಿ ಅವರ ಒಪ್ಪಿಗೆ ಪಡೆದು ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧರಿಸಿರುವ ಕಾರಣ ಸರ್ಕಾರಿ ಅತಿಥಿ ಗೃಹದಲ್ಲಿ ಸಚಿವದ್ವಯರಾದ ಕೆ. ವೆಂಕಟೇಶ್, ಡಾ. ಎಚ್. ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ಅಽಕಾರಿಗಳ ಸಭೆ ನಡೆಸಿ ಚರ್ಚಿಸಿದ ಬಳಿಕ ಹಲವು ನಿರ್ಧಾರ ಮಾಡಲಾಯಿತು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ವಸತಿ ಶಾಲೆ ಅಥವಾ ಮಹದೇಶ್ವರ ಪ್ರತಿಮೆ ಇರುವ ಕಡೆಯಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.

ಯೋಜನೆಯಲ್ಲೇನಿದೆ?
– ಧಾರ್ಮಿಕ ಸ್ಥಳಗಳಲ್ಲಿ ಮೂಲ ಸೌಕರ್ಯ
– ಭರಚುಕ್ಕಿ ಫಾಲ್ಸ್ ಅಭಿವೃದ್ಧಿ
– ಪರಿಸರ ಪ್ರವಾಸೋದ್ಯಮ
– ಜಲ ಪ್ರವಾಸೋದ್ಯಮ
– ಅರಣ್ಯ ಪ್ರದೇಶಗಳ ವೀಕ್ಷಣೆಗೆ ಒತ್ತು
– ಬಿರ್ಸಾಮುಂಡಾ ಪಾರ್ಕ್ ನಿರ್ಮಾಣ
– ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಸಾರಿಗೆ ಎಲೆಕ್ಟ್ರಿಕಲ್ ವಾಹನಗಳು
– ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೌಂದರ್ಯೀಕರಣ

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

47 mins ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

1 hour ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

14 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

15 hours ago