Andolana originals

ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್‌ ಗ್ರಾಮ ಯೋಜನೆ: ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆ

ಮೈಸೂರು: ಸ್ವಾತಂತ್ರ್ಯ ದೊರೆತು ೭೫ ವರ್ಷಗಳು ಕಳೆದರೂ ನಾಗರಿಕ ಪ್ರಪಂಚದಿಂದ ದೂರವಿರುವು ದಲ್ಲದೆ, ಮೂಲಸೌಕರ್ಯಗಳ ಕೊರತೆ ಎದುರಿಸು ತ್ತಿರುವ ಬುಡಕಟ್ಟು ಸಮುದಾಯ ಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಿ ರುವ ಪ್ರಧಾನಮಂತ್ರಿ ಜನ್ ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಜಿಲ್ಲೆಯ ೬೨ ಗ್ರಾಮಗಳು ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಗೆ ಮೊದಲ ಹಂತದಲ್ಲಿ ಜಿಲ್ಲೆಯ ಎಚ್. ಡಿ. ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನ ಗೂಡು, ತಿ. ನರಸೀಪುರ ತಾಲ್ಲೂಕುಗಳಲ್ಲಿ ೬೨ ಗ್ರಾಮ ಗಳನ್ನು ಆಯ್ಕೆ ಮಾಡಿದ್ದು, ಮುಂದೆ ಮತ್ತಷ್ಟು ಹಾಡಿ ಗಳು, ಗ್ರಾಮಗಳನ್ನು ಪರಿಗಣಿಸುವ ಸಾಧ್ಯತೆ ಇದೆ. ಈ ಸಂಬಂಧ ಶೀಘ್ರದಲ್ಲೇ ಬುಡಕಟ್ಟು ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಶಿಕ್ಷಣ, ಆರೋಗ್ಯ , ಕೃಷಿ, ಕೌಶಲ ಅಭಿವೃದ್ಧಿ, ಉದ್ಯೋಗ, ಉತ್ಪಾದನೆ ಯಂತಹ ವಿವಿಧ ಕ್ಷೇತ್ರಗಳಲ್ಲಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆ ತಯಾರಾಗಲಿದೆ.

ಯೋಜನೆಯಡಿ ಪರಿಶಿಷ್ಟಪಂಗಡ ಹಾಡಿ,ಕಾಲೋನಿಗಳಲ್ಲಿ ಕಾರ್ಯ ಕ್ರಮಗಳನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ವಿವಿಧ ಇಲಾಖೆ ಗಳಿಂದ ಸರ್ವೆ ನಡೆಸಲಾಗುತ್ತದೆ. ಸಮೀಕ್ಷೆಯ ಸಂದರ್ಭದಲ್ಲಿ ಮೂಲ ಸೌಲಭ್ಯಗಳನ್ನು ಹೊಂದಿಲ್ಲದೆ ಇರುವ ಬಗ್ಗೆ ಮಾಹಿತಿಯನ್ನು ಕ್ರೋಢೀಕರಿ ಸಲಾಗುತ್ತದೆ. ಈ ಕೆಲಸಕ್ಕೆ ವಿವಿಧ ಇಲಾಖೆಗಳ ನೋಡಲ್ ಅಽಕಾರಿಗಳನ್ನು ನೇಮಿಸಲಾಗಿದ್ದು, ವಿಸ್ತೃತ ಯೋಜನಾ ವರದಿ ತಯಾರಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಕ್ರಿಯಾಯೋಜನೆಯನ್ನು ಸಲ್ಲಿಸಬೇಕಿದೆ.

೧೭ ಇಲಾಖೆಗಳ ಸಮನ್ವಯತೆ: ಇಲಾಖೆಗಳ ಸಮನ್ವಯತೆ ಇಲ್ಲದ ಕಾರಣ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಅನೇಕ ಯೋಜನೆಗಳಿಗೆ ಅನುದಾನ ಬಿಡುಗಡೆಯಾದರೂ ಕಾನೂನು ಮತ್ತು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲಾಗದೆ ವಾಪಸ್ ಹೋಗುತ್ತಿತ್ತು. ಈ ಎಲ್ಲಾ ಗೊಂದಲ, ಸಮನ್ವಯತೆ ಕೊರತೆಗೆ ಕಡಿವಾಣ ಹಾಕಿರುವ ಕೇಂದ್ರ ಸರ್ಕಾರ ೧೭ ಇಲಾಖೆಗಳಿಗೆ ಪ್ರತ್ಯೇಕ ಜವಾಬ್ದಾರಿ ನೀಡಿ ೨೫ ಕಾರ್ಯಕ್ರಮಗಳನ್ನು ರೂಪಿಸುವಂತೆ ಹೇಳಿದೆ.

ಯಾವ ಯೋಜನೆಗಳು? : ಮುಂದಿನ ೨೦-೨೫ ವರ್ಷಗಳ ದೂರದೃಷ್ಟಿ, ಅಭಿವೃದ್ಧಿ ಕೋನವನ್ನು ಇಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಜಲ್ ಜೀವನ್ ಮಿಷನ್, ಪರಿಷ್ಕರಿಸಿದ ವಿತರಣಾ ವಲಯ ಮತ್ತು ಸೌರ ವಿದ್ಯುತ್ ಯೋಜನೆ, ಉಜ್ವಲ ಯೋಜನೆ, ಅರಣ್ಯ ಹಕ್ಕು ಕಾಯ್ದೆ, ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ, ನ್ಯಾಷನಲ್ ಹೆಲ್ತ್ ಮಿಷನ್, ನ್ಯಾಷನಲ್ ಸಿಕಲ್ ಸೆಲ್ ಮಿಷನ್, ಸಮಗ್ರ ಶಿಕ್ಷಾ ಅಭಿಯಾನ, ರಾಷ್ಟ್ರೀಯ ಜಾನುವಾರು ಮಿಷನ್, ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ್, ಪ್ರಧಾನಮಂತ್ರಿ ಆದರ್ಶ ಗ್ರಾಮ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಬಹುಯೋಜನೆಗಳು, ಅಂಗನವಾಡಿ ಸೇವೆ ಗಳು, ಟೆಲಿಕಾಂ ತಂತ್ರಜ್ಞಾನ ಅಭಿವೃದ್ಧಿ, ಸ್ವದೇಶ್ ದರ್ಶನ್, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ, ಕೌಶಲ ಭಾರತ್ ಮಿಷನ್ ಯೋಜನೆಯಡಿ ಕಾರ್ಯಕ್ರಮಗಳನ್ನು ರೂಪಿಸಲು ಪ್ರಸ್ತಾವನೆ ತಯಾರಿಸಿ ಸಲ್ಲಿಸಬೇಕಿದೆ. ಕಂಬ ಇಲ್ಲದ ಗ್ರಾಮಗಳಿಗೆ ಸೋಲಾರ್: ವಿದ್ಯುತ್ ಕಂಬಗಳನ್ನು ಎಳೆಯಲು ಅರಣ್ಯ ಇಲಾಖೆ ತೊಡಕುಂಟು ಮಾಡಿರುವ ಹಾಡಿಗಳಿಗೆ ಸೋಲಾರ್ ಬೆಳಕಿನ ಸೌಲಭ್ಯಕ್ಕೆ ಯೋಜನೆ ರೂಪಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದೆ. ಎಚ್. ಡಿ. ಕೋಟೆ, ಹುಣಸೂರು ತಾಲ್ಲೂಕುಗಳ ಕೆಲವು ಹಾಡಿಗಳಿಗೆ ವಿದ್ಯುತ್ ಕಂಬ ಅಳವಡಿಸಲು ಅರಣ್ಯ ಇಲಾಖೆ ಅನುಮೋದನೆ ನೀಡಿಲ್ಲ. ಹೀಗಾಗಿಯೇ, ಅಂತಹ ಹಾಡಿಗಳಿಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗುತ್ತದೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

6 mins ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

15 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

17 mins ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

20 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

25 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

1 hour ago