Andolana originals

ಗತ ವೈಭವ ಸಾರುವ ದರ್ಬಾರ್ ಕುರ್ಚಿ

ಗೋಡೌನ್‌ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ

ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ ಕುರ್ಚಿಗಳ ಬಗ್ಗೆ ವಿಶೇಷ ವ್ಯಾಮೋಹ. ಈ ಸಲುವಾಗಿಯೇ ಫೋಟೋಕ್ಲಿಕ್ಕಿಸಿಕೊಳ್ಳುವುದನ್ನು ಮಾತ್ರ ಅವರು ಮರೆಯುವುದಿಲ್ಲ.

ಮೈಸೂರು ಮಹಾರಾಜರು ದರ್ಬಾರ್ ನಡೆಸುವ ವೇಳೆ ಗಣ್ಯರು ಆಸೀನರಾಗುವ ಸಲುವಾಗಿ ಬಳಸುತ್ತಿದ್ದ ದರ್ಬಾರ್ ಕುರ್ಚಿಗಳದ್ದೇ ಒಂದು ಇತಿಹಾಸ, ರಾಜರ ದರ್ಬಾರು ನಡೆಯುತ್ತಿದ್ದ ವೇಳೆ ಜನರು ರಾಜರನ್ನು ಆಗಿಂದಾಗ್ಗೆ ಕಾಣಬಹುದಾಗಿತ್ತು. ಈ ಕುರ್ಚಿಗಳು ತುಂಬಾ ಐತಿಹಾಸಿಕ ಮತ್ತು ಶ್ರೀಮಂತಿಕೆಯ ಪ್ರತೀಕವಾಗಿವೆ. ಈ ಕುರ್ಚಿಗಳನ್ನು ನವಾಬ್ ಖಾಸರತ್ತುಲ್ಲಾ ಖಾನ್ ಎಂಬ ಸ್ವಾತಂತ್ರ್ಯ ಹೋರಾಟ ಗಾರರ ಮನೆತನದವರು ತಯಾರಿಸಿದ್ದಾರೆ. ಅವುಗಳ ಮೇಲೆ ಅಲಂಕಾರಿಕ ಕುಸುರಿ ಕೆಲಸ, ಶಿಲಕಲೆಯನು ಕಾಣಬಹುದು.

ನೂರಾರು ವರ್ಷಗಳ ಹಿನ್ನೆಲೆಯುಳ್ಳ ಈ ದರ್ಬಾರ್ ಕುರ್ಚಿಗಳನ್ನು ಗೋಡೌನ್‌ನಲ್ಲಿ ಇರಿಸಲಾಗಿತ್ತು. ಇವು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ಅವರ ಕಣ್ಣಿಗೆ ಬಿದ್ದ ಮೇಲೆ ಈ ಕುರ್ಚಿಗಳಿಗೆ ಮತ್ತೆ ಗತ ವೈಭವ ಮರುಕಳಿಸಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ, ಮಹಾರಾಜರು ದರ್ಬಾರು ನಡೆಸುವಾಗ ಈ ಕುರ್ಚಿಗಳನ್ನು ಬಳಸಲಾಗುತ್ತಿತ್ತು. ದಿವಾನರುಗಳು ಸೇರಿದಂತೆ ಅರಮನೆಗೆ ಸೇರಿದ ಗಣ್ಯರು ಈ ಕುರ್ಚಿಯಲ್ಲಿ ಆಸೀನರಾಗುತ್ತಿದ್ದರು. ಸಿ.ರಂಗಚಾರ್ಲು, ದಿವಾನ್ ಪೂರ್ಣಯ್ಯ, ಸರ್ ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಹೀಗೆ ಅನೇಕರು ಈ ಕುರ್ಚಿಯಲ್ಲಿ ಕುಳಿತಿದ್ದಿರಬಹುದು, ಬಲ್ಲವರು ಯಾರು? ಆದ್ದರಿಂದ ಈ ಕುರ್ಚಿಗಳ ಮಹತ್ವ ಅರಿತು, ಗೋಡೌನ್‌ನಿಂದ ಅದನ್ನು ಅರಮನೆ ಮಂಡಳಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಅಂದಾಜು 200ಕ್ಕೂ ಹೆಚ್ಚು ಕುರ್ಚಿಗಳಿದ್ದು, ಈ ಪೈಕಿ ಅರ್ಧದಷ್ಟು ಕುರ್ಚಿಗಳು ದುರಸ್ತಿಯಲ್ಲಿವೆ. ಇವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಿದ್ದೇವೆ. ಈ ದರ್ಬಾರ್ ಕುರ್ಚಿಗಳನ್ನು ದಸರಾ ಅವಧಿಯಲ್ಲಿ ವಿಶೇಷವಾಗಿ ಅರಮನೆಯ ಖಾಸಗಿ ದರ್ಬಾರಿನ ವೇಳೆಯಲ್ಲಿ ಬಳಸಲಾಗುತ್ತದೆ. ಈ ಕುರ್ಚಿಗಳು, ಮೈಸೂರಿನ ರಾಜಕುಟುಂಬದ ವೈಭವ ಮತ್ತು ಪ್ರಖ್ಯಾತಿಯ ಸಂಕೇತವಾಗಿ ಇಂದು ಕೂಡ ಉಳಿದುಕೊಂಡಿವೆ.
ಟಿ.ಎಸ್. ಸುಬ್ರಹ್ಮಣ್ಯ,
ಅರಮನೆ ಮಂಡಳಿ ಉಪ ನಿರ್ದೇಶಕ

ಕುರ್ಚಿ ನೋಡಿ ಪುಳಕಿತಗೊಂಡಿದ್ದ ಅಮೆರಿಕಾ ಕೌನ್ಸುಲೇಟ್ ಜನರಲ್

ಮೈಸೂರು: ಅರಮನೆಗೆ ಭೇಟಿ ನೀಡಿದ್ದ ಅಮೆರಿಕ ಕೌನ್ಸುಲೇಟ್ ಜನರಲ್, ದರ್ಬಾರ್ ಕುರ್ಚಿಗಳನ್ನು ಕಂಡು ಪುಳಕಿತಗೊಂಡಿದ್ದು ಮಾತ್ರವಲ್ಲದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.

ಈ ಕುರ್ಚಿಗಳ ವಿನ್ಯಾಸದ ಬಗೆಗೂ ವಿದೇಶಿಗರಿಗೆ ಅಪಾರ ಮೆಚ್ಚುಗೆ. ಕಾರಣ ಈ ಕುರ್ಚಿಯ ಮೇಲೆ ದೀರ್ಘಕಾಲ ಕುಳಿತರೂ ಬೆನ್ನು ನೋವಿನ ಸಮಸ್ಯೆ ಕಾಡದು ಎಂಬುದು ಅವರ ಭಾವನೆಯಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

35 seconds ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

6 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

15 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

34 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

43 mins ago