Andolana originals

ಪಾಳು ಬಿದ್ದ ಗಿರಿಜನರ ಸಮುದಾಯ ಭವನ

ಅಧಿಕಾರಿಗಳು,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ 

ಮಂಜು ಕೋಟೆ

ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ ಗಿರಿಜನರ ಸಮುದಾಯ ಭವನ ಆದಿವಾಸಿ ಜನರ ಅನುಕೂಲಕ್ಕೆ ಸದುಪಯೋಗವಾಗದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು ವರ್ಷಗಳಿಂದ ಪಾಳುಬಿದ್ದಿದೆ.

ಕಾಡಿನಲ್ಲಿದ್ದ ಅನೇಕ ಗಿರಿಜನರನ್ನು ನಾಡಿಗೆ ಕರೆತಂದು ಅವರನ್ನು ಮುಖ್ಯ ವಾಹಿನಿಗೆ ತರಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ರೂ. ಖರ್ಚು ಮಾಡುತ್ತಿ ದ್ದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಮೂಲ ಸೌಕರ್ಯದಿಂದ ವಂಚಿತವಾಗುತ್ತಿರುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ತಾಲ್ಲೂಕಿನ ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ೨೦೧೯ನೇ ಸಾಲಿನಲ್ಲಿ ಟಿಎಸ್‌ಪಿ ಯೋಜನೆ ಮೂಲಕ ೧೨ ಲಕ್ಷ ರೂ. ವೆಚ್ಚದಲ್ಲಿ ಗಿರಿಜನರ ಸಮುದಾಯ ಭವನವನ್ನು ಜಿಪಂ ಮೂಲಕ ಗುತ್ತಿಗೆದಾರ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.

ಈ ಪುನರ್ವಸತಿ ಕೇಂದ್ರದಲ್ಲಿ ೫೦ಕ್ಕೂ ಹೆಚ್ಚು ಗಿರಿಜನ ಕುಟುಂಬಗಳು ವಾಸ ಮಾಡುತ್ತಿದ್ದು ಈ ಭಾಗದ ಜನರಿಗೆ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸಲು ಈ ಭವನವನ್ನು ಐದು ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದೆ. ಆದರೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭವನವನ್ನು ಉದ್ಘಾಟಿಸಿ ಗಿರಿಜನರ ಅನುಕೂಲಕ್ಕೆ ನೀಡದೆ ನಿರ್ಲಕ್ಷಿಸಿರುವುದರಿಂದ ಭವನ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ.

ಕಟ್ಟಡದ ಸುತ್ತಲೂ ಗಿಡ ಗಂಟಿಗಳು ಬೆಳೆದು ಹಾವು, ಚೇಳುಗಳ ವಾಸ ಸ್ಥಾನವಾಗಿದೆ. ಪ್ರತಿಯೊಂದು ಹಾಡಿಯಲ್ಲೂ ಇಂತಹ ಅನೇಕ ಯೋಜನೆಗಳಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನ ಮುಂತಾದವುಗಳು ಇದೇ ರೀತಿ ಪಾಳುಬಿದ್ದಿವೆ. ಇನ್ನಾದರೂ ಸಂಬಂಧ ಪಟ್ಟ ಜಿಲ್ಲಾ ಮಟ್ಟದ ಅಽಕಾರಿಗಳು ಇತ್ತ ಗಮನಹರಿಸಿ ಸರ್ಕಾರದ ಯೋಜನೆಗಳು ಗಿರಿಜನರಿಗೆ ಸಮರ್ಪಕವಾಗಿ ಸದ್ಬಳಕೆ ಆಗುವ ರೀತಿಯಲ್ಲಿ ಕ್ರಮ ಕೈಗೊಂಡಾಗ ಮಾತ್ರ ಕೋಟ್ಯಂತರ ರೂ. ವೆಚ್ಚದಲ್ಲಿ ಖರ್ಚು ಮಾಡಿದ್ದಕ್ಕೂ ಸಾರ್ಥಕತೆ ಸಿಗಲಿದೆ.

ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಹಾಡಿಗಳು, ಪುನರ್ವಸತಿ ಕೇಂದ್ರಗಳಿದ್ದು ಗಿರಿ ಜನರಿಗೆ ಮತ್ತು ಅವರ ಕುಟುಂಬಸ್ಥರಿಗೆ ಸಿಗಬೇಕಾಗಿದ್ದ ಶಿಕ್ಷಣ ಸೌಲಭ್ಯ, ಇತರೆ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಐದು ವರ್ಷಗಳ ಹಿಂದೆ ಸೊಳ್ಳೆಪುರದಲ್ಲಿ ನಿರ್ಮಾಣಗೊಂಡ ಗಿರಿಜನರ ಸಮುದಾಯ ಭವನ ಪಾಳು ಬಿದ್ದಿದೆ. ಇದಕ್ಕೆ ಇಲ್ಲಿನ ಅಽಕಾರಿಗಳ ಬೇಜವಾಬ್ದಾರಿ ಕಾರಣವಾಗಿದೆ.

ರಾಜೇಶ್ವರಿ ಶ್ರೀನಿವಾಸ್, ಅಧ್ಯಕ್ಷರು, ಚಕ್ಕೋಡನಹಳ್ಳಿ ಗ್ರಾಪಂ

ಆಂದೋಲನ ಡೆಸ್ಕ್

Recent Posts

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

1 min ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

3 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

3 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

3 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

6 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

6 hours ago