ದಿನೇಶ್ಕುಮಾರ್ ಎಚ್.ಎಸ್.
ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ
ಮೈಸೂರು: ಅಪಾರ ಪೌಷ್ಟಿಕ ಸತ್ವಗಳನ್ನು ಒಳಗೊಂಡ ಹಾಗೂ ಮಧುಮೇಹಿಗಳಿಗೆ ಪ್ರಿಯವಾದ ನೀಲಿ ಸುಂದರಿ ನೇರಳೆ ಹಣ್ಣು ಇದೀಗ ಮೈಸೂರು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.
ಪ್ರಕೃತಿ ನಮಗೆ ಕಾಲಕಾಲಕ್ಕೆ ತಕ್ಕಂತೆ ವಿವಿಧ ಹಣ್ಣುಗಳನ್ನು ನೀಡುತ್ತದೆ. ಬೇಸಿಗೆಯಲ್ಲಿ ಕಲ್ಲಂಗಡಿ ಸಿಕ್ಕರೆ, ಜೂನ್ ವರೆಗೂ ಮಾವಿನ ಹಣ್ಣು ಬಾಯಿಯಲ್ಲಿ ನೀರೂರಿಸುತ್ತದೆ. ಇನ್ನೇನು ಮಾವು ಮುಗಿಯಿತು ಎನ್ನುವ ಸಂದರ್ಭದಲ್ಲಿಯೇ ಥಟ್ಟನೆ ಪ್ರತ್ಯಕ್ಷವಾಗಿದೆ ಕಡು ನೀಲಿ ಬಣ್ಣದ ನೇರಳೆ ಹಣ್ಣು. ಅಂದರೆ ಒಂದೊಂದು ಕಾಲಕ್ಕೆ ಒಂದೊಂದು ಬಗೆಯ ಹೂವುಗಳು, ಹಣ್ಣುಗಳು ಸಿಗುತ್ತವೆ.
ವರ್ಷದ ಎಲ್ಲಾ ಸಮಯದಲ್ಲೂ ಸಿಗುವ ಹಣ್ಣು, ತರಕಾರಿಗಳಿಗೆ ಒಂದು ಬಗೆಯ ಗುಣ ಲಕ್ಷಣಗಳು ಕಂಡುಬಂದರೆ ಕೇವಲ ವರ್ಷಕ್ಕೆ ಒಂದು ಬಾರಿ ಸಿಗುವ ಹಣ್ಣುಗಳಲ್ಲಿ ಕೆಲವೊಂದು ವಿಶೇಷವಾದ ಗುಣಲಕ್ಷಣಗಳು ಇರುತ್ತವೆ.
ಅದರಲ್ಲಿ ನೀಲಿ ಸುಂದರಿ ಎಂದೇ ಕರೆಸಿಕೊಳ್ಳುವ ಈ ಹಣ್ಣು ಬಹುಪಯೋಗಿ ಎಂಬುದರಲ್ಲಿ ಎರಡು ಮಾತಿಲ್ಲ. ಇದೀಗ ನಗರದ ದೇವರಾಜ ಮಾರುಕಟ್ಟೆ, ಅಗ್ರಹಾರ ವೃತ್ತ, ಮೈಸೂರು ವಿವಿ ರಸ್ತೆ, ವಾಲ್ಮೀಕಿ ರಸ್ತೆ, ಕುವೆಂಪುನಗರ, ಎನ್.ಆರ್.ಮೊಹಲ್ಲಾ ಮುಂತಾದ ಪ್ರಮುಖ ಬಡಾವಣೆಗಳ ರಸ್ತೆ ಹಾಗೂ ವೃತ್ತಗಳಲ್ಲಿ ಕಪ್ಪು ಸುಂದರಿಯದ್ದೇ ಕಾರುಬಾರು.
ಕಳೆದ ನಾಲ್ಕು ದಿನಗಳ ಹಿಂದೆ ಕೆಜಿಗೆ ೪೦೦ ರೂ. ಇದ್ದ ನೇರಳೆ ಹಣ್ಣು ಇದೀಗ ೨೦೦ ರೂ.ನಿಂದ ೨೫೦ರೂ.ವರೆಗೆ ಮಾರಾಟವಾಗುತ್ತಿದೆ. ಅದರಲ್ಲಿ ನಾಟಿ ನೇರಳೆ ಹಣ್ಣಿಗೆ ಬೇರೆಯದ್ದೇ ಬೆಲೆ ಎಂದು ಮಾರಾಟಗಾರರು ಗ್ರಾಹಕರನ್ನು ಸೆಳೆಯುತ್ತಿದ್ದಾರೆ.
ಬಹುಪಯೋಗಿ ಹಣ್ಣು ನೇರಳೆ!:
ಬೇಸಿಗೆಯ ಅಂತ್ಯ ಹಾಗೂ ಮಳೆಗಾಲದಲ್ಲಿ ಎಲ್ಲೆಡೆ ಸಿಗುವ ನೇರಳೆ ಹಣ್ಣಿನಲ್ಲಿ ಅಪಾರವಾದ ಪೌಷ್ಟಿಕಾಂಶಗಳಿವೆ. ನಾರಿನ ಅಂಶ, ಮೆಗ್ನೀಶಿಯಂ, ಕ್ಯಾರೋಟಿನ್, ಕಬ್ಬಿಣದ ಅಂಶ, ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ ಅಂಶಗಳು ಹೆಚ್ಚು ಸಿಗುತ್ತವೆ. ನೇರಳೆ ಹಣ್ಣಿನ ಬೀಜಗಳಿಂದ ಮಾಡಿದ ಪುಡಿ ಮಧುಮೇಹಿಗಳಿಗೆ ರಾಮಬಾಣ. ಸೀಸನ್ನಲ್ಲಿ ನೇರಳೆ ಹಣ್ಣನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆದುಕೊಳ್ಳಬಹುದು. ಜೊತೆಗೆ ಕೆಲವು ಆರೋಗ್ಯ ಪ್ರಯೋಜನಗಳು ಸಹ ಸಿಗುತ್ತವೆ.
” ನಾಲ್ಕು ದಿನಗಳ ಹಿಂದೆ ಕೆಜಿಗೆ ೪೦೦ ರೂ. ಬೆಲೆ ಇದ್ದ ನೇರಳೆ ಹಣ್ಣು ಇಂದು ೨೫೦ ರೂ.ಗೆ ಇಳಿದಿದೆ. ಮುಂದೆ ಬೆಲೆ ಇನ್ನಷ್ಟು ಕಡಿಮೆಯಾಗಬಹುದು. ಹೆಚ್ಚು ಮಳೆಯಾಗದ ಕಾರಣ ಹಣ್ಣು ಯಥೇಚ್ಚವಾಗಿ ಮಾರುಕಟ್ಟೆಗೆ ಬಂದಿದೆ. ಹೀಗಾಗಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಹಣ್ಣು ಸಿಗುತ್ತಿದೆ.”
-ಭಾಗ್ಯಮ್ಮ, ರಮ್ಮನಹಳ್ಳಿ, ಹಣ್ಣು ಮಾರಾಟಗಾರರು
ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…
ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…
ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…