Andolana originals

ಚಾಮರಾಜನಗರ ಪ್ರವಾಸೋದ್ಯಮಕ್ಕೆ 500 ಕೋಟಿ ಯೋಜನೆ

ಮೈಸೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ಜತೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಯನ್ನು ತೆಗೆದು ಹಾಕಲು ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ.

ಚೆಲುವ ಚಾಮರಾಜನಗರದ ದಿಕ್ಕನ್ನು ಬದಲಿಸು ವಂತಹ ಯೋಜನೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲು ತಯಾರಿ ಮಾಡಿಕೊಳ್ಳಲಾಗಿದೆ. ಧಾರ್ಮಿಕ, ಅರಣ್ಯ, ಜಲ, ಪರಿಸರವನ್ನು ಕೇಂದ್ರೀಕರಿಸಿ ಪ್ರವಾಸೋದ್ಯಮ, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಚಾಮರಾಜನಗರ ಜಿಲ್ಲೆಯ ಕಡೆಗೆ ಸೆಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಇದಕ್ಕಾಗಿ ೫೦೦ ಕೋಟಿ ರೂ.ವೆಚ್ಚದ ಡಿಪಿಆರ್ ತಯಾರು ಮಾಡಿ ಮುಖ್ಯಮಂತ್ರಿ ಅವರ ಒಪ್ಪಿಗೆ ಪಡೆದು ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧರಿಸಿರುವ ಕಾರಣ ಸರ್ಕಾರಿ ಅತಿಥಿ ಗೃಹದಲ್ಲಿ ಸಚಿವದ್ವಯರಾದ ಕೆ. ವೆಂಕಟೇಶ್, ಡಾ. ಎಚ್. ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ಅಽಕಾರಿಗಳ ಸಭೆ ನಡೆಸಿ ಚರ್ಚಿಸಿದ ಬಳಿಕ ಹಲವು ನಿರ್ಧಾರ ಮಾಡಲಾಯಿತು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ವಸತಿ ಶಾಲೆ ಅಥವಾ ಮಹದೇಶ್ವರ ಪ್ರತಿಮೆ ಇರುವ ಕಡೆಯಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.

ಯೋಜನೆಯಲ್ಲೇನಿದೆ?
– ಧಾರ್ಮಿಕ ಸ್ಥಳಗಳಲ್ಲಿ ಮೂಲ ಸೌಕರ್ಯ
– ಭರಚುಕ್ಕಿ ಫಾಲ್ಸ್ ಅಭಿವೃದ್ಧಿ
– ಪರಿಸರ ಪ್ರವಾಸೋದ್ಯಮ
– ಜಲ ಪ್ರವಾಸೋದ್ಯಮ
– ಅರಣ್ಯ ಪ್ರದೇಶಗಳ ವೀಕ್ಷಣೆಗೆ ಒತ್ತು
– ಬಿರ್ಸಾಮುಂಡಾ ಪಾರ್ಕ್ ನಿರ್ಮಾಣ
– ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಸಾರಿಗೆ ಎಲೆಕ್ಟ್ರಿಕಲ್ ವಾಹನಗಳು
– ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೌಂದರ್ಯೀಕರಣ

andolana

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

32 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago