ಮಂಜು ಕೋಟೆ
ಎಚ್. ಡಿ. ಕೋಟೆ: ಮುಜರಾಯಿ ಇಲಾಖೆಯ ಶ್ರೀ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನದ ಲಕ್ಷಾಂತರ ರೂ. ಬೆಲೆಬಾಳುವ ರಥ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಿಸಿಲು ಮಳೆಯಿಂದ ಹಾಳಾಗುತ್ತಿದೆ.
ಪಟ್ಟಣದ ಮೊದಲನೇ ಮುಖ್ಯರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಇತ್ತೀಚಿನ ವರ್ಷಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ದೇವಸ್ಥಾನ ಸಮಿತಿಯವರ ಪರಿಶ್ರಮದಿಂದ ಹಾಗೂ ದಾನಿಗಳ ಸಹಕಾರದಿಂದ ಸುಮಾರು ೨ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯತ್ತ ಸಾಗಿದೆ.
ದೇವಸ್ಥಾನಕ್ಕೆ ಪುರಸಭೆ ಮಾಜಿ ಅಧ್ಯಕ್ಷ ಬಿ. ಎಸ್. ರಂಗ ಅಯ್ಯಂಗಾರ್ ಕುಟುಂಬದವರು ೧೫ ವರ್ಷಗಳ ಹಿಂದೆ ೨೦ ಲಕ್ಷ ರೂ. ಗಳಷ್ಟು ಖರ್ಚು ಮಾಡಿ ಸಾಗುವಾನಿ ಮರದಿಂದ ರಥವನ್ನು ನಿರ್ಮಿಸಿಕೊಟ್ಟಿದ್ದು, ೧೪ ವರ್ಷಗಳಿಂದ ಮೇ ತಿಂಗಳಿನಲ್ಲಿ ಶ್ರೀದೇವಿ, ಭೂದೇವಿ ವರದರಾಜಸ್ವಾಮಿ ಉತ್ಸವಮೂರ್ತಿಗಳ ಮುಖಾಂತರ ಬ್ರಹ್ಮರಥೋತ್ಸವ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ.
ರಸ್ತೆಯಲ್ಲಿ ದೇವಸ್ಥಾನದ ರಥವನ್ನು ನಿಲ್ಲಿಸಿರುವುದರಿಂದ ನಮಗೆ ಓಡಾಡಲು ತೊಂದರೆಯಾಗಿದೆ ಎಂದು ದೇವಸ್ಥಾನ ಸಮೀಪದ ನಿವಾಸಿ ಒಬ್ಬರು ಲೋಕಾಯುಕ್ತರಿಗೆ ಒಂದು ವರ್ಷದ ಹಿಂದೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಿದಾಗ ಅಧಿಕಾರಿಗಳಿಗೆ ಸಮಿತಿಯವರು ದೇವಸ್ಥಾನ ಪಕ್ಕದ ಮನೆ ಪಾಳು ಬಿದ್ದಿದ್ದು, ಖಾಲಿ ಜಾಗದಲ್ಲಿ ರಥ ನಿಲ್ಲಿಸಲಾಗಿದೆ. ಯಾವುದೇ ತೊಂದರೆ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದರು.
ಪಕ್ಕದ ನಿವಾಸಿ ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದಾಗ, ತಹಸಿಲ್ದಾರ್ ಶ್ರೀನಿವಾಸ್ ಮತ್ತು ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ರವರಿಗೆ ರಥವನ್ನು ತೆರವುಗೊಳಿಸುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದರು.
೧ ತಿಂಗಳ ಹಿಂದೆ ಮುಖ್ಯ ಅಧಿಕಾರಿ ಮತ್ತು ತಹಸಿಲ್ದಾರ್ ಅವರು ರಥಕ್ಕೆ ನಿರ್ಮಾಣ ಮಾಡಿದ್ದ ತಗಡಿನ ಕೊಠಡಿಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ರಥ ಒಂದು ತಿಂಗಳಿಂದ ಬಿಸಿಲು ಮಳೆಯ ಹೊಡೆತಕ್ಕೆ ಸಿಲುಕಿ ಹಾಳಾಗುತ್ತಿದೆ.
ರಥ ಹಾಳಾದರೆ ಅದನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುವುದಿಲ್ಲ. ಅದನ್ನು ಸುರಕ್ಷಿತವಾದ ಸ್ಥಳದಲ್ಲಿರಿಸಿ ರಕ್ಷಣೆ ಮಾಡಬೇಕಾದ ಸಂಬಂಧಪಟ್ಟ ಅಽಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…
ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…