Andolana originals

ದಸರಾ ಗಜಪಯಣಕ್ಕೆ ಸಂಭ್ರಮದ ಚಾಲನೆ

• ತಂಗಂ ಜಿ.ಗೋಪಿನಾಥಂ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯಿಂದ ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಗಜ ಪಯಣಕ್ಕೆ ಸಂಭ್ರಮ-ಸಡಗರದಿಂದ ಚಾಲನೆ ದೊರೆಯಿತು.

ಗಜಪಡೆಗೆ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಆನೆಗಳ ಪಾದಗಳನ್ನು ತೊಳೆದು ಪೂಜೆಸಲ್ಲಿಸಲಾಯಿತು. ಆ ಬಳಿಕ ವನದೇವತೆ ಹಾಗೂ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಬೆಳಿಗ್ಗೆ 10.40ಕ್ಕೆ ತುಲಾ ಲಗ್ನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವ‌ರ್ ಬಿ.ಖಂಡ್ರೆ ಆನೆಗಳಿಗೆ ಪುಷ್ಪಾ ರ್ಚನೆ ನೆರವೇರಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

ಈ ವೇಳೆ ಆನೆಗಳಿಗೆ ಪ್ರಿಯವಾದ ಕಡುಬು, ಮೋದಕ, ಚಕ್ಕುಲಿ, ಕೋಡುಬಾಳೆ, ಸಜ್ಜಪ್ಪ, ಕಬ್ಬು, ಬೆಲ್ಲ ಹಾಗೂ ವಿವಿಧ ಹಣ್ಣು-ಹಂಪಲು ಗಳನ್ನು ನೀಡಲಾಯಿತು. ಗಜಪಯಣಕ್ಕೆ ಚಾಲನೆ ನೀಡುತ್ತಿದ್ದಂತೆಯೇ ಆನೆಗಳು ಸೊಂಡಿಲು ಎತ್ತಿ ನಮಸ್ಕರಿಸಿದವು. ಜನರು ಹರ್ಷೋದ್ಗಾರ ಮುಗಿಲು ಮುಟ್ಟಿತು. ಜನರು ಶಿಳ್ಳೆ, ಚಪ್ಪಾಳೆ ಮೂಲಕ ಹರ್ಷ ವ್ಯಕ್ತಪಡಿಸಿದರು.

ವೀರನಹೊಸಳ್ಳಿಯಿಂದ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ಆನೆಗಳು ಮೈಸೂರಿ ನತ್ತ ಆಗಮಿಸಿದವು. ಅಭಿಮನ್ಯು(ಮತ್ತಿಗೋಡು ಶಿಬಿರ)ವಿನೊಂದಿಗೆ ಮತ್ತಿಗೋಡು ಶಿಬಿರದ ಏಕಲವ್ಯ ಮತ್ತು ಭೀಮ, ರಾಮಪುರದ ಲಕ್ಷ್ಮೀ, ಭೀಮನಕಟ್ಟೆಯ ವರಲಕ್ಷ್ಮೀ, ರಾಮಪುರದ ರೋಹಿತ್, ದುಬಾರೆ ಶಿಬಿರದ ಕಂಜನ್, ಧನಂ ಜಯ ಹಾಗೂ ಗೋಪಿ ಆನೆಗಳು ಅರಮನೆ ನಗರಿ ಮೈಸೂರಿನತ್ತ ಪಯಣ ಬೆಳೆಸಿದವು. ಒಟ್ಟು 7 ಗಂಡಾನೆಗಳು ಹಾಗೂ 2 ಹೆಣ್ಣಾನೆಗಳು ತಂಡದಲ್ಲಿ ಇವೆ.

ಕಣ್ಣನ ಸೆಳೆದ ಮೆರವಣಿಗೆ: ವೀರನಹೊಸಳ್ಳಿ ತಪಾಸಣಾ ಗೇಟ್‌ನಿಂದ ಆರಂಭಗೊಂಡ ಗಜಪಯಣ ಜಂಬೂಸವಾರಿಯನ್ನು ನೆನಪಿಸುವ ರೀತಿಯಲ್ಲಿ ಇತ್ತು. ಗಜಪಯಣಕ್ಕೆ ನಾದಸ್ವರ, ಪಟದ ಕುಣಿತ, ಪೂಜಾ ಕುಣಿತ, ಕಂಸಾಳೆ, ಡೊಳ್ಳು, ತಮಟೆ, ಚಂಡೆ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು.

ಗಜಪಯಣ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ, ಚಾಮರಾಜನಗರ ಸಂಸದ ಸುನಿಲ್ ಬೋಸ್, ಶಾಸಕರಾದ ಜಿ.ಡಿ.ಹರೀಶ್ ಗೌಡ, ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನು ಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ಮರೀಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣು ವರ್ಧನ್, ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ಡಿಸಿಎಫ್ ಗಳಾದ ಐ.ಬಿ.ಪ್ರಭುಗೌಡ, ಕೆ.ಎನ್.ಬಸವ ರಾಜು, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ದೊಡ್ಡ ಹೆಣ್ಣೂರು ಗ್ರಾಪಂ ಅಧ್ಯಕ್ಷೆ ಅಂಬಿಕಾ ಮತ್ತಿತರರು ಹಾಜರಿದ್ದರು.

ಗಜಪಡೆಯೊಂದಿಗೆ ಫೋಟೋ ಕ್ಲಿಕಿಸಿಕೊಂಡ ಜನ: ಅಲಂಕೃತಗೊಂಡ ಆನೆಗಳನ್ನು ಕಣ್ಣುಂಬಿ ಕೊಳ್ಳಲು ಜಮಾಯಿಸಿದ್ದ ಸುತ್ತಮುತ್ತಲಿನ ಹಾಡಿ, ಗ್ರಾಮಗಳ ಜನರು, ಅಧಿಕಾರಿ ಗಳು, ವಿವಿಧ ಇಲಾಖೆ ನೌಕರರು ಗಜಪಡೆಯ ಸಾರಥಿ ಅಭಿಮನ್ಯು ಹಾಗೂ ಇತರೆ ಆನೆಗಳೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು

ಆನೆ ಲದ್ದಿ ಸಂಗ್ರಹಿಸಿದ ವ್ಯಕ್ತಿ: ವೀರನಹೊಸಳ್ಳಿ ಅರಣ್ಯ ಇಲಾಖೆಯ ವಲಯ ಕಚೇರಿಯಿಂದ ಆಶ್ರಮ ಶಾಲೆಯವರೆಗೆ 1 ಕಿ.ಮೀ. ದೂರ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಆನೆಗಳು ಹೆಜ್ಜೆ ಹಾಕಿದ್ದವು. ಈ ವೇಳೆ ಆನೆಗಳು ಹಾಕಿದ್ದ ಲದ್ದಿಯನ್ನು ವ್ಯಕ್ತಿಯೋರ್ವ ಸಂಗ್ರಹ ಮಾಡುತ್ತಿದ್ದ ದೃಶ್ಯ ಕಂಡುಬಂತು.

ಫಲತಾಂಬೂಲ ನೀಡಿದ ಸಚಿವರು: ಗಜಪಡೆಯ ಮೊದಲ ತಂಡದ 9 ಆನೆ ಗಳ ಮಾವುತರು, ಕಾವಾಡಿಗಳಿಗೆ ಅರಣ್ಯ ಸಚಿವ ಈಶ್ವ‌ರ್ ಬಿ.ಖಂಡ್ರೆ ಫಲ ತಾಂಬೂಲ ನೀಡಿ ಆಹ್ವಾನಿಸಿದರು. ಈ ವೇಳೆ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳಿಗೂ ಫಲ-ತಾಂಬೂಲ ನೀಡಲಾಯಿತು.

ಆ.23ರಂದು ಅರಮನೆ ಪ್ರವೇಶ: ಆಗಸ್ಟ್ 23ರಂದು ಬೆಳಿಗ್ಗೆ 10 ಗಂಟೆಗೆ ತುಲಾ ಲಗ್ನದಲ್ಲಿ ಮೈಸೂರಿನ ಅರಮನೆಯ ಜಯಮಾರ್ತಾಂಡ ದ್ವಾರದ ಮೂಲಕ ಆರಮನೆ ಆವರಣವನ್ನು ಪ್ರವೇಶಿಸಲಿವೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago