Andolana originals

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ ಸುತ್ತಮುತ್ತ ಶನಿವಾರ, ಭಾನುವಾರ, ಸೋಮವಾರ ದಿನಕ್ಕೊಂದು ಹಸು ಅಥವಾ ಕರು ಕಾಡುಪ್ರಾಣಿಗಳ ದಾಳಿಗೆ ಬಲಿಯಾಗಿದ್ದು, ಘಟನಾ ಸ್ಥಳದಲ್ಲಿನ ಕುರುಹು ಹಾಗೂ ದನಗಾಹಿಗಳು ಹೇಳುವ ಪ್ರಕಾರ ಇದು ಹುಲಿಯೇ ನಡೆಸಿರುವ ದಾಳಿಯಾಗಿದೆ.

ಬಿಸಲವಾಡಿ ಚನ್ನಬಸಪ್ಪ ಅವರಿಗೆ ಸೇರಿದ ೨೦ ದಿನಗಳ ಕರುವನ್ನು ಸೋಮವಾರ ಬೆಳಗಿನ ಜಾವ ಕೊಟ್ಟಿಗೆಯಿಂದ ಎತ್ತಿಕೊಂಡು ಹೋಗಿದ್ದು, ಸ್ಥಳದಲ್ಲಿ ಮೂಡಿರುವ ಹೆಜ್ಜೆ ಗುರುತಿನ ಪ್ರಕಾರ ಇದು ಹುಲಿ ದಾಳಿ ಎಂದು ಗೊತ್ತಾಗಿದೆ. ಚನ್ನಬಸಪ್ಪ ಅವರ ತೋಟದ ಮನೆ ಗ್ರಾಮದಿಂದ ಒಂದು ಕಿ.ಮೀ. ದೂರದಲ್ಲಿದ್ದು ಮನೆ ಮುಂದಿನ ಕೊಟ್ಟಿಗೆಯಲ್ಲಿ ೧೦ ರಾಸು, ದನಕರುಗಳನ್ನು ಕಟ್ಟಿದ್ದಾರೆ. ಗೇಟಿನ ಸಂದಿಯಿಂದ ಬಂದು ಕರುವನ್ನು ಎತ್ತಿಕೊಂಡು ಹೋಗಿದೆ. ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಬಂದು ಹುಡುಕಾಟ ನಡೆಸಿದರೂ ಕರುವಿನ ಕಳೇಬರದ ಸಣ್ಣ ತುಣುಕು ಕೂಡ ಪತ್ತೆಯಾಗಿಲ್ಲ.

ಇದನ್ನು ಓದಿ: ಇದ್ದೂ ಇಲ್ಲದಂತಿರುವ ಟರ್ಷಿಯರಿ ಕ್ಯಾನ್ಸರ್‌ ಕೇರ್‌ 

ಇನ್ನು ಭಾನುವಾರ, ಸಾಗಡೆ ಗ್ರಾಮದ ಊರ ಹೊರಗಿನ ಬಯಲಿನಲ್ಲಿ ಮೇಯುತ್ತಿದ್ದ ಹತ್ತಾರು ಜಾನುವಾರು, ಕುರಿ, ಮೇಕೆಗಳ ಮಧ್ಯದಲ್ಲಿಯೇ ನೋಡನೋಡುತ್ತಿದ್ದಂತೆ ಹುಲಿ ಪ್ರತ್ಯಕ್ಷವಾಗಿ ಮೇಯುತ್ತಿದ್ದ ಹಸುವನ್ನು ಕೊಂದಿದೆ. ಗ್ರಾಮದ ಹೋಟೆಲ್ ಬಸವಣ್ಣ ಅವರ ಪುತ್ರಿ ನಾಗೇಶ್ವರಿ ಅವರಿಗೆ ಸೇರಿದ ಹಸುವನ್ನು ಹುಲಿ ಹಿಡಿದು ಸನಿಹವೇಬೆಳೆದುನಿಂತಿರುವ ಗಿಡಗಂಟಿಯ ಗುತ್ತಿಯ ಒಳಗಡೆ ಎಳೆದೊಯ್ದಿದೆ.

ದನಗಾಹಿಗಳಾದ ಹೋಟೆಲ್ ಬಸವಣ್ಣ, ಸಿದ್ದನಾಯ್ಕ, ಕಾಯಕನಾಯಕ ಎಂಬವರು ಕೂಗಾಡಿ ಗದರಿಸಲಾಗಿ ಹಸುವಿನ ಕುತ್ತಿಗೆ ಹಿಡಿದಿದ್ದ ಹುಲಿ ಬಿಟ್ಟುಹೋಗಿದೆ. ಅರೆಬರೆ ಜೀವ ಇದ್ದ ಹಸು ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದೆ. ಗರ್ಭಧರಿಸಿದ್ದ ಈ ಹಸು ಸುಮಾರು ೫೦ ಸಾವಿರ ರೂ. ಬೆಲೆಬಾಳುತ್ತಿತ್ತು ಎಂದು ಹಸುವಿನ ಮಾಲೀಕ ರಾದ ನಾಗೇಶ್ವರಿ ತಿಳಿಸಿದ್ದಾರೆ.

ತಿಂಗಳ ಹಿಂದೆ ಕಲ್ಪುರ ಗ್ರಾಮದ ಸುತ್ತಮುತ್ತ ಹುಲಿ ದಾಳಿಗೆ ಹಸುಗಳು ಮೇಲಿಂದ ಮೇಲೆ ಬಲಿಯಾಗಿದ್ದವು. ಅದರ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ವಾಕ್‌ಥ್ರೋ ಬೋನು ಇರಿಸಿ ವ್ಯಾಪಕವಾಗಿ ಕೂಂಬಿಂಗ್ ನಡೆಸಿದ್ದರು. ಆದರೆ ಸೆರೆ ಸಿಗಲಿಲ್ಲ. ಹುಲಿ ಕಾಡಿನತ್ತ ವಾಪಸ್ ಹೋಗಿರಬಹುದು ಎಂದು ರೈತರು ನಿಟ್ಟುಸಿರು ಬಿಡುತ್ತಿರವುದರ ನಡುವೆಯೇ ಕಲ್ಪುರ ಗ್ರಾಮದ ಬಳಿಯಸಾಗಡೆಯಲ್ಲಿ ಕಾಣಿಸಿಕೊಂಡು ಹಸುವನ್ನು ಕೊಂದಿರುವುದು ಅಲ್ಲಿನ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ. ಇದೇ ರೀತಿ ಶನಿವಾರ ಬೆಳಗಿನ ಜಾವ ಬಿಸಲವಾಡಿ ಗ್ರಾಮದ ನಂಜಪ್ಪ ಅವರಿಗೆ ಸೇರಿದ ಹಸು ಬಲಿಯಾಗಿತ್ತು. ಇದು ಹುಲಿ ದಾಳಿಯೇ ಎಂಬುದು ಅವರ ಅನುಸಿಕೆಯೂ ಆಗಿದೆ.

ಇದನ್ನು ಓದಿ: ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

” ಹಸು, ಕರು ಹಾಕಿ ಕೇವಲ ೨೦ ದಿನಗಳಾಗಿತ್ತು. ಆ ಕರುವನ್ನು ಹುಲಿ ಸೋಮವಾರ ಬೆಳಗಿನ ಜಾವ ಎತ್ತಿಕೊಂಡು ಹೋಯಿತು.ಕರು ಇಲ್ಲದ ಕಾರಣಕ್ಕೆ ಎರಡು ಹೊತ್ತಿನಿಂದ ೧೦ ಲೀಟರ್ (ಬೆಳಿಗ್ಗೆ, ಸಂಜೆ) ಹಾಲು ಇಲ್ಲದಂತಾಗಿದೆ. ಮೊದಲು ಕರು ಬಿಟ್ಟು ನಂತರ ಕರೆಯಬೇಕು. ಇಲ್ಲದಿದ್ದರೆ ಅದು ಹಾಲು ಕೊಡುವುದಿಲ್ಲ. ಕರು ಇಲ್ಲದ ಕಾರಣ ಹಸು ಬೆಳಿಗ್ಗೆಯಿಂದ ಚಡಪಡಿಸುತ್ತಿದೆ.”

-ಚನ್ನಬಸಪ್ಪ, ಬಿಸಲವಾಡಿ ಗ್ರಾಮ

೩೦ ಸಾವಿರ ರೂ. ಪರಿಹಾರ:  ಕಾಡುಪ್ರಾಣಿಗಳ ದಾಳಿಯಿಂದ ಅಸುನೀಗಿದ ಹಸು ಮತ್ತು ಎತ್ತುಗಳಿಗೆ ತಲಾ ೩೦ ಸಾವಿರ ರೂ. ಪರಿಹಾರ ಕೊಡಲಾಗುತ್ತಿದೆ. ಕರು ಸತ್ತಾಗ ಅದರ ವಯಸ್ಸು ಆಧರಿಸಿ ಪಶು ವೈದ್ಯರು ನೀಡುವ ವರದಿ ಅನ್ವಯ ಪರಿಹಾರ ಕೊಡಲಾಗುತ್ತದೆ. ಅನುದಾನ ಲಭ್ಯ ಇಲ್ಲದಿದ್ದಾಗ ಕೆಲವೊಮ್ಮೆ ಪರಿಹಾರ ನೀಡಿಕೆ ಸ್ವಲ್ಪ ವಿಳಂಬ ಆಗುತ್ತದೆ. ಆದರೆ, ಪರಿಹಾರ ಹಣ ನೇರವಾಗಿ ಸಂಬಂಧಿಸಿದವರ ಖಾತೆಗೆ ತಲುಪೇ ತಲುಪುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

” ಬಹುತೇಕ ರೈತರು ಒಂದೆರಡು ಹಸುಗಳನ್ನು ಮೇಯಿಸಿಕೊಂಡು ಹಾಲು ಹಾಕಿ ಜೀವನ ನಡೆಸುತ್ತಿದ್ದಾರೆ. ಅಂಥವರಿಗೆ ಸೇರಿದ ಹಸುಗಳೇ ಹುಲಿ, ಚಿರತೆ ದಾಳಿಗೆ ಬಲಿಯಾಗುತ್ತಿವೆ. ಹಸು ಜೀವ ಹೋಗಿ, ಅದರಿಂದನಷ್ಟ ಅನುಭವಿಸುವ ರೈತರ ಜೀವನವೂ ಕಷ್ಟಕರ ವಾಗುತ್ತಿದೆ. ಇದನ್ನು ಮನಗಂಡು ಆಕಳುಗಳು ಅವು ಹಿಂಡುವ ಹಾಲಿನ ಆಧಾರದ ಮೇಲೆ ಕನಿಷ್ಠ ೫೦ ಸಾವಿರ ರೂ.ನಿಂದ ೧ ಲಕ್ಷ ರೂ.ಗೂ ಮೀರಿ ಬೆಲೆ ಬಾಳುತ್ತವೆ. ಅಷ್ಟೂ ನಷ್ಟ ತುಂಬಿಕೊಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು.”

-ಪ.ಸುರೇಶ್, ಸಾಗಡೆ

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

5 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

5 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

6 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

6 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

7 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

7 hours ago