ಗೋಡೌನ್ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ
ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ ಕುರ್ಚಿಗಳ ಬಗ್ಗೆ ವಿಶೇಷ ವ್ಯಾಮೋಹ. ಈ ಸಲುವಾಗಿಯೇ ಫೋಟೋಕ್ಲಿಕ್ಕಿಸಿಕೊಳ್ಳುವುದನ್ನು ಮಾತ್ರ ಅವರು ಮರೆಯುವುದಿಲ್ಲ.
ಮೈಸೂರು ಮಹಾರಾಜರು ದರ್ಬಾರ್ ನಡೆಸುವ ವೇಳೆ ಗಣ್ಯರು ಆಸೀನರಾಗುವ ಸಲುವಾಗಿ ಬಳಸುತ್ತಿದ್ದ ದರ್ಬಾರ್ ಕುರ್ಚಿಗಳದ್ದೇ ಒಂದು ಇತಿಹಾಸ, ರಾಜರ ದರ್ಬಾರು ನಡೆಯುತ್ತಿದ್ದ ವೇಳೆ ಜನರು ರಾಜರನ್ನು ಆಗಿಂದಾಗ್ಗೆ ಕಾಣಬಹುದಾಗಿತ್ತು. ಈ ಕುರ್ಚಿಗಳು ತುಂಬಾ ಐತಿಹಾಸಿಕ ಮತ್ತು ಶ್ರೀಮಂತಿಕೆಯ ಪ್ರತೀಕವಾಗಿವೆ. ಈ ಕುರ್ಚಿಗಳನ್ನು ನವಾಬ್ ಖಾಸರತ್ತುಲ್ಲಾ ಖಾನ್ ಎಂಬ ಸ್ವಾತಂತ್ರ್ಯ ಹೋರಾಟ ಗಾರರ ಮನೆತನದವರು ತಯಾರಿಸಿದ್ದಾರೆ. ಅವುಗಳ ಮೇಲೆ ಅಲಂಕಾರಿಕ ಕುಸುರಿ ಕೆಲಸ, ಶಿಲಕಲೆಯನು ಕಾಣಬಹುದು.
ನೂರಾರು ವರ್ಷಗಳ ಹಿನ್ನೆಲೆಯುಳ್ಳ ಈ ದರ್ಬಾರ್ ಕುರ್ಚಿಗಳನ್ನು ಗೋಡೌನ್ನಲ್ಲಿ ಇರಿಸಲಾಗಿತ್ತು. ಇವು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ಅವರ ಕಣ್ಣಿಗೆ ಬಿದ್ದ ಮೇಲೆ ಈ ಕುರ್ಚಿಗಳಿಗೆ ಮತ್ತೆ ಗತ ವೈಭವ ಮರುಕಳಿಸಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ, ಮಹಾರಾಜರು ದರ್ಬಾರು ನಡೆಸುವಾಗ ಈ ಕುರ್ಚಿಗಳನ್ನು ಬಳಸಲಾಗುತ್ತಿತ್ತು. ದಿವಾನರುಗಳು ಸೇರಿದಂತೆ ಅರಮನೆಗೆ ಸೇರಿದ ಗಣ್ಯರು ಈ ಕುರ್ಚಿಯಲ್ಲಿ ಆಸೀನರಾಗುತ್ತಿದ್ದರು. ಸಿ.ರಂಗಚಾರ್ಲು, ದಿವಾನ್ ಪೂರ್ಣಯ್ಯ, ಸರ್ ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಹೀಗೆ ಅನೇಕರು ಈ ಕುರ್ಚಿಯಲ್ಲಿ ಕುಳಿತಿದ್ದಿರಬಹುದು, ಬಲ್ಲವರು ಯಾರು? ಆದ್ದರಿಂದ ಈ ಕುರ್ಚಿಗಳ ಮಹತ್ವ ಅರಿತು, ಗೋಡೌನ್ನಿಂದ ಅದನ್ನು ಅರಮನೆ ಮಂಡಳಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಅಂದಾಜು 200ಕ್ಕೂ ಹೆಚ್ಚು ಕುರ್ಚಿಗಳಿದ್ದು, ಈ ಪೈಕಿ ಅರ್ಧದಷ್ಟು ಕುರ್ಚಿಗಳು ದುರಸ್ತಿಯಲ್ಲಿವೆ. ಇವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಿದ್ದೇವೆ. ಈ ದರ್ಬಾರ್ ಕುರ್ಚಿಗಳನ್ನು ದಸರಾ ಅವಧಿಯಲ್ಲಿ ವಿಶೇಷವಾಗಿ ಅರಮನೆಯ ಖಾಸಗಿ ದರ್ಬಾರಿನ ವೇಳೆಯಲ್ಲಿ ಬಳಸಲಾಗುತ್ತದೆ. ಈ ಕುರ್ಚಿಗಳು, ಮೈಸೂರಿನ ರಾಜಕುಟುಂಬದ ವೈಭವ ಮತ್ತು ಪ್ರಖ್ಯಾತಿಯ ಸಂಕೇತವಾಗಿ ಇಂದು ಕೂಡ ಉಳಿದುಕೊಂಡಿವೆ.
ಟಿ.ಎಸ್. ಸುಬ್ರಹ್ಮಣ್ಯ,
ಅರಮನೆ ಮಂಡಳಿ ಉಪ ನಿರ್ದೇಶಕ
ಕುರ್ಚಿ ನೋಡಿ ಪುಳಕಿತಗೊಂಡಿದ್ದ ಅಮೆರಿಕಾ ಕೌನ್ಸುಲೇಟ್ ಜನರಲ್
ಮೈಸೂರು: ಅರಮನೆಗೆ ಭೇಟಿ ನೀಡಿದ್ದ ಅಮೆರಿಕ ಕೌನ್ಸುಲೇಟ್ ಜನರಲ್, ದರ್ಬಾರ್ ಕುರ್ಚಿಗಳನ್ನು ಕಂಡು ಪುಳಕಿತಗೊಂಡಿದ್ದು ಮಾತ್ರವಲ್ಲದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.
ಈ ಕುರ್ಚಿಗಳ ವಿನ್ಯಾಸದ ಬಗೆಗೂ ವಿದೇಶಿಗರಿಗೆ ಅಪಾರ ಮೆಚ್ಚುಗೆ. ಕಾರಣ ಈ ಕುರ್ಚಿಯ ಮೇಲೆ ದೀರ್ಘಕಾಲ ಕುಳಿತರೂ ಬೆನ್ನು ನೋವಿನ ಸಮಸ್ಯೆ ಕಾಡದು ಎಂಬುದು ಅವರ ಭಾವನೆಯಾಗಿದೆ ಎಂದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…