Andolana originals

ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್‌ ಗ್ರಾಮ ಯೋಜನೆ: ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆ

ಮೈಸೂರು: ಸ್ವಾತಂತ್ರ್ಯ ದೊರೆತು ೭೫ ವರ್ಷಗಳು ಕಳೆದರೂ ನಾಗರಿಕ ಪ್ರಪಂಚದಿಂದ ದೂರವಿರುವು ದಲ್ಲದೆ, ಮೂಲಸೌಕರ್ಯಗಳ ಕೊರತೆ ಎದುರಿಸು ತ್ತಿರುವ ಬುಡಕಟ್ಟು ಸಮುದಾಯ ಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಿ ರುವ ಪ್ರಧಾನಮಂತ್ರಿ ಜನ್ ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಜಿಲ್ಲೆಯ ೬೨ ಗ್ರಾಮಗಳು ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಗೆ ಮೊದಲ ಹಂತದಲ್ಲಿ ಜಿಲ್ಲೆಯ ಎಚ್. ಡಿ. ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನ ಗೂಡು, ತಿ. ನರಸೀಪುರ ತಾಲ್ಲೂಕುಗಳಲ್ಲಿ ೬೨ ಗ್ರಾಮ ಗಳನ್ನು ಆಯ್ಕೆ ಮಾಡಿದ್ದು, ಮುಂದೆ ಮತ್ತಷ್ಟು ಹಾಡಿ ಗಳು, ಗ್ರಾಮಗಳನ್ನು ಪರಿಗಣಿಸುವ ಸಾಧ್ಯತೆ ಇದೆ. ಈ ಸಂಬಂಧ ಶೀಘ್ರದಲ್ಲೇ ಬುಡಕಟ್ಟು ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಶಿಕ್ಷಣ, ಆರೋಗ್ಯ , ಕೃಷಿ, ಕೌಶಲ ಅಭಿವೃದ್ಧಿ, ಉದ್ಯೋಗ, ಉತ್ಪಾದನೆ ಯಂತಹ ವಿವಿಧ ಕ್ಷೇತ್ರಗಳಲ್ಲಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆ ತಯಾರಾಗಲಿದೆ.

ಯೋಜನೆಯಡಿ ಪರಿಶಿಷ್ಟಪಂಗಡ ಹಾಡಿ,ಕಾಲೋನಿಗಳಲ್ಲಿ ಕಾರ್ಯ ಕ್ರಮಗಳನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ವಿವಿಧ ಇಲಾಖೆ ಗಳಿಂದ ಸರ್ವೆ ನಡೆಸಲಾಗುತ್ತದೆ. ಸಮೀಕ್ಷೆಯ ಸಂದರ್ಭದಲ್ಲಿ ಮೂಲ ಸೌಲಭ್ಯಗಳನ್ನು ಹೊಂದಿಲ್ಲದೆ ಇರುವ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿ ಸಲಾಗುತ್ತದೆ. ಈ ಕೆಲಸಕ್ಕೆ ವಿವಿಧ ಇಲಾಖೆಗಳ ನೋಡಲ್ ಅಽಕಾರಿಗಳನ್ನು ನೇಮಿಸಲಾಗಿದ್ದು, ವಿಸ್ತೃತ ಯೋಜನಾ ವರದಿ ತಯಾರಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಕ್ರಿಯಾಯೋಜನೆಯನ್ನು ಸಲ್ಲಿಸಬೇಕಿದೆ.

