ಗೋಡೌನ್ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ
ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ ಕುರ್ಚಿಗಳ ಬಗ್ಗೆ ವಿಶೇಷ ವ್ಯಾಮೋಹ. ಈ ಸಲುವಾಗಿಯೇ ಫೋಟೋಕ್ಲಿಕ್ಕಿಸಿಕೊಳ್ಳುವುದನ್ನು ಮಾತ್ರ ಅವರು ಮರೆಯುವುದಿಲ್ಲ.
ಮೈಸೂರು ಮಹಾರಾಜರು ದರ್ಬಾರ್ ನಡೆಸುವ ವೇಳೆ ಗಣ್ಯರು ಆಸೀನರಾಗುವ ಸಲುವಾಗಿ ಬಳಸುತ್ತಿದ್ದ ದರ್ಬಾರ್ ಕುರ್ಚಿಗಳದ್ದೇ ಒಂದು ಇತಿಹಾಸ, ರಾಜರ ದರ್ಬಾರು ನಡೆಯುತ್ತಿದ್ದ ವೇಳೆ ಜನರು ರಾಜರನ್ನು ಆಗಿಂದಾಗ್ಗೆ ಕಾಣಬಹುದಾಗಿತ್ತು. ಈ ಕುರ್ಚಿಗಳು ತುಂಬಾ ಐತಿಹಾಸಿಕ ಮತ್ತು ಶ್ರೀಮಂತಿಕೆಯ ಪ್ರತೀಕವಾಗಿವೆ. ಈ ಕುರ್ಚಿಗಳನ್ನು ನವಾಬ್ ಖಾಸರತ್ತುಲ್ಲಾ ಖಾನ್ ಎಂಬ ಸ್ವಾತಂತ್ರ್ಯ ಹೋರಾಟ ಗಾರರ ಮನೆತನದವರು ತಯಾರಿಸಿದ್ದಾರೆ. ಅವುಗಳ ಮೇಲೆ ಅಲಂಕಾರಿಕ ಕುಸುರಿ ಕೆಲಸ, ಶಿಲಕಲೆಯನು ಕಾಣಬಹುದು.
ನೂರಾರು ವರ್ಷಗಳ ಹಿನ್ನೆಲೆಯುಳ್ಳ ಈ ದರ್ಬಾರ್ ಕುರ್ಚಿಗಳನ್ನು ಗೋಡೌನ್ನಲ್ಲಿ ಇರಿಸಲಾಗಿತ್ತು. ಇವು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಮಣ್ಯ ಅವರ ಕಣ್ಣಿಗೆ ಬಿದ್ದ ಮೇಲೆ ಈ ಕುರ್ಚಿಗಳಿಗೆ ಮತ್ತೆ ಗತ ವೈಭವ ಮರುಕಳಿಸಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ, ಮಹಾರಾಜರು ದರ್ಬಾರು ನಡೆಸುವಾಗ ಈ ಕುರ್ಚಿಗಳನ್ನು ಬಳಸಲಾಗುತ್ತಿತ್ತು. ದಿವಾನರುಗಳು ಸೇರಿದಂತೆ ಅರಮನೆಗೆ ಸೇರಿದ ಗಣ್ಯರು ಈ ಕುರ್ಚಿಯಲ್ಲಿ ಆಸೀನರಾಗುತ್ತಿದ್ದರು. ಸಿ.ರಂಗಚಾರ್ಲು, ದಿವಾನ್ ಪೂರ್ಣಯ್ಯ, ಸರ್ ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಹೀಗೆ ಅನೇಕರು ಈ ಕುರ್ಚಿಯಲ್ಲಿ ಕುಳಿತಿದ್ದಿರಬಹುದು, ಬಲ್ಲವರು ಯಾರು? ಆದ್ದರಿಂದ ಈ ಕುರ್ಚಿಗಳ ಮಹತ್ವ ಅರಿತು, ಗೋಡೌನ್ನಿಂದ ಅದನ್ನು ಅರಮನೆ ಮಂಡಳಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಅಂದಾಜು 200ಕ್ಕೂ ಹೆಚ್ಚು ಕುರ್ಚಿಗಳಿದ್ದು, ಈ ಪೈಕಿ ಅರ್ಧದಷ್ಟು ಕುರ್ಚಿಗಳು ದುರಸ್ತಿಯಲ್ಲಿವೆ. ಇವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಿದ್ದೇವೆ. ಈ ದರ್ಬಾರ್ ಕುರ್ಚಿಗಳನ್ನು ದಸರಾ ಅವಧಿಯಲ್ಲಿ ವಿಶೇಷವಾಗಿ ಅರಮನೆಯ ಖಾಸಗಿ ದರ್ಬಾರಿನ ವೇಳೆಯಲ್ಲಿ ಬಳಸಲಾಗುತ್ತದೆ. ಈ ಕುರ್ಚಿಗಳು, ಮೈಸೂರಿನ ರಾಜಕುಟುಂಬದ ವೈಭವ ಮತ್ತು ಪ್ರಖ್ಯಾತಿಯ ಸಂಕೇತವಾಗಿ ಇಂದು ಕೂಡ ಉಳಿದುಕೊಂಡಿವೆ.
ಟಿ.ಎಸ್. ಸುಬ್ರಹ್ಮಣ್ಯ,
ಅರಮನೆ ಮಂಡಳಿ ಉಪ ನಿರ್ದೇಶಕ
ಕುರ್ಚಿ ನೋಡಿ ಪುಳಕಿತಗೊಂಡಿದ್ದ ಅಮೆರಿಕಾ ಕೌನ್ಸುಲೇಟ್ ಜನರಲ್
ಮೈಸೂರು: ಅರಮನೆಗೆ ಭೇಟಿ ನೀಡಿದ್ದ ಅಮೆರಿಕ ಕೌನ್ಸುಲೇಟ್ ಜನರಲ್, ದರ್ಬಾರ್ ಕುರ್ಚಿಗಳನ್ನು ಕಂಡು ಪುಳಕಿತಗೊಂಡಿದ್ದು ಮಾತ್ರವಲ್ಲದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಹೇಳಿದರು.
ಈ ಕುರ್ಚಿಗಳ ವಿನ್ಯಾಸದ ಬಗೆಗೂ ವಿದೇಶಿಗರಿಗೆ ಅಪಾರ ಮೆಚ್ಚುಗೆ. ಕಾರಣ ಈ ಕುರ್ಚಿಯ ಮೇಲೆ ದೀರ್ಘಕಾಲ ಕುಳಿತರೂ ಬೆನ್ನು ನೋವಿನ ಸಮಸ್ಯೆ ಕಾಡದು ಎಂಬುದು ಅವರ ಭಾವನೆಯಾಗಿದೆ ಎಂದರು.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…