Andolana originals

ಹೊಸ ಮನೆ ಜೊತೆಗೇ ಕೊಚ್ಚಿಹೋದ ದಂಪತಿ!

  • ಪ್ರಸಾದ್‌ ಲಕ್ಕೂರು

ಚಾ. ನಗರ: ಕೇರಳ ರಾಜ್ಯದ ವಯನಾಡಿನ ಮೇಪ್ಪಾಡಿಯಲ್ಲಿ ಸುರಿದ ಭೀಕರ ಮಳೆ ಹಾಗೂ ಭೂ ಕುಸಿತದಿಂದ ಚೂರಲ್ ಮಲೈನಲ್ಲಿ ನಿರ್ಮಿಸಿದ್ದ ಕನಸಿನ ಮನೆ ಜೊತೆಯಲ್ಲಿಯೇ ರಾಜೇಂದ್ರ (ರಾಜನ್) ಮತ್ತು ರತ್ನಮ್ಮ (ರಜನಿ) ದಂಪತಿ ಕೊಚ್ಚಿ ಹೋಗಿದ್ದಾರೆ.

ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮದ ರಾಜೇಂದ್ರ ಇರಸವಾಡಿ ಗ್ರಾಮದ ರತ್ನಮ್ಮಳನ್ನು ಮದುವೆಯಾಗಿದ್ದರು. ಹೆಚ್ಚು ಕೂಲಿ ಹಣ ಅರಸಿ ಕೇರಳದ ಮೇಪ್ಪಾಡಿ ಬಳಿಯ ಚೂರಲ್ ಮಲೈಗೆ ತೆರಳಿ ಕಾಫಿ ಎಸ್ಟೇಟ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.

ಎಸ್ಟೇಟ್‌ನಲ್ಲಿ ಕೆಲಸ ಮಾಡಿ ಒಂದಷ್ಟು ಹಣ ಸಂಪಾದಿಸಿದ ರಾಜೇಂದ್ರ ದಂಪತಿ ಸ್ವಂತ ನೆಲದಲ್ಲೇ ಬದುಕು ಕಟ್ಟಿಕೊಳ್ಳಲು ಮುಂದಾಗಿ ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮದಲ್ಲಿ ಬೇಕರಿ ತೆರೆದಿದ್ದರು. ಆದರೆ, ಬೇಕರಿ ವ್ಯಾಪಾರದಲ್ಲಿ ನಷ್ಟ ಸಂಭವಿಸಿದ್ದರಿಂದ ಮತ್ತೆ ಚೂರಲ್ ಮಲೈಗೆ ತೆರಳಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮುಂದುವರಿಸಿದ್ದರು. ಅಲ್ಲಿಯೇ ಜಾಗ ಖರೀದಿಸಿ, ತಮ್ಮ ಕನಸಿನ ಪುಟ್ಟದೊಂದು ಮನೆಯನ್ನು ಇತ್ತೀಚೆಗೆ ನಿರ್ಮಿಸಿಕೊಂಡು ವಾಸವಿದ್ದರು. ಮಂಗಳವಾರ ತಡರಾತ್ರಿ ಸಂಭವಿಸಿದ ಜಲಪ್ರವಾಹದಿಂದ ಮನೆಯೂ ಮುಳುಗಡೆ ಯಾಗಿ ಅಣ್ಣನ ಶವ ಪತ್ತೆಯಾಗಿ, ಅತ್ತಿಗೆಯ ಗುರುತು ಸಿಗದಂತಾಗಿದೆ. ರಾಜೇಂದ್ರ ದಂಪತಿ, ತಮ್ಮ ಕನಸಿನ ಮನೆ ಜೊತೆಯಲ್ಲಿಯೇ ಕಣ್ಮರೆಯಾಗಿದ್ದಾರೆ.

ಮೇಪ್ಪಾಡಿ ಪ್ರವಾಹದಲ್ಲಿ ಮೃತಪಟ್ಟ ರಾಜೇಂದ್ರ-ರತ್ನಮ್ಮ ?

ಚಾಮರಾಜನಗರ ಜಿಲ್ಲೆಯ ವೆಂಕಟಯ್ಯನಛತ್ರ ಮೂಲದ ಪತಿ ಪತ್ನಿ ?,  ಕೂಲಿ ಕೆಲಸಕ್ಕಾಗಿ ಮೇಪ್ಪಾಡಿಗೆ ತೆರಳಿದ್ದರು ?, ದಂಪತಿಗೆ ಮಕ್ಕಳಿರಲಿಲ್ಲ ?, ಪ್ರಳಯ ಸಂಭವಿಸುವ ಹಿಂದಿನ ದಿನವಷ್ಟೇ ಊರಿಗೆ ಮರಳಿದ್ದ ರಾಜೇಂದ್ರ ಸೋದರಿ.

ನಾವೇ ಅಂತ್ಯ ಸಂಸ್ಕಾರ ಮಾಡುತ್ತೇವೆ’

ಮಗಳು ರತ್ನಮ್ಮಳನ್ನು ವೆಂಕಟಯ್ಯನಛತ್ರದ ರಾಜೇಂದ್ರ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಹತ್ತಾರು ವರ್ಷಗಳ ಹಿಂದೆಯೇ ಚೂರಲ್‌ಮಲೈಗೆ ತೆರಳಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಭೂ ಕುಸಿತಕ್ಕೆ ಸಿಲುಕಿ ಇಬ್ಬರೂ ಕಣ್ಮರೆಯಾಗಿದ್ದಾರೆ. ಅವರ ಮೃತದೇಹಗಳನ್ನು ಪತ್ತೆ ಮಾಡಿಕೊಟ್ಟರೆ, ನಾವೇ ಅಂತ್ಯಕ್ರಿಯೆ ನಡೆಸುತ್ತೇವೆ.

-ನಂಜುಂಡಶೆಟ್ಟಿ, ಮೃತರಾದ ರತ್ನಮ್ಮ ಅವರ ತಂದೆ.

‘ಪ್ರವಾಹದ ಹಿಂದಿನ ದಿನವಷ್ಟೇ ವಾಪಸ್ ಬಂದೆ’

ಅತ್ತಿಗೆ ರತ್ನಮ್ಮ, ಅಣ್ಣ ರಾಜೇಂದ್ರರನ್ನು ನೋಡಲು ಕೇರಳದ ಚೂರಲ್ ಮಲೈಗೆ ಹೋಗಿದ್ದೆ. ಅದೃಷ್ಟವಶಾತ್ ಭೂ ಕುಸಿತ ಸಂಭವಿಸಿದ ಹಿಂದಿನ ದಿನವಷ್ಟೇ ಅಂದರೆ ಭಾನುವಾರ ವಾಪಸ್ ಇರಸವಾಡಿಗೆ ಬಂದುಬಿಟ್ಟಿದ್ದೆ. ಅಲ್ಲಿಯೇ ಇದ್ದಿದ್ದರೆ ಬಹುಶಃ ನಾನೂ ಕೂಡ ಜೀವಂತವಾಗಿ ಉಳಿಯುತ್ತಿರಲಿಲ್ಲ ಅನಿಸುತ್ತದೆ ಎಂದು ಮೃತ ರಾಜೇಂದ್ರ ಅವರ ಸೋದರಿ ಜ್ಯೋತಿ ಕಣ್ಣೀರಿಟ್ಟರು. ಅಣ್ಣ-ಅತ್ತಿಗೆ ಶ್ರಮ ಜೀವಿಗಳು. ಎಸ್ಟೇಟ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ, ಮಕ್ಕಳಿರಲಿಲ್ಲ. ಇತ್ತೀಚೆಗೆ ಗ್ರಾಮದಲ್ಲಿ ನಡೆದ ನಮ್ಮ ಸಂಬಂಽಕರ ಶುಭ ಸಮಾರಂಭಕ್ಕೂ ಬಂದಿದ್ದರು ಎಂದು ನೆನಪಿಸಿಕೊಂಡರು

 

ಪ್ರಸಾದ್‌ ಲಕ್ಕೂರು

ಚಾಮರಾಜನಗರ ಜಿಲ್ಲೆಯ ಲಕ್ಕೂರು ಗ್ರಾಮದವನಾದ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ.ಪತ್ರಿಕೋದ್ಯಮ ಪದವಿ ಪಡೆದಿದ್ದು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯ ಮಟ್ಟದ ಉಷಾ ಕಿರಣ, ವಿಜಯ ಕರ್ನಾಟಕ, ವಿಜಯವಾಣಿ, ಜಿಲ್ಲಾ ಮಟ್ಟದ ಪ್ರಜಾನುಡಿ, ಜನಮಿತ್ರ ಪತ್ರಿಕೆಗಳಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ 2 ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

7 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

9 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

11 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

11 hours ago