Andolana originals

ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ

ರಾಜ್ಯದಲ್ಲೇ ಪ್ರಪ್ರಥಮವಾಗಿ ಆರಂಭವಾಗಲಿರುವ ಕೇಂದ್ರ

ಕೆ.ಆರ್.ಆಸ್ಪತ್ರೆಯಲ್ಲಿ ೩೦ ಹಾಸಿಗೆಯುಳ್ಳ ಪ್ರತ್ಯೇಕ ವಾರ್ಡ್ ಮೀಸಲು

ಎನ್‌ಜಿಒ ಸಂಸ್ಥೆಗೆ ನಿರ್ವಹಣೆಯ ಜವಾಬ್ದಾರಿ

ಗುಣಮುಖರಾದವರ ವಿಳಾಸ ಪತ್ತೆ ಹಚ್ಚಿ ಮನೆಗೆ ಕಳುಹಿಸಲು ಯೋಜನೆ

ಮೈಸೂರು: ದೂರ ದೂರದ ರಾಜ್ಯಗಳಿಂದ ರೈಲು ಮತ್ತಿತರ ವಾಹನಗಳಲ್ಲಿ ಮೈಸೂರಿಗೆಬಂದಿಳಿಯುವ ಮಾನಸಿಕ ಅಸ್ವಸ್ಥರನ್ನು ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸಲು ರಾಜ್ಯದಲ್ಲೇ ಮೊದಲ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರವನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರದ ಸೂಚನೆಯಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಪ್ರತ್ಯೇಕ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ ಸ್ಥಾಪನೆ ಯಾಗಲಿದೆ. ಪತ್ತೆಯಾದ ನಿರಾಶ್ರಿತರಿಗೆ ಚಿಕಿತ್ಸ ಕೊಡಿಸುವ ಹೊಣೆಯನ್ನು ಎನ್‌ಜಿಒಗೆ ವಹಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪೈಕಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ಇದೆ. ವರ್ಷವಿಡೀ ಹೊರ ರಾಜ್ಯ, ಹೊರ ದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಬಂದು ಹೋಗು ತ್ತಾರೆ. ಅದೇ ರೀತಿ ಪಶ್ಚಿಮ ಬಂಗಾಳ, ಬಿಹಾರ, ಆಂಧ್ರಪ್ರದೇಶ, ತಮಿಳುನಾಡು, ಮಣಿಪುರ, ಒಡಿಶ್ಶಾ, ಗುಜರಾತ್ ಮತ್ತಿತರ ರಾಜ್ಯಗಳಿಂದ ಕಟ್ಟಡ ನಿರ್ಮಾಣ, ಪೈಪ್‌ಲೈನ್ ಅಳವಡಿಕೆ, ಕೇಬಲ್ ಅಳವಡಿಕೆ ಮತ್ತಿತರ ಕೆಲಸಗಳಿಗಾಗಿ ರೈಲುಗಳಲ್ಲಿ ಬರುವುದು ಸಾಮಾನ್ಯವಾಗಿದೆ.

ಇನ್ನೊಂದು ಕಡೆ ಮೈಸೂರಿಗೆ ಮಾನಸಿಕ ಅಸ್ವಸ್ಥರು ಕೂಡ ರೈಲುಗಳು, ಲಾರಿಗಳಲ್ಲಿ ಬರುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ, ದೊಡ್ಡಗಡಿಯಾರ, ಪುರಭವನ, ಕರ್ಜನ್ ಪಾರ್ಕ್, ಕೆ.ಆರ್.ಆಸ್ಪತ್ರೆ ಇನ್ನಿತರ ಕಡೆಗಳಲ್ಲಿ ಓಡಾಡಿಕೊಂಡು, ಅವರಿವರು ಕೊಟ್ಟ ತಿಂಡಿ, ಊಟ ಮಾಡಿಕೊಂಡು ಕಾಲ ಕಳೆಯುತ್ತಾರೆ. ಇಂತಹವರ ಪೈಕಿ ಅನೇಕರು ಕ್ರಮೇಣ ಮಾನಸಿಕ ಅಸ್ವಸ್ಥರಾಗುತ್ತಾರೆ ಎನ್ನಲಾಗಿದೆ. ಹಾಗಾಗಿಯೇ, ರಾಜ್ಯ ಸರ್ಕಾರ ನಿರಾಶ್ರಿತರ ಮಾನಸಿಕ ಅಸ್ವಸ್ಥರ ಕೇಂದ್ರ(ಇಸಿಆರ್‌ಸಿ)ವನ್ನು ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದು, ಇದು ರಾಜ್ಯದಲ್ಲಿ ಮೊದಲನೆಯದಾಗಲಿದೆ.

ಇದನ್ನು ಓದಿ: ಜಿಲ್ಲೆಯಲ್ಲಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆ ಯಶಸ್ವಿ

೩೦ ಹಾಸಿಗೆಗಳ ಕೇಂದ್ರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಎಮರ್ಜೆನ್ಸಿ ಕೇರ್ ರಿಕವರಿ ಸೆಂಟರ್‌ನ್ನು ಸ್ಥಾಪಿಸಲಾಗುತ್ತಿದೆ. ಕೆ.ಆರ್.ಆಸ್ಪತ್ರೆಯಲ್ಲಿ ೩೦ ಹಾಸಿಗೆಗಳುಳ್ಳ ವಾರ್ಡ್‌ನ್ನು ಪ್ರತ್ಯೇಕವಾಗಿ ಇಡಲಾಗುತ್ತದೆ. ಈಗಾಗಲೇ ಸರ್ಕಾರೇತರ ಸಂಸ್ಥೆ (ಎನ್‌ಜಿಒ)ಗೆ ಇದರ ಜವಾಬ್ದಾರಿಯನ್ನು ನೀಡಲಾಗಿದೆ. ಎನ್‌ಜಿಒ ಸಿಬ್ಬಂದಿ ನಗರದಲ್ಲಿ ಓಡಾಡುವ ನಿರಾಶ್ರಿತ ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಕೆ.ಆರ್.ಆಸ್ಪತ್ರೆಗೆ ಕರೆತಂದು ದಾಖಲಿಸುತ್ತಾರೆ.