೧೭ ಇಲಾಖೆಗಳ ಸಮನ್ವಯತೆ: ಇಲಾಖೆಗಳ ಸಮನ್ವಯತೆ ಇಲ್ಲದ ಕಾರಣ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಅನೇಕ ಯೋಜನೆಗಳಿಗೆ ಅನುದಾನ ಬಿಡುಗಡೆಯಾದರೂ ಕಾನೂನು ಮತ್ತು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲಾಗದೆ ವಾಪಸ್ ಹೋಗುತ್ತಿತ್ತು. ಈ ಎಲ್ಲಾ ಗೊಂದಲ, ಸಮನ್ವಯತೆ ಕೊರತೆಗೆ ಕಡಿವಾಣ ಹಾಕಿರುವ ಕೇಂದ್ರ ಸರ್ಕಾರ ೧೭ ಇಲಾಖೆಗಳಿಗೆ ಪ್ರತ್ಯೇಕ ಜವಾಬ್ದಾರಿ ನೀಡಿ ೨೫ ಕಾರ್ಯಕ್ರಮಗಳನ್ನು ರೂಪಿಸುವಂತೆ ಹೇಳಿದೆ.

ಯಾವ ಯೋಜನೆಗಳು? : ಮುಂದಿನ ೨೦-೨೫ ವರ್ಷಗಳ ದೂರದೃಷ್ಟಿ, ಅಭಿವೃದ್ಧಿ ಕೋನವನ್ನು ಇಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಜಲ್ ಜೀವನ್ ಮಿಷನ್, ಪರಿಷ್ಕರಿಸಿದ ವಿತರಣಾ ವಲಯ ಮತ್ತು ಸೌರ ವಿದ್ಯುತ್ ಯೋಜನೆ, ಉಜ್ವಲ ಯೋಜನೆ, ಅರಣ್ಯ ಹಕ್ಕು ಕಾಯ್ದೆ, ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ, ನ್ಯಾಷನಲ್ ಹೆಲ್ತ್ ಮಿಷನ್, ನ್ಯಾಷನಲ್ ಸಿಕಲ್ ಸೆಲ್ ಮಿಷನ್, ಸಮಗ್ರ ಶಿಕ್ಷಾ ಅಭಿಯಾನ, ರಾಷ್ಟ್ರೀಯ ಜಾನುವಾರು ಮಿಷನ್, ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ್, ಪ್ರಧಾನಮಂತ್ರಿ ಆದರ್ಶ ಗ್ರಾಮ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಬಹುಯೋಜನೆಗಳು, ಅಂಗನವಾಡಿ ಸೇವೆ ಗಳು, ಟೆಲಿಕಾಂ ತಂತ್ರಜ್ಞಾನ ಅಭಿವೃದ್ಧಿ, ಸ್ವದೇಶ್ ದರ್ಶನ್, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ, ಕೌಶಲ ಭಾರತ್ ಮಿಷನ್ ಯೋಜನೆಯಡಿ ಕಾರ್ಯಕ್ರಮಗಳನ್ನು ರೂಪಿಸಲು ಪ್ರಸ್ತಾವನೆ ತಯಾರಿಸಿ ಸಲ್ಲಿಸಬೇಕಿದೆ. ಕಂಬ ಇಲ್ಲದ ಗ್ರಾಮಗಳಿಗೆ ಸೋಲಾರ್: ವಿದ್ಯುತ್ ಕಂಬಗಳನ್ನು ಎಳೆಯಲು ಅರಣ್ಯ ಇಲಾಖೆ ತೊಡಕುಂಟು ಮಾಡಿರುವ ಹಾಡಿಗಳಿಗೆ ಸೋಲಾರ್ ಬೆಳಕಿನ ಸೌಲಭ್ಯಕ್ಕೆ ಯೋಜನೆ ರೂಪಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದೆ. ಎಚ್. ಡಿ. ಕೋಟೆ, ಹುಣಸೂರು ತಾಲ್ಲೂಕುಗಳ ಕೆಲವು ಹಾಡಿಗಳಿಗೆ ವಿದ್ಯುತ್ ಕಂಬ ಅಳವಡಿಸಲು ಅರಣ್ಯ ಇಲಾಖೆ ಅನುಮೋದನೆ ನೀಡಿಲ್ಲ. ಹೀಗಾಗಿಯೇ, ಅಂತಹ ಹಾಡಿಗಳಿಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗುತ್ತದೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

12 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago