ಗೋಡೌನ್ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ
ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ ಕುರ್ಚಿಗಳ ಬಗ್ಗೆ ವಿಶೇಷ ವ್ಯಾಮೋಹ. ಈ ಸಲುವಾಗಿಯೇ ಫೋಟೋಕ್ಲಿಕ್ಕಿಸಿಕೊಳ್ಳುವುದನ್ನು ಮಾತ್ರ ಅವರು ಮರೆಯುವುದಿಲ್ಲ.
ಮೈಸೂರು ಮಹಾರಾಜರು ದರ್ಬಾರ್ ನಡೆಸುವ ವೇಳೆ ಗಣ್ಯರು ಆಸೀನರಾಗುವ ಸಲುವಾಗಿ ಬಳಸುತ್ತಿದ್ದ ದರ್ಬಾರ್ ಕುರ್ಚಿಗಳದ್ದೇ ಒಂದು ಇತಿಹಾಸ, ರಾಜರ ದರ್ಬಾರು ನಡೆಯುತ್ತಿದ್ದ ವೇಳೆ ಜನರು ರಾಜರನ್ನು ಆಗಿಂದಾಗ್ಗೆ ಕಾಣಬಹುದಾಗಿತ್ತು. ಈ ಕುರ್ಚಿಗಳು ತುಂಬಾ ಐತಿಹಾಸಿಕ ಮತ್ತು ಶ್ರೀಮಂತಿಕೆಯ ಪ್ರತೀಕವಾಗಿವೆ. ಈ ಕುರ್ಚಿಗಳನ್ನು ನವಾಬ್ ಖಾಸರತ್ತುಲ್ಲಾ ಖಾನ್ ಎಂಬ ಸ್ವಾತಂತ್ರ್ಯ ಹೋರಾಟ ಗಾರರ ಮನೆತನದವರು ತಯಾರಿಸಿದ್ದಾರೆ. ಅವುಗಳ ಮೇಲೆ ಅಲಂಕಾರಿಕ ಕುಸುರಿ ಕೆಲಸ, ಶಿಲಕಲೆಯನು ಕಾಣಬಹುದು.
ನೂರಾರು ವರ್ಷಗಳ ಹಿನ್ನೆಲೆಯುಳ್ಳ ಈ ದರ್ಬಾರ್ ಕುರ್ಚಿಗಳನ್ನು ಗೋಡೌನ್ನಲ್ಲಿ ಇರಿಸಲಾಗಿತ್ತು. ಇವು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ಅವರ ಕಣ್ಣಿಗೆ ಬಿದ್ದ ಮೇಲೆ ಈ ಕುರ್ಚಿಗಳಿಗೆ ಮತ್ತೆ ಗತ ವೈಭವ ಮರುಕಳಿಸಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ, ಮಹಾರಾಜರು ದರ್ಬಾರು ನಡೆಸುವಾಗ ಈ ಕುರ್ಚಿಗಳನ್ನು ಬಳಸಲಾಗುತ್ತಿತ್ತು. ದಿವಾನರುಗಳು ಸೇರಿದಂತೆ ಅರಮನೆಗೆ ಸೇರಿದ ಗಣ್ಯರು ಈ ಕುರ್ಚಿಯಲ್ಲಿ ಆಸೀನರಾಗುತ್ತಿದ್ದರು. ಸಿ.ರಂಗಚಾರ್ಲು, ದಿವಾನ್ ಪೂರ್ಣಯ್ಯ, ಸರ್ ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಹೀಗೆ ಅನೇಕರು ಈ ಕುರ್ಚಿಯಲ್ಲಿ ಕುಳಿತಿದ್ದಿರಬಹುದು, ಬಲ್ಲವರು ಯಾರು? ಆದ್ದರಿಂದ ಈ ಕುರ್ಚಿಗಳ ಮಹತ್ವ ಅರಿತು, ಗೋಡೌನ್ನಿಂದ ಅದನ್ನು ಅರಮನೆ ಮಂಡಳಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಅಂದಾಜು 200ಕ್ಕೂ ಹೆಚ್ಚು ಕುರ್ಚಿಗಳಿದ್ದು, ಈ ಪೈಕಿ ಅರ್ಧದಷ್ಟು ಕುರ್ಚಿಗಳು ದುರಸ್ತಿಯಲ್ಲಿವೆ. ಇವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಿದ್ದೇವೆ. ಈ ದರ್ಬಾರ್ ಕುರ್ಚಿಗಳನ್ನು ದಸರಾ ಅವಧಿಯಲ್ಲಿ ವಿಶೇಷವಾಗಿ ಅರಮನೆಯ ಖಾಸಗಿ ದರ್ಬಾರಿನ ವೇಳೆಯಲ್ಲಿ ಬಳಸಲಾಗುತ್ತದೆ. ಈ ಕುರ್ಚಿಗಳು, ಮೈಸೂರಿನ ರಾಜಕುಟುಂಬದ ವೈಭವ ಮತ್ತು ಪ್ರಖ್ಯಾತಿಯ ಸಂಕೇತವಾಗಿ ಇಂದು ಕೂಡ ಉಳಿದುಕೊಂಡಿವೆ.
ಟಿ.ಎಸ್. ಸುಬ್ರಹ್ಮಣ್ಯ,
ಅರಮನೆ ಮಂಡಳಿ ಉಪ ನಿರ್ದೇಶಕ
ಕುರ್ಚಿ ನೋಡಿ ಪುಳಕಿತಗೊಂಡಿದ್ದ ಅಮೆರಿಕಾ ಕೌನ್ಸುಲೇಟ್ ಜನರಲ್
ಮೈಸೂರು: ಅರಮನೆಗೆ ಭೇಟಿ ನೀಡಿದ್ದ ಅಮೆರಿಕ ಕೌನ್ಸುಲೇಟ್ ಜನರಲ್, ದರ್ಬಾರ್ ಕುರ್ಚಿಗಳನ್ನು ಕಂಡು ಪುಳಕಿತಗೊಂಡಿದ್ದು ಮಾತ್ರವಲ್ಲದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.
ಈ ಕುರ್ಚಿಗಳ ವಿನ್ಯಾಸದ ಬಗೆಗೂ ವಿದೇಶಿಗರಿಗೆ ಅಪಾರ ಮೆಚ್ಚುಗೆ. ಕಾರಣ ಈ ಕುರ್ಚಿಯ ಮೇಲೆ ದೀರ್ಘಕಾಲ ಕುಳಿತರೂ ಬೆನ್ನು ನೋವಿನ ಸಮಸ್ಯೆ ಕಾಡದು ಎಂಬುದು ಅವರ ಭಾವನೆಯಾಗಿದೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…
ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…
ವಿಶ್ವವಿಖ್ಯಾತ ಕೆ ಆರ್ಎಸ್ನ ಬೃಂದಾವನ ಗಾರ್ಡನ್ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…