ಈ ಕೇಂದ್ರದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ನಿರಂತರವಾಗಿ ಚಿಕಿತ್ಸೆ ನೀಡಿದ ಮೇಲೆ ಗುಣವಾದರೆ ಅಂತಹವರನ್ನು, ವಿಳಾಸ ಪತ್ತೆ ಮಾಡಿ ಮನೆಗೆ ಕಳುಹಿಸಲಾಗುತ್ತದೆ. ಒಂದು ವೇಳೆ ಕುಟುಂಬದವರು ಇಲ್ಲದಿದ್ದರೆ ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಗುತ್ತದೆ. ಮಾನಸಿಕ ಅಸ್ವಸ್ಥ ವ್ಯಕ್ತಿಗೆ ಚಿಕಿತ್ಸೆ ಕೊಡುವ ಜತೆಗೆ, ನಿರಂತರ ಮೂರು ವರ್ಷಗಳ ಕಾಲ ನಿಗಾ ಇಟ್ಟು ಫಾಲೋ ಅಪ್ ಮಾಡಲಾಗುತ್ತದೆ.ವಯೋವೃದ್ಧರಾಗಿದ್ದರೆ ಜೀವನ ಪೂರ್ತಿ ಚಿಕಿತ್ಸೆ ಕೊಡಿಸುವುದಕ್ಕೂ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ನಿರ್ವಹಣೆಗೆ ಅನುದಾನ: ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರದ ನಿರ್ವಹಣೆಗೆ ನಿಗದಿತ ಎನ್‌ಜಿಒಗೆ ರಾಜ್ಯ ಸರ್ಕಾರ ಅನುದಾನ ಕೊಡುತ್ತದೆ. ಅದರ ಹೊರತಾಗಿ ಬೇರೆ ಯಾವುದೇ ಅನುದಾನ ಇಲ್ಲದೆ ಎನ್ ಜಿಒ ಸೇವಾ ಮನೋಭಾವದಲ್ಲಿ ಕೆಲಸ ಮಾಡಬೇಕಾಗಿದೆ. ಈ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಗೌರವಧನ ಹೊರತುಪಡಿಸಿ ಇತರೆ ಯಾವುದೇ ಸೌಲಭ್ಯಗಳೂ ಇರುವುದಿಲ್ಲ. ವೈದ್ಯರು, ಮನೋರೋಗ ತಜ್ಞರು, ಸಿಬ್ಬಂದಿ ಸರ್ಕಾರಿ ಆಸ್ಪತ್ರೆಯವರೇ ಆಗಿರುತ್ತಾರೆ. ಮಾನಸಿಕ ಅಸ್ವಸ್ಥರನ್ನು ಪತ್ತೆ ಮಾಡುವುದು, ಚಿಕಿತ್ಸೆ ಕೊಡಿಸುವುದು ಮತ್ತು ಗುಣಮುಖರಾದರೆ ಸಂಬಂಧಿಕರ ಮನೆಗೆ ತಲುಪಿಸುವುದು ಅಥವಾ ಪುನರ್ ವಸತಿ ಕೇಂದ್ರಕ್ಕೆ ರವಾನೆ ಮಾಡುವುದನ್ನು ನೋಡಿಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.

” ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತಿದೆ. ಈಗಾಗಲೇ ಎನ್‌ಜಿಒ ಆಯ್ಕೆ ಮಾಡಲು ಸರ್ಕಾರಕ್ಕೆ ಪಟ್ಟಿ ಕಳುಹಿಸಲಾಗಿದೆ. ಎಲ್ಲಾ ಪ್ರಕ್ರಿಯೆ ಮುಗಿದರೆ ಇನ್ನೊಂದು ತಿಂಗಳಲ್ಲಿ ಕೇಂದ್ರ ಶುರುವಾಗಲಿದೆ.”

-ಡಾ.ಬಿ.ಬೃಂದಾ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ, ಮೈಸೂರು.

” ಮಾನಸಿಕ ಆರೋಗ್ಯ ಕಾಯ್ದೆ ೨೦೧೭ರ ಪ್ರಕಾರ ಬೀದಿಗಳಲ್ಲಿ ಗೊತ್ತು ಗುರಿಯಿಲ್ಲದೆ ಅಲೆದಾಡುತ್ತಿರುವ ಜನರನ್ನು ರಕ್ಷಿಸುವುದು ಮುಖ್ಯವಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯು, ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಿ ಕೇಂದ್ರ ನಿರ್ವಹಣೆಗೆ ಕ್ರಮ ಕೈಗೊಳ್ಳ ಬೇಕೆಂದು ಹೇಳಿದ್ದರಿಂದಾಗಿ ಮೈಸೂರು ಜಿಲ್ಲೆಯಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.”

-ಕೆ.ಬಿ.ರಮೇಶನಾಯಕ

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

8 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

9 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

11 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

11 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

12 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

12 hours ago