Andolana originals

ಭತ್ತದ ನಾಡಿನಲ್ಲಿ ಭರಪೂರ ರಾಗಿ ಫಸಲು!

ಭೇರ್ಯ ಮಹೇಶ್

ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಕೈ ಹಿಡಿದ ಚಿತ್ತ, ಸ್ವಾತಿ ಮಳೆಗಳು; ಅನ್ನದಾತರಲ್ಲಿ ಸಂತಸ 

ಕೆ.ಆರ್.ನಗರ: ಭತ್ತದ ನಾಡಿನಲ್ಲಿ ಈ ಬಾರಿ ರಾಗಿ ಫಸಲು ಉತ್ತಮವಾಗಿ ಬರುತ್ತಿದ್ದು, ರಾಗಿ ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತಂಬಾಕು ಬೆಳೆ ಮುಗಿದ ತಕ್ಷಣ ರಾಗಿ ಬಿತ್ತನೆ ಮಾಡಿದ್ದ ರೈತರಿಗೆ ಮಳೆ ಇಲ್ಲದೆ ಇನ್ನೇನು ಬೆಳೆ ಕೈಕೊಟ್ಟಿತು ಎಂಬ ಆತಂಕ ಎದುರಾಗಿತ್ತು. ಆದರೆ, ಚಿತ್ತ ಹಾಗೂ ಸ್ವಾತಿ ಮಳೆಗಳು ಉತ್ತಮವಾಗಿ ಸುರಿದಿದ್ದರಿಂದ ಹೊಲಗಳಲ್ಲಿ ರಾಗಿ ಬೆಳೆ ಹಸಿರು ಹೊದ್ದು ಕಂಗೊಳಿಸುತ್ತಿದೆ. ಎತ್ತ ನೋಡಿದರೂ ರಾಗಿಯ ಕಂಪು ರಾರಾಜಿ ಸುತ್ತಿದ್ದು, ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಸುರಿದ ಸೋನೆ ಮಳೆ ಹಿನ್ನೆಲೆಯಲ್ಲಿ ರೈತರು ರಾಗಿ ಬಿತ್ತನೆ ಮಾಡಿದ್ದರು. ಬಿತ್ತನೆ ನಂತರ ಬಂದ ಹದವಾದ ಮಳೆಗೆ ರಾಗಿ ಪೈರು ಮೊಳಕೆಯೊಡೆದಿತ್ತು. ನಂತರ ಕಳೆ ತೆಗೆದು ಗೊಬ್ಬರ ಹಾಕಿದ ನಂತರ ಸುಮಾರು ಒಂದೂವರೆ ತಿಂಗಳು ಮಳೆ ಸಂಪೂರ್ಣ ಕೈ ಕೊಟ್ಟಿತ್ತು. ಇದ ರಿಂದ ರಾಗಿ ಬೆಳೆ ಒಣಗಲು ಪ್ರಾರಂಭಿಸಿದ್ದರಿಂದ ರೈತರು ಕಂಗಾಲಾಗಿದ್ದರು. ಆದರೆ, ಅಕ್ಟೋಬರ್ ತಿಂಗಳ ೨ನೇ ವಾರದಲ್ಲಿ ಶುರುವಾದ ಚಿತ್ತ ಮಳೆಯಿಂದಾಗಿ ಒಣಗುತ್ತಿದ್ದ ರಾಗಿ ಪೈರು ಉತ್ತಮವಾಗಿ ಬಂದು ಅಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು ರಾಗಿ ತೆನೆ ಕಳೆಗಟ್ಟಿದೆ.

ರಾಗಿಗೆ ಕೇಂದ್ರ ಸರ್ಕಾರ ೪,೮೮೬ ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೂ ರೈತರು ಕಷ್ಟಪಟ್ಟು ರಾಗಿ ಬೆಳೆಯುತ್ತಾರೆ. ರಾಸಾಯನಿಕ ಗೊಬ್ಬರದ ದರ ದುಪ್ಪಟ್ಟು ಆಗಿದೆ. ಜಮೀನು ಹದ ಮಾಡಲು ಟ್ರಾಕ್ಟರ್ ಬಾಡಿಗೆ, ಕೂಲಿ ಕಾರ್ಮಿಕರ ಕೂಲಿ ಹೆಚ್ಚಾಗಿದ್ದು, ಕ್ವಿಂಟಾಲ್‌ಗೆ ಕನಿಷ್ಠ ೬ ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡಬೇಕೆಂಬುದು ರಾಗಿ ಬೆಳೆಗಾರರ ಬೇಡಿಕೆಯಾಗಿದೆ.

ಜಾನುವಾರುಗಳ ಮೇವಿಗೆ ಮಳೆ ನೆರವು: ಮಳೆ ಕೊರತೆಯಿಂದಾಗಿ ರೈತರ ಜಮೀನಿನ ಬದುವಿನಲ್ಲಿ ಬೆಳೆಯುತ್ತಿದ್ದ ಮೇವು ಒಣಗಿದ್ದರಿಂದ ಜಾನುವಾರುಗಳ ಮೇವಿಗಾಗಿ ರೈತರು ಪರದಾಡುವಂತಾಗಿತ್ತು. ಈ ವರ್ಷವೂ ಕೆಲವು ಕಡೆ ಮಳೆ ಆಗದ ಪರಿಣಾಮ ದನಕರುಗಳಿಗೆ ಮೇವು ಒದಗಿಸಲಾಗದೆ ರೈತರು ಕಷ್ಟಪಡುತ್ತಿದ್ದರು. ತಡವಾಗಿ ಯಾದರೂ ಮಳೆ ಆಗುತ್ತಿರುವುದರಿಂದ ಮೇವಿನ ಕೊರತೆ ನೀಗಿದಂತಾಗಿ ರೈತರು ನಿಟ್ಟುಸಿರು ಬಿಡುವಂತಾಗಿದೆ

” ಈ ವರ್ಷ ಮಳೆ ತಡವಾಗಿ ಸುರಿದಿದ್ದು, ಈ ಬಾರಿ ರಾಗಿಸೊಗಸಾಗಿ ಬೆಳೆಯುತ್ತಿದೆ. ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಇದೇ ರೀತಿ ಮುಂದೆ ಒಂದೆರಡು ಬಾರಿ ಮಳೆ ಬಂದರೆ ಉತ್ತಮ ಇಳುವರಿ ಸಿಗಲಿದೆ. ಈ ಬಾರಿ ರಾಗಿ ಬಂಪರ್ ಬೆಳೆಯಾಗಿದ್ದು ಅನ್ನದಾತರ ಕೈ ಹಿಡಿದಿದೆ.”

-ಜೆ.ಎಂ.ಕುಮಾರ್, ಗೌರವಾಧ್ಯಕ್ಷ, ರಾಜ್ಯ ರೈತ ಪರ್ವ ಸಂಘ

” ಕೆ.ಆರ್.ನಗರ ತಾಲ್ಲೂಕಿನಲ್ಲಿ ೮,೧೦೦ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡಲಾಗಿದೆ. ಈ ನಡುವೆ ಚಿತ್ತ ಹಾಗೂ ಸ್ವಾತಿ ಮಳೆಗಳು ಉತ್ತಮವಾಗಿ ಬರುತ್ತಿದ್ದು ಬೆಳೆ ಚೆನ್ನಾಗಿ ಬಂದಿದೆ. ರೋಗ ಬಾಧೆ ಕಂಡು ಬಂದಲ್ಲಿ ಇಲಾಖೆಯಿಂದ ರೈತರಿಗೆ ಅಗತ್ಯ ಮಾಹಿತಿ ನೀಡಲಾಗುವುದು.”

-ಕೆ.ಜೆ.ಮಲ್ಲಿಕಾರ್ಜುನ್, ಸಹಾಯಕ ಕೃಷಿ ನಿರ್ದೇಶಕ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago