Andolana originals

ಗತ ವೈಭವ ಸಾರುವ ದರ್ಬಾರ್ ಕುರ್ಚಿ

ಗೋಡೌನ್‌ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ

ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ ಕುರ್ಚಿಗಳ ಬಗ್ಗೆ ವಿಶೇಷ ವ್ಯಾಮೋಹ. ಈ ಸಲುವಾಗಿಯೇ ಫೋಟೋಕ್ಲಿಕ್ಕಿಸಿಕೊಳ್ಳುವುದನ್ನು ಮಾತ್ರ ಅವರು ಮರೆಯುವುದಿಲ್ಲ.

ಮೈಸೂರು ಮಹಾರಾಜರು ದರ್ಬಾರ್ ನಡೆಸುವ ವೇಳೆ ಗಣ್ಯರು ಆಸೀನರಾಗುವ ಸಲುವಾಗಿ ಬಳಸುತ್ತಿದ್ದ ದರ್ಬಾರ್ ಕುರ್ಚಿಗಳದ್ದೇ ಒಂದು ಇತಿಹಾಸ, ರಾಜರ ದರ್ಬಾರು ನಡೆಯುತ್ತಿದ್ದ ವೇಳೆ ಜನರು ರಾಜರನ್ನು ಆಗಿಂದಾಗ್ಗೆ ಕಾಣಬಹುದಾಗಿತ್ತು. ಈ ಕುರ್ಚಿಗಳು ತುಂಬಾ ಐತಿಹಾಸಿಕ ಮತ್ತು ಶ್ರೀಮಂತಿಕೆಯ ಪ್ರತೀಕವಾಗಿವೆ. ಈ ಕುರ್ಚಿಗಳನ್ನು ನವಾಬ್ ಖಾಸರತ್ತುಲ್ಲಾ ಖಾನ್ ಎಂಬ ಸ್ವಾತಂತ್ರ್ಯ ಹೋರಾಟ ಗಾರರ ಮನೆತನದವರು ತಯಾರಿಸಿದ್ದಾರೆ. ಅವುಗಳ ಮೇಲೆ ಅಲಂಕಾರಿಕ ಕುಸುರಿ ಕೆಲಸ, ಶಿಲಕಲೆಯನು ಕಾಣಬಹುದು.

ನೂರಾರು ವರ್ಷಗಳ ಹಿನ್ನೆಲೆಯುಳ್ಳ ಈ ದರ್ಬಾರ್ ಕುರ್ಚಿಗಳನ್ನು ಗೋಡೌನ್‌ನಲ್ಲಿ ಇರಿಸಲಾಗಿತ್ತು. ಇವು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ಅವರ ಕಣ್ಣಿಗೆ ಬಿದ್ದ ಮೇಲೆ ಈ ಕುರ್ಚಿಗಳಿಗೆ ಮತ್ತೆ ಗತ ವೈಭವ ಮರುಕಳಿಸಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ, ಮಹಾರಾಜರು ದರ್ಬಾರು ನಡೆಸುವಾಗ ಈ ಕುರ್ಚಿಗಳನ್ನು ಬಳಸಲಾಗುತ್ತಿತ್ತು. ದಿವಾನರುಗಳು ಸೇರಿದಂತೆ ಅರಮನೆಗೆ ಸೇರಿದ ಗಣ್ಯರು ಈ ಕುರ್ಚಿಯಲ್ಲಿ ಆಸೀನರಾಗುತ್ತಿದ್ದರು. ಸಿ.ರಂಗಚಾರ್ಲು, ದಿವಾನ್ ಪೂರ್ಣಯ್ಯ, ಸರ್ ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಹೀಗೆ ಅನೇಕರು ಈ ಕುರ್ಚಿಯಲ್ಲಿ ಕುಳಿತಿದ್ದಿರಬಹುದು, ಬಲ್ಲವರು ಯಾರು? ಆದ್ದರಿಂದ ಈ ಕುರ್ಚಿಗಳ ಮಹತ್ವ ಅರಿತು, ಗೋಡೌನ್‌ನಿಂದ ಅದನ್ನು ಅರಮನೆ ಮಂಡಳಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಅಂದಾಜು 200ಕ್ಕೂ ಹೆಚ್ಚು ಕುರ್ಚಿಗಳಿದ್ದು, ಈ ಪೈಕಿ ಅರ್ಧದಷ್ಟು ಕುರ್ಚಿಗಳು ದುರಸ್ತಿಯಲ್ಲಿವೆ. ಇವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಿದ್ದೇವೆ. ಈ ದರ್ಬಾರ್ ಕುರ್ಚಿಗಳನ್ನು ದಸರಾ ಅವಧಿಯಲ್ಲಿ ವಿಶೇಷವಾಗಿ ಅರಮನೆಯ ಖಾಸಗಿ ದರ್ಬಾರಿನ ವೇಳೆಯಲ್ಲಿ ಬಳಸಲಾಗುತ್ತದೆ. ಈ ಕುರ್ಚಿಗಳು, ಮೈಸೂರಿನ ರಾಜಕುಟುಂಬದ ವೈಭವ ಮತ್ತು ಪ್ರಖ್ಯಾತಿಯ ಸಂಕೇತವಾಗಿ ಇಂದು ಕೂಡ ಉಳಿದುಕೊಂಡಿವೆ.
ಟಿ.ಎಸ್. ಸುಬ್ರಹ್ಮಣ್ಯ,
ಅರಮನೆ ಮಂಡಳಿ ಉಪ ನಿರ್ದೇಶಕ

ಕುರ್ಚಿ ನೋಡಿ ಪುಳಕಿತಗೊಂಡಿದ್ದ ಅಮೆರಿಕಾ ಕೌನ್ಸುಲೇಟ್ ಜನರಲ್

ಮೈಸೂರು: ಅರಮನೆಗೆ ಭೇಟಿ ನೀಡಿದ್ದ ಅಮೆರಿಕ ಕೌನ್ಸುಲೇಟ್ ಜನರಲ್, ದರ್ಬಾರ್ ಕುರ್ಚಿಗಳನ್ನು ಕಂಡು ಪುಳಕಿತಗೊಂಡಿದ್ದು ಮಾತ್ರವಲ್ಲದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.

ಈ ಕುರ್ಚಿಗಳ ವಿನ್ಯಾಸದ ಬಗೆಗೂ ವಿದೇಶಿಗರಿಗೆ ಅಪಾರ ಮೆಚ್ಚುಗೆ. ಕಾರಣ ಈ ಕುರ್ಚಿಯ ಮೇಲೆ ದೀರ್ಘಕಾಲ ಕುಳಿತರೂ ಬೆನ್ನು ನೋವಿನ ಸಮಸ್ಯೆ ಕಾಡದು ಎಂಬುದು ಅವರ ಭಾವನೆಯಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

10 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

10 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

10 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

11 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

11 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

11 hours ago