Andolana originals

ಗತ ವೈಭವ ಸಾರುವ ದರ್ಬಾರ್ ಕುರ್ಚಿ

ಗೋಡೌನ್‌ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ

ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ ಕುರ್ಚಿಗಳ ಬಗ್ಗೆ ವಿಶೇಷ ವ್ಯಾಮೋಹ. ಈ ಸಲುವಾಗಿಯೇ ಫೋಟೋಕ್ಲಿಕ್ಕಿಸಿಕೊಳ್ಳುವುದನ್ನು ಮಾತ್ರ ಅವರು ಮರೆಯುವುದಿಲ್ಲ.

ಮೈಸೂರು ಮಹಾರಾಜರು ದರ್ಬಾರ್ ನಡೆಸುವ ವೇಳೆ ಗಣ್ಯರು ಆಸೀನರಾಗುವ ಸಲುವಾಗಿ ಬಳಸುತ್ತಿದ್ದ ದರ್ಬಾರ್ ಕುರ್ಚಿಗಳದ್ದೇ ಒಂದು ಇತಿಹಾಸ, ರಾಜರ ದರ್ಬಾರು ನಡೆಯುತ್ತಿದ್ದ ವೇಳೆ ಜನರು ರಾಜರನ್ನು ಆಗಿಂದಾಗ್ಗೆ ಕಾಣಬಹುದಾಗಿತ್ತು. ಈ ಕುರ್ಚಿಗಳು ತುಂಬಾ ಐತಿಹಾಸಿಕ ಮತ್ತು ಶ್ರೀಮಂತಿಕೆಯ ಪ್ರತೀಕವಾಗಿವೆ. ಈ ಕುರ್ಚಿಗಳನ್ನು ನವಾಬ್ ಖಾಸರತ್ತುಲ್ಲಾ ಖಾನ್ ಎಂಬ ಸ್ವಾತಂತ್ರ್ಯ ಹೋರಾಟ ಗಾರರ ಮನೆತನದವರು ತಯಾರಿಸಿದ್ದಾರೆ. ಅವುಗಳ ಮೇಲೆ ಅಲಂಕಾರಿಕ ಕುಸುರಿ ಕೆಲಸ, ಶಿಲಕಲೆಯನು ಕಾಣಬಹುದು.

ನೂರಾರು ವರ್ಷಗಳ ಹಿನ್ನೆಲೆಯುಳ್ಳ ಈ ದರ್ಬಾರ್ ಕುರ್ಚಿಗಳನ್ನು ಗೋಡೌನ್‌ನಲ್ಲಿ ಇರಿಸಲಾಗಿತ್ತು. ಇವು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ಅವರ ಕಣ್ಣಿಗೆ ಬಿದ್ದ ಮೇಲೆ ಈ ಕುರ್ಚಿಗಳಿಗೆ ಮತ್ತೆ ಗತ ವೈಭವ ಮರುಕಳಿಸಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ, ಮಹಾರಾಜರು ದರ್ಬಾರು ನಡೆಸುವಾಗ ಈ ಕುರ್ಚಿಗಳನ್ನು ಬಳಸಲಾಗುತ್ತಿತ್ತು. ದಿವಾನರುಗಳು ಸೇರಿದಂತೆ ಅರಮನೆಗೆ ಸೇರಿದ ಗಣ್ಯರು ಈ ಕುರ್ಚಿಯಲ್ಲಿ ಆಸೀನರಾಗುತ್ತಿದ್ದರು. ಸಿ.ರಂಗಚಾರ್ಲು, ದಿವಾನ್ ಪೂರ್ಣಯ್ಯ, ಸರ್ ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಹೀಗೆ ಅನೇಕರು ಈ ಕುರ್ಚಿಯಲ್ಲಿ ಕುಳಿತಿದ್ದಿರಬಹುದು, ಬಲ್ಲವರು ಯಾರು? ಆದ್ದರಿಂದ ಈ ಕುರ್ಚಿಗಳ ಮಹತ್ವ ಅರಿತು, ಗೋಡೌನ್‌ನಿಂದ ಅದನ್ನು ಅರಮನೆ ಮಂಡಳಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಅಂದಾಜು 200ಕ್ಕೂ ಹೆಚ್ಚು ಕುರ್ಚಿಗಳಿದ್ದು, ಈ ಪೈಕಿ ಅರ್ಧದಷ್ಟು ಕುರ್ಚಿಗಳು ದುರಸ್ತಿಯಲ್ಲಿವೆ. ಇವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಿದ್ದೇವೆ. ಈ ದರ್ಬಾರ್ ಕುರ್ಚಿಗಳನ್ನು ದಸರಾ ಅವಧಿಯಲ್ಲಿ ವಿಶೇಷವಾಗಿ ಅರಮನೆಯ ಖಾಸಗಿ ದರ್ಬಾರಿನ ವೇಳೆಯಲ್ಲಿ ಬಳಸಲಾಗುತ್ತದೆ. ಈ ಕುರ್ಚಿಗಳು, ಮೈಸೂರಿನ ರಾಜಕುಟುಂಬದ ವೈಭವ ಮತ್ತು ಪ್ರಖ್ಯಾತಿಯ ಸಂಕೇತವಾಗಿ ಇಂದು ಕೂಡ ಉಳಿದುಕೊಂಡಿವೆ.
ಟಿ.ಎಸ್. ಸುಬ್ರಹ್ಮಣ್ಯ,
ಅರಮನೆ ಮಂಡಳಿ ಉಪ ನಿರ್ದೇಶಕ

ಕುರ್ಚಿ ನೋಡಿ ಪುಳಕಿತಗೊಂಡಿದ್ದ ಅಮೆರಿಕಾ ಕೌನ್ಸುಲೇಟ್ ಜನರಲ್

ಮೈಸೂರು: ಅರಮನೆಗೆ ಭೇಟಿ ನೀಡಿದ್ದ ಅಮೆರಿಕ ಕೌನ್ಸುಲೇಟ್ ಜನರಲ್, ದರ್ಬಾರ್ ಕುರ್ಚಿಗಳನ್ನು ಕಂಡು ಪುಳಕಿತಗೊಂಡಿದ್ದು ಮಾತ್ರವಲ್ಲದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.

ಈ ಕುರ್ಚಿಗಳ ವಿನ್ಯಾಸದ ಬಗೆಗೂ ವಿದೇಶಿಗರಿಗೆ ಅಪಾರ ಮೆಚ್ಚುಗೆ. ಕಾರಣ ಈ ಕುರ್ಚಿಯ ಮೇಲೆ ದೀರ್ಘಕಾಲ ಕುಳಿತರೂ ಬೆನ್ನು ನೋವಿನ ಸಮಸ್ಯೆ ಕಾಡದು ಎಂಬುದು ಅವರ ಭಾವನೆಯಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…

17 mins ago

ಬೆಂಗಳೂರು ಏರ್‌ಪೋರ್ಟ್‌ ಹಾಗೂ ರಾಮನಗರದಲ್ಲಿ 3 ಕೋಟಿಗೂ ಅಧಿಕ ಡ್ರಗ್ಸ್‌ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು…

27 mins ago

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

30 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿ: ತಹಶೀಲ್ದಾರ್‌ ಚೈತ್ರಾ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…

1 hour ago

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

2 hours ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

2 hours ago