Andolana originals

ರಂಗೇರಿದ ದಸರಾ ಮಹೋತ್ಸವ

ಕೆ.ಬಿ.ರಮೇಶನಾಯಕ

ಮೈಸೂರು: ಅರಮನೆ ನಗರಿಯಲ್ಲಿ ನಡೆಯುತ್ತಿರುವ ನಾಡಹಬ್ಬ ದಸರಾ ಮಹೋತ್ಸವದ ವೈಭವ ದಿನಕಳೆದಂತೆ ರಂಗೇರಿದೆ. ಮೊದಲ ದಿನದಿಂದಲೂ ವಿವಿಧ ಕಾರ್ಯಕ್ರಮಗಳ ಮೂಲಕ ಜನರನ್ನು ಆಕರ್ಷಿಸುತ್ತಿರುವ ದಸರಾ ಸಂಭ್ರಮ ಮತ್ತಷ್ಟು ಕಳೆಗಟ್ಟಿದೆ.

ಅರಮನೆ ನಗರಿಗೆ ವರ್ಷಪೂರ್ತಿ ಪ್ರವಾಸಿಗರು ಆಗಮಿಸಿದರೂ, ನವರಾತ್ರಿಯ ಹಿನ್ನೆಲೆಯಲ್ಲಿ ಪ್ರವಾಸಿಗರ ಭೇಟಿ ನಿರೀಕ್ಷೆಗೂ ಮೀರಿ ಹೆಚ್ಚಳವಾಗಿರುವುದು ಗಮನಾರ್ಹವಾಗಿದೆ. ಅದರಲ್ಲೂ ಈ ವರ್ಷ ಜನರ ಪಾಲ್ಗೊಳ್ಳುವಿಕೆ ತುಸು ಹೆಚ್ಚೇ ಆಗಿದೆ. ಸೆ.೨೨ರಂದು ಆರಂಭವಾದ ದಸರಾ ಮಹೋತ್ಸವದಲ್ಲಿ ೭ನೇ ದಿನದ ಸಂಭ್ರಮ ಮುಗಿಲುಮುಟ್ಟಿದೆ. ಹತ್ತು ಹಲವು ಕಾರ್ಯಕ್ರಮಗಳು ಎಲ್ಲರನ್ನೂ ಆಕರ್ಷಿಸುವಂತೆ ಮಾಡಿವೆ.

ಸಂಭ್ರಮವೋ ಸಂಭ್ರಮ: ನಗರದಲ್ಲಿ ಸಂಭ್ರಮದ ನವೋಲ್ಲಾಸ ಎಲ್ಲೆಲ್ಲೂ ಮನೆ ಮಾಡಿದೆ. ಮನೆಗಳಲ್ಲಿ ನವರಾತ್ರಿ ಗೊಂಬೆ ಪ್ರದರ್ಶನ ಹಬ್ಬದ ವಾತಾವರಣಕ್ಕೆ ಮತ್ತಷ್ಟು ರಂಗು ಮೂಡಿಸಿದೆ. ವಿವಿಧ ವೇದಿಕೆಗಳಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಸಾಂಸ್ಕೃತಿಕ ವೈಭವವನ್ನು ಶ್ರೀಮಂತಗೊಳಿಸಿವೆ. ಬನ್ನಿಮಂಟಪದ ಪಂಜಿನ ಕವಾ ಯತು ಮೈದಾನದಲ್ಲಿ ಶನಿವಾರ ನಡೆದ ಏರ್ ಶೋ ಮತ್ತು ಭಾನುವಾರ ನಡೆದ ಡ್ರೋನ್ ಶೋ ದಸರಾಗೆ ಮತ್ತಷ್ಟು ಮೆರುಗು ನೀಡಿತು.

ಏರ್ ಶೋ, ಡ್ರೋನ್ ಶೋ ವೀಕ್ಷಿಸಿ ಜನರು ಪುಳಕಿತಗೊಂಡರು. ಅರಮನೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲ ವಯೋಮಾನ ದವರನ್ನೂ ರಂಜಿಸುತ್ತಿದ್ದರೆ, ಉತ್ತನಹಳ್ಳಿ ಬಳಿ ಐದು ದಿನಗಳ ಕಾಲ ಯುವ ದಸರಾ ಯಶಸ್ವಿಯಾಗಿ ನಡೆಯಿತಲ್ಲದೆ, ಯುವ ಮನಸ್ಸುಗಳಿಗೆ ಲಗ್ಗೆ ಇಟ್ಟಿತ್ತು. ಯುವ ಸಮೂಹ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿ, ಕುಣಿದು ಕುಪ್ಪಳಿಸಿತು. ಅರ್ಜುನ್ ಜನ್ಯ ಮತ್ತು ತಂಡದಿಂದ ಆರಂಭವಾದ ಯುವ ದಸರಾ ಝಲಕ್, ಸುನಿಽ ಚೌವ್ಹಾಣ್ ಅವರ ಹಾಡುಗಾರಿಕೆಯೊಂದಿಗೆ ಶನಿವಾರ ಸಂಪನ್ನಗೊಂಡಿತು. ಅರಮನೆ ವೇದಿಕೆ ಬಿಟ್ಟರೆ ಯುವ ದಸರಾ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಸೇರಿದ್ದರೂ ಸಣ್ಣ ಅವಘಡವೂ ಇಲ್ಲದೆ ಮುಕ್ತಾಯಗೊಂಡಿದೆ. ಮಹಿಳಾ ದಸರಾ, ಮಕ್ಕಳ ದಸರಾ, ರೈತ ದಸರಾ, ಯೋಗ ದಸರಾ, ಪಾರಂಪರಿಕ ನಡಿಗೆ ಎಲ್ಲವೂ ಈ ಬಾರಿ ವಿಭಿನ್ನವಾಗಿ ನಡೆದು ದಸರಾ ಕಳೆಯನ್ನು ಹೆಚ್ಚಿಸಿದವು.

