ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಈ ಬಾರಿ ಒಟ್ಟು ೫೧ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ತಬ್ಧಚಿತ್ರ ಉಪ ಸಮಿತಿ ಉಪವಿಶೇಷಾಧಿಕಾರಿ ಕೆ. ಬಿ. ಪ್ರಭುಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣ ದಲ್ಲಿ ಸ್ತಬ್ಧಚಿತ್ರ ಕಿರು ಹೊತ್ತಿಗೆಯನ್ನು ಬಿಡುಗಡೆ ಗೊಳಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ೩೧ ಜಿಲ್ಲೆಗಳ ಸ್ತಬ್ಧಚಿತ್ರಗಳು, ಇದರ ಜತೆಗೆ ವಿವಿಧ ಇಲಾಖೆಗಳು, ನಿಗಮಗಳು ಹಾಗೂ ಸ್ತಬ್ಧಚಿತ್ರ ಉಪ ಸಮಿತಿಯ ಒಟ್ಟು ೨೦ ಸ್ತಬ್ಧಚಿತ್ರಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲೊ ಳ್ಳಲಿವೆ ಎಂದು ವಿವರಿಸಿದರು. ಎಪಿಎಂಸಿ ಆವರಣದಲ್ಲಿ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಶೇ. ೯೦ರಷ್ಟು ಕೆಲಸ ಪೂರ್ಣಗೊಂಡಿದೆ. ಕಲೆ, ಸಂಸ್ಕೃತಿ, ವಾಸ್ತುಶಿಲ್ಪ, ಜಾನಪದ, ಹಬ್ಬ-ಹರಿದಿನಗಳು, ಕರ್ನಾಟಕ ಸುವರ್ಣ ಸಂಭ್ರಮದ ವಿಷಯದಡಿ ಸ್ತಬ್ಧಚಿತ್ರಗಳು ನಿರ್ಮಾಣಗೊಂಡಿವೆ ಎಂದು ತಿಳಿಸಿದರು.
ಪ್ರದರ್ಶನವಾಗಲಿರುವ ಸ್ತಬ್ಧಚಿತ್ರಗಳು: ಯಾದಗಿರಿ ಜಿಲ್ಲೆಯು ತಿಂಥಣಿ ಮೌನೇಶ್ವರ ದೇವಾಲಯದ ಸ್ತಬ್ಧಚಿತ್ರ, ಕೊಡಗು-ಭೂ ಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ-ಕಾಳುಮೆಣಸು ತೋಟ, ಆನೆ ಶಿಬಿರ, ಚಾಮರಾಜನಗರ- ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ- ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯದ ಸ್ತಬ್ಧಚಿತ್ರಗಳನ್ನು ನಿರ್ಮಿಸ ಲಾಗಿದೆ ಎಂದು ಮಾಹಿತಿ ನೀಡಿದರು.
ಮಂಡ್ಯ-ರಂಗನತಿಟ್ಟು ಪಕ್ಷಿಧಾಮ ಮತ್ತು ಕೆಆರ್ಎಸ್ ಅಣೆಕಟ್ಟೆ, ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ-ಏಕತೆಯಲ್ಲಿ ಅನೇಕತೆ ಸಾರುವ ಅಣೆಕಟ್ಟು ಮತ್ತು ಜಲ ಸಂರಕ್ಷಣೆ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮ-ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ, ವಿಜಯಪುರ-ಬಸವನ ಬಾಗೇವಾಡಿಯ ಮೂಲನಂದಿ ಬಸವೇಶ್ವರ ದೇವಾಲಯ, ಮೈಸೂರು-ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ- ಕೃಷಿ ಸರಕುಗಳ ಮೌಲ್ಯವರ್ಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಂಸ್ಥೆಯ ಕೊಡುಗೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ-ಇಲಾಖೆಯ ಕಿರು ಪರಿಚಯ, ಚಿಕ್ಕಬಳ್ಳಾಪುರ -ನಂದಿ ರೋಪ್ವೇ ಸ್ತಬ್ಧಚಿತ್ರ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಎ. ಎಸ್. ರಂಜಿತ್ ಕುಮಾರ್, ಕಾರ್ಯದರ್ಶಿ ಎಲ್. ಮೇಘಲಾ, ಉಪಾಧ್ಯಕ್ಷರಾದ ಭಾಸ್ಕರ್ ಎಲ್. ಗೌಡ, ಈಶ್ವರ ಡಿ. ಚಕ್ಕಡಿ, ಪರಮೇಶ್ ನಾಯಕ್, ಮಂಜುನಾಥ್ ಮತ್ತಿತರರು ಹಾಜರಿದ್ದರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…