Andolana originals

ಪಾಳು ಬಿದ್ದ ಗಿರಿಜನರ ಸಮುದಾಯ ಭವನ

ಅಧಿಕಾರಿಗಳು,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ 

ಮಂಜು ಕೋಟೆ

ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ ಗಿರಿಜನರ ಸಮುದಾಯ ಭವನ ಆದಿವಾಸಿ ಜನರ ಅನುಕೂಲಕ್ಕೆ ಸದುಪಯೋಗವಾಗದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು ವರ್ಷಗಳಿಂದ ಪಾಳುಬಿದ್ದಿದೆ.

ಕಾಡಿನಲ್ಲಿದ್ದ ಅನೇಕ ಗಿರಿಜನರನ್ನು ನಾಡಿಗೆ ಕರೆತಂದು ಅವರನ್ನು ಮುಖ್ಯ ವಾಹಿನಿಗೆ ತರಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ರೂ. ಖರ್ಚು ಮಾಡುತ್ತಿ ದ್ದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಮೂಲ ಸೌಕರ್ಯದಿಂದ ವಂಚಿತವಾಗುತ್ತಿರುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ತಾಲ್ಲೂಕಿನ ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ೨೦೧೯ನೇ ಸಾಲಿನಲ್ಲಿ ಟಿಎಸ್‌ಪಿ ಯೋಜನೆ ಮೂಲಕ ೧೨ ಲಕ್ಷ ರೂ. ವೆಚ್ಚದಲ್ಲಿ ಗಿರಿಜನರ ಸಮುದಾಯ ಭವನವನ್ನು ಜಿಪಂ ಮೂಲಕ ಗುತ್ತಿಗೆದಾರ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.

ಈ ಪುನರ್ವಸತಿ ಕೇಂದ್ರದಲ್ಲಿ ೫೦ಕ್ಕೂ ಹೆಚ್ಚು ಗಿರಿಜನ ಕುಟುಂಬಗಳು ವಾಸ ಮಾಡುತ್ತಿದ್ದು ಈ ಭಾಗದ ಜನರಿಗೆ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸಲು ಈ ಭವನವನ್ನು ಐದು ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದೆ. ಆದರೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭವನವನ್ನು ಉದ್ಘಾಟಿಸಿ ಗಿರಿಜನರ ಅನುಕೂಲಕ್ಕೆ ನೀಡದೆ ನಿರ್ಲಕ್ಷಿಸಿರುವುದರಿಂದ ಭವನ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ.

ಕಟ್ಟಡದ ಸುತ್ತಲೂ ಗಿಡ ಗಂಟಿಗಳು ಬೆಳೆದು ಹಾವು, ಚೇಳುಗಳ ವಾಸ ಸ್ಥಾನವಾಗಿದೆ. ಪ್ರತಿಯೊಂದು ಹಾಡಿಯಲ್ಲೂ ಇಂತಹ ಅನೇಕ ಯೋಜನೆಗಳಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನ ಮುಂತಾದವುಗಳು ಇದೇ ರೀತಿ ಪಾಳುಬಿದ್ದಿವೆ. ಇನ್ನಾದರೂ ಸಂಬಂಧ ಪಟ್ಟ ಜಿಲ್ಲಾ ಮಟ್ಟದ ಅಽಕಾರಿಗಳು ಇತ್ತ ಗಮನಹರಿಸಿ ಸರ್ಕಾರದ ಯೋಜನೆಗಳು ಗಿರಿಜನರಿಗೆ ಸಮರ್ಪಕವಾಗಿ ಸದ್ಬಳಕೆ ಆಗುವ ರೀತಿಯಲ್ಲಿ ಕ್ರಮ ಕೈಗೊಂಡಾಗ ಮಾತ್ರ ಕೋಟ್ಯಂತರ ರೂ. ವೆಚ್ಚದಲ್ಲಿ ಖರ್ಚು ಮಾಡಿದ್ದಕ್ಕೂ ಸಾರ್ಥಕತೆ ಸಿಗಲಿದೆ.

ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಹಾಡಿಗಳು, ಪುನರ್ವಸತಿ ಕೇಂದ್ರಗಳಿದ್ದು ಗಿರಿ ಜನರಿಗೆ ಮತ್ತು ಅವರ ಕುಟುಂಬಸ್ಥರಿಗೆ ಸಿಗಬೇಕಾಗಿದ್ದ ಶಿಕ್ಷಣ ಸೌಲಭ್ಯ, ಇತರೆ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಐದು ವರ್ಷಗಳ ಹಿಂದೆ ಸೊಳ್ಳೆಪುರದಲ್ಲಿ ನಿರ್ಮಾಣಗೊಂಡ ಗಿರಿಜನರ ಸಮುದಾಯ ಭವನ ಪಾಳು ಬಿದ್ದಿದೆ. ಇದಕ್ಕೆ ಇಲ್ಲಿನ ಅಽಕಾರಿಗಳ ಬೇಜವಾಬ್ದಾರಿ ಕಾರಣವಾಗಿದೆ.

ರಾಜೇಶ್ವರಿ ಶ್ರೀನಿವಾಸ್, ಅಧ್ಯಕ್ಷರು, ಚಕ್ಕೋಡನಹಳ್ಳಿ ಗ್ರಾಪಂ

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

2 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

2 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

2 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

2 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

2 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

2 hours ago