Andolana originals

ಪಾಳು ಬಿದ್ದ ಗಿರಿಜನರ ಸಮುದಾಯ ಭವನ

ಅಧಿಕಾರಿಗಳು,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ 

ಮಂಜು ಕೋಟೆ

ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ ಗಿರಿಜನರ ಸಮುದಾಯ ಭವನ ಆದಿವಾಸಿ ಜನರ ಅನುಕೂಲಕ್ಕೆ ಸದುಪಯೋಗವಾಗದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು ವರ್ಷಗಳಿಂದ ಪಾಳುಬಿದ್ದಿದೆ.

ಕಾಡಿನಲ್ಲಿದ್ದ ಅನೇಕ ಗಿರಿಜನರನ್ನು ನಾಡಿಗೆ ಕರೆತಂದು ಅವರನ್ನು ಮುಖ್ಯ ವಾಹಿನಿಗೆ ತರಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ರೂ. ಖರ್ಚು ಮಾಡುತ್ತಿ ದ್ದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಮೂಲ ಸೌಕರ್ಯದಿಂದ ವಂಚಿತವಾಗುತ್ತಿರುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ತಾಲ್ಲೂಕಿನ ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ೨೦೧೯ನೇ ಸಾಲಿನಲ್ಲಿ ಟಿಎಸ್‌ಪಿ ಯೋಜನೆ ಮೂಲಕ ೧೨ ಲಕ್ಷ ರೂ. ವೆಚ್ಚದಲ್ಲಿ ಗಿರಿಜನರ ಸಮುದಾಯ ಭವನವನ್ನು ಜಿಪಂ ಮೂಲಕ ಗುತ್ತಿಗೆದಾರ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.

ಈ ಪುನರ್ವಸತಿ ಕೇಂದ್ರದಲ್ಲಿ ೫೦ಕ್ಕೂ ಹೆಚ್ಚು ಗಿರಿಜನ ಕುಟುಂಬಗಳು ವಾಸ ಮಾಡುತ್ತಿದ್ದು ಈ ಭಾಗದ ಜನರಿಗೆ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸಲು ಈ ಭವನವನ್ನು ಐದು ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದೆ. ಆದರೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭವನವನ್ನು ಉದ್ಘಾಟಿಸಿ ಗಿರಿಜನರ ಅನುಕೂಲಕ್ಕೆ ನೀಡದೆ ನಿರ್ಲಕ್ಷಿಸಿರುವುದರಿಂದ ಭವನ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ.

ಕಟ್ಟಡದ ಸುತ್ತಲೂ ಗಿಡ ಗಂಟಿಗಳು ಬೆಳೆದು ಹಾವು, ಚೇಳುಗಳ ವಾಸ ಸ್ಥಾನವಾಗಿದೆ. ಪ್ರತಿಯೊಂದು ಹಾಡಿಯಲ್ಲೂ ಇಂತಹ ಅನೇಕ ಯೋಜನೆಗಳಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನ ಮುಂತಾದವುಗಳು ಇದೇ ರೀತಿ ಪಾಳುಬಿದ್ದಿವೆ. ಇನ್ನಾದರೂ ಸಂಬಂಧ ಪಟ್ಟ ಜಿಲ್ಲಾ ಮಟ್ಟದ ಅಽಕಾರಿಗಳು ಇತ್ತ ಗಮನಹರಿಸಿ ಸರ್ಕಾರದ ಯೋಜನೆಗಳು ಗಿರಿಜನರಿಗೆ ಸಮರ್ಪಕವಾಗಿ ಸದ್ಬಳಕೆ ಆಗುವ ರೀತಿಯಲ್ಲಿ ಕ್ರಮ ಕೈಗೊಂಡಾಗ ಮಾತ್ರ ಕೋಟ್ಯಂತರ ರೂ. ವೆಚ್ಚದಲ್ಲಿ ಖರ್ಚು ಮಾಡಿದ್ದಕ್ಕೂ ಸಾರ್ಥಕತೆ ಸಿಗಲಿದೆ.

ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಹಾಡಿಗಳು, ಪುನರ್ವಸತಿ ಕೇಂದ್ರಗಳಿದ್ದು ಗಿರಿ ಜನರಿಗೆ ಮತ್ತು ಅವರ ಕುಟುಂಬಸ್ಥರಿಗೆ ಸಿಗಬೇಕಾಗಿದ್ದ ಶಿಕ್ಷಣ ಸೌಲಭ್ಯ, ಇತರೆ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಐದು ವರ್ಷಗಳ ಹಿಂದೆ ಸೊಳ್ಳೆಪುರದಲ್ಲಿ ನಿರ್ಮಾಣಗೊಂಡ ಗಿರಿಜನರ ಸಮುದಾಯ ಭವನ ಪಾಳು ಬಿದ್ದಿದೆ. ಇದಕ್ಕೆ ಇಲ್ಲಿನ ಅಽಕಾರಿಗಳ ಬೇಜವಾಬ್ದಾರಿ ಕಾರಣವಾಗಿದೆ.

ರಾಜೇಶ್ವರಿ ಶ್ರೀನಿವಾಸ್, ಅಧ್ಯಕ್ಷರು, ಚಕ್ಕೋಡನಹಳ್ಳಿ ಗ್ರಾಪಂ

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

10 mins ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

6 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

6 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

6 hours ago