ಸಾಹಿತ್ಯಾಸಕ್ತರನ್ನು ಸೆಳೆದ ಪಂಚಕಾವ್ಯದೌತಣ ಶನಿವಾರ ಸಂಪನ್ನಗೊಂಡರೆ, ಪುಸ್ತಕ ಮೇಳ ಪುಸ್ತಕ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಕುಸ್ತಿ ಪ್ರೇಮಿಗಳನ್ನು ರಂಜಿಸಿತಲ್ಲದೆ, ಕುಸ್ತಿಪಟುಗಳು ದಸರಾ ಕಿಶೋರ-ಕಿಶೋರಿ, ದಸರಾ ಕಂಠೀರವ, ದಸರಾ ಕೇಸರಿ, ಮೈಸೂರು ದಸರಾ ಕುಮಾರ ಕಪ್ ಗೆದ್ದು ಬೀಗಿದರು. ರಾಜ್ಯ ಮಟ್ಟದ ಮುಖ್ಯಮಂತ್ರಿಗಳ ದಸರಾ ಕಪ್ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ಮುಗಿದಿದ್ದು, ಸಾವಿರಾರು ಕ್ರೀಡಾಪಟುಗಳು ಸಾಂಸ್ಕೃತಿಕ ರಾಜಧಾನಿಯ ವೈಭವ ಸವಿದು ಊರಿನತ್ತ ಪಯಣ ಬೆಳೆಸಿದರು. ೧೦ ಕಿಮೀ ಮ್ಯಾರಥಾನ್ ಭಾನುವಾರ ನಡೆಯಿತು. ಲಕ್ಷಾಂತರ ಹೂವುಗಳಿಂದ ಕಂಗೊಳಿಸುತ್ತಿರುವ ವಿವಿಧ ಕಲಾಕೃತಿಗಳ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬೆಳಿಗ್ಗೆಯಿಂದ ಸಂಜೆವರೆಗೆ ಮುಗಿಬಿದ್ದು ಸೆಲ್ಛಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಇನ್ನು ಪಕ್ಕದಲ್ಲಿರುವ ದಸರಾ ವಸ್ತು ಪ್ರದರ್ಶನದ ಕಡೆಗೆ ಪ್ರವಾಸಿಗರು ತೆರಳುವುದರಿಂದ ಎತ್ತನೋಡಿದರೂ ಜನರ ದಂಡು ಕಾಣುತ್ತಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಆಹಾರ ಮೇಳದಲ್ಲಿ ಬಾಯಿಚಪ್ಪರಿಸುವಂತಹ ಖಾದ್ಯ ಸಿಗುತ್ತಿರುವುದರಿಂದ ಬಗೆಬಗೆಯ ಭಕ್ಷ  ಸವಿದು ಹೋಗುತ್ತಿದ್ದಾರೆ. ಶನಿವಾರ ರಾತ್ರಿ ೧೧ ಗಂಟೆಯಾದರೂ ಆಹಾರ ಮೇಳದ ಕಡೆಗೆ ಬರುವ ಜನರ ಸಂಖ್ಯೆ ಕಡಿಮೆಯಾಗದ ಕಾರಣ ಮಳಿಗೆಗಳ ಮಾಲೀಕರು ಆಹಾರ ಪೂರೈಸುವಲ್ಲಿ ಸುಸ್ತಾದರೆ, ಜನರನ್ನು ನಿಯಂತ್ರಿಸುವಲ್ಲಿ ಪೊಲೀಸರು ಕೂಡ ಹೈರಣಾದರು.

ಖಾಸಗಿ ದರ್ಬಾರ್: ಅರಮನೆಯಲ್ಲಿ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಖಾಸಗಿ ದರ್ಬಾರು ಗತಕಾಲದ ವೈಭವವನ್ನು ನೆನಪಿಸುವಂತೆ ಮಾಡಿದೆ. ರಾಜಪೋಷಾಕಿನಲ್ಲಿ ಯದುವೀರ್ ನಡೆಸಿಕೊಡುವ ಖಾಸಗಿ ದರ್ಬಾರ್ ವೀಕ್ಷಣೆಗೆ ಖಾಸಗಿಯಾಗಿ ಶಿಫಾರಸ್ಸು ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ

ಗಿನ್ನಿಸ್ ದಾಖಲೆ ನಿರ್ಮಾಣ!: 

ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆಸ್ಕ್ ವತಿಯಿಂದ ನಡೆಸಲಾದ ಡ್ರೋನ್ ಪ್ರದರ್ಶನದಲ್ಲಿ ಒಟ್ಟು ೨,೯೮೩ ಡ್ರೋನ್ಗಳನ್ನು ಬಳಸಿಕೊಂಡು ಬಾನಂಗಳದಲ್ಲಿ ಬೃಹದಾ ಕಾರದ ಹುಲಿ ಕಲಾಕೃತಿಯನ್ನು ನಿರ್ಮಾಣ ಮಾಡುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಾಣ ಮಾಡಲಾಯಿತು. ಈ ಮೊದಲು ೧,೯೮೫ ಡ್ರೋನ್‌ಗಳನ್ನು ಬಳಸಿಕೊಂಡು ಹುಲಿಯ ಕಲಾಕೃತಿ ರಚಿಸುವ ಮೂಲಕ ದಾಖಲೆ ನಿರ್ಮಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago