Andolana originals

ಚಾಮರಾಜನಗರ ಪ್ರವಾಸೋದ್ಯಮಕ್ಕೆ 500 ಕೋಟಿ ಯೋಜನೆ

ಮೈಸೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ಜತೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಯನ್ನು ತೆಗೆದು ಹಾಕಲು ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ.

ಚೆಲುವ ಚಾಮರಾಜನಗರದ ದಿಕ್ಕನ್ನು ಬದಲಿಸು ವಂತಹ ಯೋಜನೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲು ತಯಾರಿ ಮಾಡಿಕೊಳ್ಳಲಾಗಿದೆ. ಧಾರ್ಮಿಕ, ಅರಣ್ಯ, ಜಲ, ಪರಿಸರವನ್ನು ಕೇಂದ್ರೀಕರಿಸಿ ಪ್ರವಾಸೋದ್ಯಮ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಚಾಮರಾಜನಗರ ಜಿಲ್ಲೆಯ ಕಡೆಗೆ ಸೆಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಇದಕ್ಕಾಗಿ ೫೦೦ ಕೋಟಿ ರೂ.ವೆಚ್ಚದ ಡಿಪಿಆರ್ ತಯಾರು ಮಾಡಿ ಮುಖ್ಯಮಂತ್ರಿ ಅವರ ಒಪ್ಪಿಗೆ ಪಡೆದು ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧರಿಸಿರುವ ಕಾರಣ ಸರ್ಕಾರಿ ಅತಿಥಿ ಗೃಹದಲ್ಲಿ ಸಚಿವದ್ವಯರಾದ ಕೆ. ವೆಂಕಟೇಶ್, ಡಾ. ಎಚ್. ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ಅಽಕಾರಿಗಳ ಸಭೆ ನಡೆಸಿ ಚರ್ಚಿಸಿದ ಬಳಿಕ ಹಲವು ನಿರ್ಧಾರ ಮಾಡಲಾಯಿತು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ವಸತಿ ಶಾಲೆ ಅಥವಾ ಮಹದೇಶ್ವರ ಪ್ರತಿಮೆ ಇರುವ ಕಡೆಯಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.

ಯೋಜನೆಯಲ್ಲೇನಿದೆ?
– ಧಾರ್ಮಿಕ ಸ್ಥಳಗಳಲ್ಲಿ ಮೂಲ ಸೌಕರ್ಯ
– ಭರಚುಕ್ಕಿ ಫಾಲ್ಸ್ ಅಭಿವೃದ್ಧಿ
– ಪರಿಸರ ಪ್ರವಾಸೋದ್ಯಮ
– ಜಲ ಪ್ರವಾಸೋದ್ಯಮ
– ಅರಣ್ಯ ಪ್ರದೇಶಗಳ ವೀಕ್ಷಣೆಗೆ ಒತ್ತು
– ಬಿರ್ಸಾಮುಂಡಾ ಪಾರ್ಕ್ ನಿರ್ಮಾಣ
– ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಸಾರಿಗೆ ಎಲೆಕ್ಟ್ರಿಕಲ್ ವಾಹನಗಳು
– ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೌಂದರ್ಯೀಕರಣ

andolana

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

6 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

8 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

8 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago