Andolana originals

ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ

ರಾಜ್ಯದಲ್ಲೇ ಪ್ರಪ್ರಥಮವಾಗಿ ಆರಂಭವಾಗಲಿರುವ ಕೇಂದ್ರ

ಕೆ.ಆರ್.ಆಸ್ಪತ್ರೆಯಲ್ಲಿ ೩೦ ಹಾಸಿಗೆಯುಳ್ಳ ಪ್ರತ್ಯೇಕ ವಾರ್ಡ್ ಮೀಸಲು

ಎನ್‌ಜಿಒ ಸಂಸ್ಥೆಗೆ ನಿರ್ವಹಣೆಯ ಜವಾಬ್ದಾರಿ

ಗುಣಮುಖರಾದವರ ವಿಳಾಸ ಪತ್ತೆ ಹಚ್ಚಿ ಮನೆಗೆ ಕಳುಹಿಸಲು ಯೋಜನೆ

ಮೈಸೂರು: ದೂರ ದೂರದ ರಾಜ್ಯಗಳಿಂದ ರೈಲು ಮತ್ತಿತರ ವಾಹನಗಳಲ್ಲಿ ಮೈಸೂರಿಗೆಬಂದಿಳಿಯುವ ಮಾನಸಿಕ ಅಸ್ವಸ್ಥರನ್ನು ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸಲು ರಾಜ್ಯದಲ್ಲೇ ಮೊದಲ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರವನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರದ ಸೂಚನೆಯಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಪ್ರತ್ಯೇಕ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ ಸ್ಥಾಪನೆ ಯಾಗಲಿದೆ. ಪತ್ತೆಯಾದ ನಿರಾಶ್ರಿತರಿಗೆ ಚಿಕಿತ್ಸ ಕೊಡಿಸುವ ಹೊಣೆಯನ್ನು ಎನ್‌ಜಿಒಗೆ ವಹಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪೈಕಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ಇದೆ. ವರ್ಷವಿಡೀ ಹೊರ ರಾಜ್ಯ, ಹೊರ ದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಬಂದು ಹೋಗು ತ್ತಾರೆ. ಅದೇ ರೀತಿ ಪಶ್ಚಿಮ ಬಂಗಾಳ, ಬಿಹಾರ, ಆಂಧ್ರಪ್ರದೇಶ, ತಮಿಳುನಾಡು, ಮಣಿಪುರ, ಒಡಿಶ್ಶಾ, ಗುಜರಾತ್ ಮತ್ತಿತರ ರಾಜ್ಯಗಳಿಂದ ಕಟ್ಟಡ ನಿರ್ಮಾಣ, ಪೈಪ್‌ಲೈನ್ ಅಳವಡಿಕೆ, ಕೇಬಲ್ ಅಳವಡಿಕೆ ಮತ್ತಿತರ ಕೆಲಸಗಳಿಗಾಗಿ ರೈಲುಗಳಲ್ಲಿ ಬರುವುದು ಸಾಮಾನ್ಯವಾಗಿದೆ.

ಇನ್ನೊಂದು ಕಡೆ ಮೈಸೂರಿಗೆ ಮಾನಸಿಕ ಅಸ್ವಸ್ಥರು ಕೂಡ ರೈಲುಗಳು, ಲಾರಿಗಳಲ್ಲಿ ಬರುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ, ದೊಡ್ಡಗಡಿಯಾರ, ಪುರಭವನ, ಕರ್ಜನ್ ಪಾರ್ಕ್, ಕೆ.ಆರ್.ಆಸ್ಪತ್ರೆ ಇನ್ನಿತರ ಕಡೆಗಳಲ್ಲಿ ಓಡಾಡಿಕೊಂಡು, ಅವರಿವರು ಕೊಟ್ಟ ತಿಂಡಿ, ಊಟ ಮಾಡಿಕೊಂಡು ಕಾಲ ಕಳೆಯುತ್ತಾರೆ. ಇಂತಹವರ ಪೈಕಿ ಅನೇಕರು ಕ್ರಮೇಣ ಮಾನಸಿಕ ಅಸ್ವಸ್ಥರಾಗುತ್ತಾರೆ ಎನ್ನಲಾಗಿದೆ. ಹಾಗಾಗಿಯೇ, ರಾಜ್ಯ ಸರ್ಕಾರ ನಿರಾಶ್ರಿತರ ಮಾನಸಿಕ ಅಸ್ವಸ್ಥರ ಕೇಂದ್ರ(ಇಸಿಆರ್‌ಸಿ)ವನ್ನು ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದು, ಇದು ರಾಜ್ಯದಲ್ಲಿ ಮೊದಲನೆಯದಾಗಲಿದೆ.

ಇದನ್ನು ಓದಿ: ಜಿಲ್ಲೆಯಲ್ಲಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆ ಯಶಸ್ವಿ

೩೦ ಹಾಸಿಗೆಗಳ ಕೇಂದ್ರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಎಮರ್ಜೆನ್ಸಿ ಕೇರ್ ರಿಕವರಿ ಸೆಂಟರ್‌ನ್ನು ಸ್ಥಾಪಿಸಲಾಗುತ್ತಿದೆ. ಕೆ.ಆರ್.ಆಸ್ಪತ್ರೆಯಲ್ಲಿ ೩೦ ಹಾಸಿಗೆಗಳುಳ್ಳ ವಾರ್ಡ್‌ನ್ನು ಪ್ರತ್ಯೇಕವಾಗಿ ಇಡಲಾಗುತ್ತದೆ. ಈಗಾಗಲೇ ಸರ್ಕಾರೇತರ ಸಂಸ್ಥೆ (ಎನ್‌ಜಿಒ)ಗೆ ಇದರ ಜವಾಬ್ದಾರಿಯನ್ನು ನೀಡಲಾಗಿದೆ. ಎನ್‌ಜಿಒ ಸಿಬ್ಬಂದಿ ನಗರದಲ್ಲಿ ಓಡಾಡುವ ನಿರಾಶ್ರಿತ ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಕೆ.ಆರ್.ಆಸ್ಪತ್ರೆಗೆ ಕರೆತಂದು ದಾಖಲಿಸುತ್ತಾರೆ.

ಈ ಕೇಂದ್ರದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ನಿರಂತರವಾಗಿ ಚಿಕಿತ್ಸೆ ನೀಡಿದ ಮೇಲೆ ಗುಣವಾದರೆ ಅಂತಹವರನ್ನು, ವಿಳಾಸ ಪತ್ತೆ ಮಾಡಿ ಮನೆಗೆ ಕಳುಹಿಸಲಾಗುತ್ತದೆ. ಒಂದು ವೇಳೆ ಕುಟುಂಬದವರು ಇಲ್ಲದಿದ್ದರೆ ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಗುತ್ತದೆ. ಮಾನಸಿಕ ಅಸ್ವಸ್ಥ ವ್ಯಕ್ತಿಗೆ ಚಿಕಿತ್ಸೆ ಕೊಡುವ ಜತೆಗೆ, ನಿರಂತರ ಮೂರು ವರ್ಷಗಳ ಕಾಲ ನಿಗಾ ಇಟ್ಟು ಫಾಲೋ ಅಪ್ ಮಾಡಲಾಗುತ್ತದೆ.ವಯೋವೃದ್ಧರಾಗಿದ್ದರೆ ಜೀವನ ಪೂರ್ತಿ ಚಿಕಿತ್ಸೆ ಕೊಡಿಸುವುದಕ್ಕೂ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ನಿರ್ವಹಣೆಗೆ ಅನುದಾನ: ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರದ ನಿರ್ವಹಣೆಗೆ ನಿಗದಿತ ಎನ್‌ಜಿಒಗೆ ರಾಜ್ಯ ಸರ್ಕಾರ ಅನುದಾನ ಕೊಡುತ್ತದೆ. ಅದರ ಹೊರತಾಗಿ ಬೇರೆ ಯಾವುದೇ ಅನುದಾನ ಇಲ್ಲದೆ ಎನ್ ಜಿಒ ಸೇವಾ ಮನೋಭಾವದಲ್ಲಿ ಕೆಲಸ ಮಾಡಬೇಕಾಗಿದೆ. ಈ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಗೌರವಧನ ಹೊರತುಪಡಿಸಿ ಇತರೆ ಯಾವುದೇ ಸೌಲಭ್ಯಗಳೂ ಇರುವುದಿಲ್ಲ. ವೈದ್ಯರು, ಮನೋರೋಗ ತಜ್ಞರು, ಸಿಬ್ಬಂದಿ ಸರ್ಕಾರಿ ಆಸ್ಪತ್ರೆಯವರೇ ಆಗಿರುತ್ತಾರೆ. ಮಾನಸಿಕ ಅಸ್ವಸ್ಥರನ್ನು ಪತ್ತೆ ಮಾಡುವುದು, ಚಿಕಿತ್ಸೆ ಕೊಡಿಸುವುದು ಮತ್ತು ಗುಣಮುಖರಾದರೆ ಸಂಬಂಧಿಕರ ಮನೆಗೆ ತಲುಪಿಸುವುದು ಅಥವಾ ಪುನರ್ ವಸತಿ ಕೇಂದ್ರಕ್ಕೆ ರವಾನೆ ಮಾಡುವುದನ್ನು ನೋಡಿಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.

” ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತಿದೆ. ಈಗಾಗಲೇ ಎನ್‌ಜಿಒ ಆಯ್ಕೆ ಮಾಡಲು ಸರ್ಕಾರಕ್ಕೆ ಪಟ್ಟಿ ಕಳುಹಿಸಲಾಗಿದೆ. ಎಲ್ಲಾ ಪ್ರಕ್ರಿಯೆ ಮುಗಿದರೆ ಇನ್ನೊಂದು ತಿಂಗಳಲ್ಲಿ ಕೇಂದ್ರ ಶುರುವಾಗಲಿದೆ.”

-ಡಾ.ಬಿ.ಬೃಂದಾ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ, ಮೈಸೂರು.

” ಮಾನಸಿಕ ಆರೋಗ್ಯ ಕಾಯ್ದೆ ೨೦೧೭ರ ಪ್ರಕಾರ ಬೀದಿಗಳಲ್ಲಿ ಗೊತ್ತು ಗುರಿಯಿಲ್ಲದೆ ಅಲೆದಾಡುತ್ತಿರುವ ಜನರನ್ನು ರಕ್ಷಿಸುವುದು ಮುಖ್ಯವಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯು, ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಿ ಕೇಂದ್ರ ನಿರ್ವಹಣೆಗೆ ಕ್ರಮ ಕೈಗೊಳ್ಳ ಬೇಕೆಂದು ಹೇಳಿದ್ದರಿಂದಾಗಿ ಮೈಸೂರು ಜಿಲ್ಲೆಯಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.”

-ಕೆ.ಬಿ.ರಮೇಶನಾಯಕ

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

24 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

34 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

46 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

53 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

1 hour ago