Andolana originals

ಸೂಚನೆ ನೀಡಿ ವರ್ಷವಾದರೂ ತೆರವಾಗದ ಕಟ್ಟಡ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಹೊಸ ಪ್ರವಾಸಿ ಮಂದಿರದ ಮಧ್ಯಭಾಗದಲ್ಲಿ ಇರುವ ತಹಸಿಲ್ದಾರ್ ಹಳೆ ವಸತಿಗೃಹ ಕಟ್ಟಡವನ್ನು ಕೆಡವಿ ನೂತನ ವಸತಿಗೃಹ ನಿರ್ಮಿಸುವ ಪ್ರಸ್ತಾವನೆ ನನೆಗುದಿಗೆ ಬಿದ್ದಿದೆ.

ಪ್ರತಿನಿತ್ಯ ತಾಲ್ಲೂಕು ಕಚೇರಿಗೆ ನೂರಾರು ಸಾರ್ವಜನಿಕರು ಬರುತ್ತಾರೆ. ಅಲ್ಲದೆ ಶಾಸಕರು, ಮಂತ್ರಿಗಳು ಹೊಸ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಹೂಡುತ್ತಾರೆ. ಇವೆರಡರ ಮಧ್ಯೆ ಇರುವ ಹಳೆಯ ತಹಸಿಲ್ದಾರ್ ವಸತಿಗೃಹ ಕಟ್ಟಡ ಪಾಳು ಕೊಂಪೆಯಂತಿದೆ. ಇದು ಸಾರ್ವಜನಿಕರು ಗಲೀಜು ಮಾಡುವ ಕೇಂದ್ರವಾಗಿದ್ದು ಓಡಾಡುವವರಿಗೆ ಕಿರಿಕಿರಿ ಉಂಟಾಗುತ್ತಿದೆ.

ಈ ಹಳೆಯ ಕಟ್ಟಡವನ್ನು ತೆರವುಗೊಳಿಸಿ ತಹಸಿಲ್ದಾರ್‌ರ ನೂತನ ವಸತಿ ಗೃಹ ನಿರ್ಮಿಸುವುದಾಗಿ ವರ್ಷದ ಹಿಂದೆ ತಹಸಿಲ್ದಾರ್ ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ. ರಾಷ್ಟ್ರಿಯ ಹೆದ್ದಾರಿ ಬದಿಯಲ್ಲಿ ಜಾಗ ಸಿಗುವುದೇ ವಿರಳ. ಇಂತಹ ಸರ್ಕಾರಿ ಜಾಗವನ್ನು ಸದ್ಬಳಕೆ ಮಾಡಿಕೊಳ್ಳದಿರುವುದು ದುರ್ದೈವ.

ಅಶುಚಿತ್ವ ಮತ್ತು ಉಪಯೋಗಕ್ಕೆ ಬಾರದ ನಿರುಪಯೋಗಿ ಸ್ಥಳವನ್ನಾಗಿ ಮಾಡಲಾಗಿದೆ. ಸರ್ಕಾರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ತಾತ್ಸಾರ ಮನಸ್ಥಿತಿಗೆ ಇದು ನಿದರ್ಶನವಾಗಿದೆ. ವಸತಿಗೃಹ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಕಟ್ಟಡವನ್ನು ಕೆಡವಿ, ಗಿಡಗಂಟಿ ಪೊದೆಗಳನ್ನು ತೆರವು ಮಾಡಬೇಕು. ತಹಸಿಲ್ದಾರರ ಅತಿಥಿಗೃಹವಾಗಿ ನಿರ್ಮಿಸಿ, ಜನಸಾ ಮಾನ್ಯರಿಗೆ ತಹಸಿಲ್ದಾರರು ತಾಲ್ಲೂಕು ಕೇಂದ್ರದಲ್ಲಿ ಸಿಗು ವಂತೆ ಮಾಡಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಇದು ಪಟ್ಟಣದ ಪುರಸಭೆ ವ್ಯಾಪ್ತಿಗೆ ಇಲ್ಲವೇ, ಲೋಕೋಪಯೋಗಿ ಇಲಾಖೆಗೆ ಒಳಪಟ್ಟಿದ್ದರೆ ಮೊದಲು ಶುಚಿಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ (೭೬೬) ಬದಿಯಲ್ಲಿರುವ ಇಂತಹ ಜಾಗ ಉಪಯುಕ್ತವಾಗುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಉಪಯೋಗಕ್ಕೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸು ವಂತೆ ಒತ್ತಾಯ ಕೇಳಿಬಂದಿದೆ.

” ಹಳೆಯ ಕಟ್ಟಡ ತೆರವುಗೊಳಿಸಿ ಯಾವುದಾದರೂ ಅನುದಾನದಲ್ಲಿ ತಹಸಿಲ್ದಾರ್ ನೂತನ ವಸತಿ ಗೃಹ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪ ಯೋಗಿ ಇಲಾಖೆ ಹಾಗೂ ತಹಸಿಲ್ದಾರ್ ಅವರಿಗೆ ಸೂಚಿಸಲಾಗುವುದು.”

 – ಎಚ್.ಎಂ.ಗಣೇಶಪ್ರಸಾದ್, ಶಾಸಕರು.

” ಪಟ್ಟಣದಲ್ಲಿ ತಹಸಿಲ್ದಾರ್ ವಸತಿಗೃಹ ನಿರ್ಮಾಣಕ್ಕೆ ೭೫ ಲಕ್ಷ ರೂ. ಬಿಡುಗಡೆ ಮಾಡಬೇಕೆಂದು ಕೋರಿ ಜಿಲ್ಲಾಽಕಾರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಣ ಬಿಡುಗಡೆಯಾದ ನಂತರ ಲೋಕೋಪಯೋಗಿ ಇಲಾಖೆ ಕೆಲಸವನ್ನು ಪ್ರಾರಂಭಿಸುತ್ತದೆ. ನಂತರ, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ಎಇಇ)ಹಳೆಯ ವಸತಿ ಗೃಹವನ್ನು ನೆಲಸಮಗೊಳಿಸುವ ಮೂಲಕ ಕೆಲಸ ಪ್ರಾರಂಭಿಸುತ್ತಾರೆ.”

-ರಮೇಶ್ ಬಾಬು, ತಹಸಿಲ್ದಾರ್, ಗುಂಡ್ಲುಪೇಟೆ

” ಹಳೆಯ ತಹಸಿಲ್ದಾರ್ ವಸತಿಗೃಹ ವ್ಯರ್ಥವಾಗಿ ಬಿದ್ದಿದ್ದು ಗಿಡಗಂಟಿ, ಪೊದೆ ಬೆಳೆದು ಅಶುಚಿತ್ವ ತಾಂಡವವಾಡುತ್ತಿದೆ. ಅದಷ್ಟು ಬೇಗ ಸ್ವಚ್ಛಗೊಳಿಸಿ ಹೊಸ ಕಟ್ಟಡವನ್ನು ನಿರ್ಮಿಸಬೇಕು. ಇಲ್ಲವೇ ಸಾರ್ವಜನಿಕವಾಗಿ ಉಪಯೋಗವಾಗುವ ಯಾವುದಾದರೂ ಕಚೇರಿ ಆರಂಭಿಸಲಿ.”

– ಮುನೀರ್ ಪಾಷ, ಕರುನಾಡು ಯುವಶಕ್ತಿ ಸಂಘಟನೆ, ತಾಲ್ಲೂಕು ಅಧ್ಯಕ್ಷ 

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

6 hours ago